Homeಕರ್ನಾಟಕಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ...

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

- Advertisement -
- Advertisement -

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.‌

ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.

ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ಸಿಎಂ ಹೇಳಿದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್ ಎಸ್‌ಎಸ್‌ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್‌ನಲ್ಲಿ ಉಳಿಯುತಾರೆ ಎನ್ನುವುದು ಅನುಮಾನ ಎಂದರು.

ಸ್ವಾತಂತ್ರ, ಸಮಾನತೆ, ಬ್ರಾತೃತ್ವ ಹಾಗೂ ಸಹಿಷ್ಣತೆ, ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ. ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದು ಹೇಳಿದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದರು.

ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರ ವಿರಲಿ ಎಂದು ಹೇಳಿದರು.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದು ತಿಳಿಸಿದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ, ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.

ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...