Homeಮುಖಪುಟಸಂಘಪರಿವಾರ ಮುಸ್ಲಿಮರು, ದಲಿತರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ: ಪಿಣರಾಯಿ ವಿಜಯನ್

ಸಂಘಪರಿವಾರ ಮುಸ್ಲಿಮರು, ದಲಿತರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ: ಪಿಣರಾಯಿ ವಿಜಯನ್

- Advertisement -
- Advertisement -

ಉತ್ತರಪ್ರದೇಶದಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯಲು ಸಹಪಾಠಿಗಳಿಗೆ ಸೂಚಿಸಿದ ಘಟನೆಯ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರತಿಕ್ರಿಯಿಸಿದ್ದು, ಇದು ಸಂಘಪರಿವಾರದ ಅಪಾಯಕಾರಿ ಕೋಮು ಪ್ರಚಾರದ ಅಪಾಯವನ್ನು ಎತ್ತಿತೋರಿಸುತ್ತದೆ. ಇದು ಅಲ್ಪಸಂಖ್ಯಾತರು ಮತ್ತು ದಲಿತರನ್ನು ಅಮಾನವೀಯವಾಗಿಸಲು ಮತ್ತು ಅವರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸುವ ಪ್ರಯತ್ನವಾಗಿದೆ. ಈ ಕೋಮು ಪ್ರಚಾರ ವ್ಯಕ್ತಿಯನ್ನು ಎಷ್ಟು ರಾಕ್ಷಸರನ್ನಾಗಿ ಮಾಡುತ್ತದೆ ಎಂಬುದನ್ನು ಘಟನೆ ಒತ್ತಿಹೇಳುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಸಿಎಂ ಪಿಣರಾಯ್ ವಿಜಯನ್,  ಕೋಮುವಾದವು ಅತ್ಯಂತ ಕೆಟ್ಟ ಮನಸ್ಥಿತಿಯಾಗಿದೆ. ಅದು ಅವನನ್ನು ಕೀಳುಮಟ್ಟಕ್ಕೆ ತರಬಹುದು. ಸಂಘಪರಿವಾರದ ಸಿದ್ಧಾಂತದ ವಿರುದ್ಧ ನಾವು ಪ್ರಬಲವಾದ ಬೇಲಿ ಕಟ್ಟಬೇಕು . ಈ ವಿಚಾರದಲ್ಲಿ ಜಾತ್ಯಾತೀತತೆಯ ಜನರು ಜವಾಬ್ಧಾರಿ ಅರಿತು ಒಂದಾಗಬೇಕು ಎಂದು ಹೇಳಿದ್ದಾರೆ.

ಕೋಮುವಾದ ಮತ್ತು ಫ್ಯಾಸಿಸಂ ಮನುಷ್ಯನ ಕೊನೆಯ ಹನಿಯ ಪ್ರೀತಿಯನ್ನು ಕೂಡ ಹೀರಬಲ್ಲವು  ಎಂಬುದನ್ನು ಈ ಘಟನೆ ನಮಗೆ ನೆನಪಿಸುತ್ತದೆ ಎಂದು ಅವರು ಹೇಳಿದರು.

ಆ ಶಿಕ್ಷಕಿಗೆ ಎಷ್ಟು ಕೋಮು ವಿಷವು ಆವರಿಸಿರಬಹುದು? ಏಳು ವರ್ಷದ ಬಾಲಕನನ್ನು ಆತನ ಧರ್ಮದ ಕಾರಣಕ್ಕೆ ಮಾತ್ರ ಶಿಕ್ಷಿಸಿಲ್ಲ. ಅನ್ಯ ಧರ್ಮದ ವಿದ್ಯಾರ್ಥಿಗಳಿಗೆ ಆತನಿಗೆ  ಶಿಕ್ಷೆಯನ್ನು ಕೊಡುವಂತೆ ಕೇಳಲಾಗಿದೆ ಎಂದು ಅವರು ಹೇಳಿದರು.

ಮುಜಾಫರ್‌ನಗರದಲ್ಲಿ ನಡೆದ ಘಟನೆ ಮೊದಲಲ್ಲ, ಪ್ರಜಾಪ್ರಭುತ್ವದ ಶ್ರೇಷ್ಠ ಉದಾಹರಣೆಯಾಗಿರುವ ಭಾರತವನ್ನು ದ್ವೇಷದ ನೆಲವನ್ನಾಗಿ ಪರಿವರ್ತಿಸಲು ಹಿಂದುತ್ವ ಕೋಮುವಾದ ಪ್ರಯತ್ನಿಸುತ್ತಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಮಣಿಪುರದ ವರದಿಗಳು ಅದನ್ನು ಸಮರ್ಥಿಸುತ್ತವೆ ಎಂದು ಕೇರಳ ಸಿಎಂ ಪಿಣರಾಯ್ ವಿಜಯನ್ ಸಂಘಪರಿವಾರದ ವಿರುದ್ಧ ಟೀಕಿಸಿದ್ದಾರೆ.

ಇದನ್ನು ಓದಿ: ಗುರುಗ್ರಾಮ: ಮುಸ್ಲಿಮರಿಗೆ ಮನೆ ತೊರೆಯುವಂತೆ ಪೋಸ್ಟರ್ ಮೂಲಕ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...