Homeಕರ್ನಾಟಕಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ...

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

- Advertisement -
- Advertisement -

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.‌

ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.

ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ಸಿಎಂ ಹೇಳಿದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್ ಎಸ್‌ಎಸ್‌ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್‌ನಲ್ಲಿ ಉಳಿಯುತಾರೆ ಎನ್ನುವುದು ಅನುಮಾನ ಎಂದರು.

ಸ್ವಾತಂತ್ರ, ಸಮಾನತೆ, ಬ್ರಾತೃತ್ವ ಹಾಗೂ ಸಹಿಷ್ಣತೆ, ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ. ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದು ಹೇಳಿದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದರು.

ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರ ವಿರಲಿ ಎಂದು ಹೇಳಿದರು.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದು ತಿಳಿಸಿದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ, ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.

ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...