Homeಕರ್ನಾಟಕಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಸಿಎಂ ಬಸವರಾಜ್‌ ಬೊಮ್ಮಾಯಿಯವರು ಈ ಹಿಂದೆ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ ವಿಡಿಯೋ ವಿವಾದಕ್ಕೆ ಕಾರಣವಾಗಿತ್ತು.

- Advertisement -
- Advertisement -

ಮಂಗಳೂರಿನ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್‌‌‌‌‌ ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು ಶರಣ್ ವಿರುದ್ದ ತಕ್ಷಣವೆ ಎಫ್‌ಐಆರ್‌ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಯವರನ್ನು ಒತ್ತಾಯಿಸಲಾಗಿದೆ.

ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ಶರಣ್ ಪಂಪ್‌ವೆಲ್, “ಮುಸ್ಲಿಂ ಸಮುದಾಯದ ನಾಯಕರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಮುಸ್ಲಿಂ ಯುವಕರಿಗೆ ಬುದ್ದಿ ಹೇಳಬೇಕು, ಲವ್‌ ಜಿಹಾದ್ ಪ್ರಕರಣ ಮುಂದುವರೆದರೆ ಬೀದಿಗಿಳಿದು ನೇರವಾಗಿ ಅವರ ವಿರುದ್ದ ಹೋರಾಟ ಮಾಡುತ್ತೇವೆ’’ ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಅಲ್ಲದೆ “ಕರಾವಳಿಯಲ್ಲಿ ಶಾಂತಿಯಿರಬೇಕಾದರೆ ಮುಸ್ಲಿಂ ನಾಯಕರು ತಮ್ಮ ಯುವಕರಿಗೆ ಎಚ್ಚರಿಕೆ ಕೊಡುವಂತಹ ಕೆಲಸ ಮಾಡಬೇಕು. ಹಿಂದೂ ಯುವತಿಯರನ್ನು ಸೆಕ್ಸ್‌ ದಂಧೆ ಮತ್ತು ಡ್ರಗ್ಸ್‌ ದಂಧೆಗೆ ಬಳಸಿಕೊಳ್ಳುತ್ತಿದ್ದೀರಿ. ಇಡೀ ಮುಸ್ಲಿಂ ಸಮುದಾಯ ಭಯೋತ್ಪಾದನೆಗೆ ಬೆಂಬಲ ಕೊಡುತ್ತಿದ್ದೀರ ಎಂಬ ಸಂಶಯವಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವ!

ಅಷ್ಟೇ ಅಲ್ಲದೆ ಅದೇ ದಿನ ಮಾಧ್ಯಮಗಳಿಗೆ ನೀಡಿದ ಚುಟುಕು ಸಂದರ್ಶನಲ್ಲಿ, “ಮುಂದಿನ ದಿನಗಳಲ್ಲಿ ಹೋರಾಟವು ಆಗಬಹುದು ಅಥವಾ ಹೊಡೆದಾಟವು ಆಗಬಹುದು” ಎಂದು ಹಿಂಸಾಚಾರ ನಡೆಯುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶಗಳೆದ್ದಿದ್ದು, ಶರಣ್‌ ಪಂಪ್‌ವೆಲ್ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಗಳು ಕೇಳಿ ಬರುತ್ತಿದೆ. ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನವು, “ಮಾನ್ಯರೆ, ಈ ರಾಜ್ಯದ ಪ್ರಜೆಗಳಾದ ನಮಗೆ ಶಿಕ್ಷಣ, ಆಹಾರ, ಮಹಿಳೆಯರ ಸುರಕ್ಷತೆ, ಸಾರ್ವಜನಿಕ ಸಾರಿಗೆ, ಆರೋಗ್ಯ ಬೇಕು. ನಾವು ಈ ಕೋಮುವಾದಿ ರಾಜಕೀಯವನ್ನು ತಿರಸ್ಕರಿಸುತ್ತೇವೆ. ಶರಣ್ ಪಂಪ್‌ವೆಲ್ ವಿರುದ್ಧ ನೀವು ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ನಾವು ಬಯಸುತ್ತೇವೆ” ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಗೆ ಆಗ್ರಹಿಸಿದೆ.

ಪರ್ಯಾಯ ಕಾನೂನು ವೇದಿಕೆಯ ಸಂಚಾಲಕರಾದ ವಿನಯ್‌ ಶ್ರೀನಿವಾಸ್ ಅವರು, “ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕರ್ನಾಟಕದ ಡಿಜಿಪಿ ಅವರೇ, ಶರಣ್ ಪಂಪ್‌ವೆಲ್‌ ಸತ್ಯವನ್ನು ತಿರುಚುತ್ತಿದ್ದಾರೆ. ಅಲ್ಲದೆ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡುತ್ತಿದ್ದಾರೆ. ದಯವಿಟ್ಟು ಅವರ ವಿರುದ್ದ 153A, 295A, 505 (2) ಅಡಿಯಲ್ಲಿ ತಕ್ಷಣವೆ ಎಫ್ಐಆರ್ ಅನ್ನು ದಾಖಲಿಸಿರುವುದನ್ನು ಖಚಿತ ಪಡಿಸಿ” ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಶರಣ್ ಪಂಪ್‌ವೆಲ್ ಹಲವಾರು ಪಕ್ರರಣಗಳ ಆರೋಪಿಯಾಗಿದ್ದು, ಸದಾ ವಿವಾದಾತ್ಮಕವಾದ ಹೇಳಿಕೆಯನ್ನು ನೀಡುತ್ತಲೇ ಬಂದಿದ್ದಾರೆ. ಈಗಿನ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಯಡಿಯೂರಪ್ಪರ ಸಂಪುಟದಲ್ಲಿ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು.

ಇದೀಗ ಬೊಮ್ಮಾಯಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರದಂದು ಪ್ರಸ್ತುತ ರಾಜ್ಯದ ಗೃಹಮಂತ್ರಿಯಾಗಿರುವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ವಿರುದ್ದ ಇರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೇಳಿಕೊಂಡಿದ್ದಾರೆ.

ಬಿಜೆಪಿಯ ಹೊಸ ಸಂಪುಟ ರಚನೆಯಾಗುತ್ತಿದ್ದಂತೆ ಸಂಘಪರಿವಾರ ಮತ್ತು ಬಿಜೆಪಿಯ ಕಾರ್ಯಕರ್ತರ ವಿರುದ್ದದ ಪ್ರಕರಣಗಳನ್ನು ರದ್ದು ಪಡಿಸುವಂತೆ ಸಚಿವರೊಬ್ಬರೇ ಖುದ್ದಾಗಿ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದಾರೆ. ಇದರ ಜೊತೆಗೆ ಹಲವು ಪ್ರಕರಣಗಳ ಆರೋಪಿಯಾಗಿರುವ ಶರಣ್ ಪಂ‌ಪ್‌ವೆಲ್‌ ಬಹಿರಂಗವಾಗಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ, ಇದು ಏನನ್ನು ಪ್ರತಿಬಿಂಬಿಸುತ್ತದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...