Homeಕರ್ನಾಟಕಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ...

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

- Advertisement -
- Advertisement -

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.‌

ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.

ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ಸಿಎಂ ಹೇಳಿದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್ ಎಸ್‌ಎಸ್‌ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್‌ನಲ್ಲಿ ಉಳಿಯುತಾರೆ ಎನ್ನುವುದು ಅನುಮಾನ ಎಂದರು.

ಸ್ವಾತಂತ್ರ, ಸಮಾನತೆ, ಬ್ರಾತೃತ್ವ ಹಾಗೂ ಸಹಿಷ್ಣತೆ, ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ. ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದು ಹೇಳಿದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದರು.

ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರ ವಿರಲಿ ಎಂದು ಹೇಳಿದರು.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದು ತಿಳಿಸಿದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ, ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.

ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...