Homeಮುಖಪುಟಒಕ್ಕಲಿಗರ ರಾಜಧಾನಿಯ ಮೇಲೆ ವೈದಿಕಶಾಹಿಯ ಕಣ್ಣು: ಮಂಡ್ಯಕ್ಕೇನು ಕಾದಿದೆ?

ಒಕ್ಕಲಿಗರ ರಾಜಧಾನಿಯ ಮೇಲೆ ವೈದಿಕಶಾಹಿಯ ಕಣ್ಣು: ಮಂಡ್ಯಕ್ಕೇನು ಕಾದಿದೆ?

- Advertisement -
- Advertisement -

ಮಂಡ್ಯದ ಒಕ್ಕಲಿಗರು ಕುವೆಂಪು ಅವರ ಕಟ್ಟಾ ಅನುಯಾಯಿಗಳೇನೂ ಅಲ್ಲ. ಆದರೆ, ಇಲ್ಲಿನ ಮುಖ್ಯವಾಹಿನಿ ಪ್ರಜ್ಞೆಯು ವೈದಿಕಶಾಹಿಯ ಪದತಲದಲ್ಲಿ ಶರಣಾಗಿಲ್ಲ. ಅದು 30 ವರ್ಷಗಳ ಕೆಳಗೆ ಹೇಗೋ ಇಂದಿಗೂ ಹಾಗೆಯೇ ಇದೆ. ಇದೇ ಮಾತನ್ನು ರಾಜ್ಯದ ಉಳಿದೆಲ್ಲಾ ಜಿಲ್ಲೆಗಳ ವಿಚಾರದಲ್ಲಿ ಹೇಳುವ ಹಾಗಿಲ್ಲ. ಕಳೆದ 30 ವರ್ಷಗಳಲ್ಲಿ ಉಳಿದ ಜಿಲ್ಲೆಗಳ ಅಧ್ಯಾಪಕರು, ಸಾಹಿತಿಗಳ ಒಂದು ವಿಭಾಗ, ಪತ್ರಕರ್ತರು ಮತ್ತಿತರ ಸುಶಿಕ್ಷಿತ ವರ್ಗ ನಿಧಾನಕ್ಕೆ ವೈದಿಕರ ಬಾಲಂಗೋಚಿಗಳಾಗುತ್ತಾ ನಡೆದರು. ಅದರ ಭಾಗವಾಗಿ ಅಲ್ಲಿ ಆರೆಸ್ಸೆಸ್ ಚಿಂತನೆ ಹಾಗೂ ಬಿಜೆಪಿಯೂ ಬೆಳೆಯುತ್ತಾ ಸಾಗಿದವು. ಆದರೆ ಮಂಡ್ಯದಲ್ಲಿ ಇವ್ಯಾವುವೂ ಆಗಿರಲಿಲ್ಲ.

ಒಕ್ಕಲಿಗ ಪ್ರಾಧಾನ್ಯತೆ ಮಂಡ್ಯಕ್ಕೆ ಮಾತ್ರ ಸೀಮಿತವಾದದ್ದೇನಲ್ಲ. ದಕ್ಷಿಣದ ಏಳೆಂಟು ಜಿಲ್ಲೆಗಳಲ್ಲಿ ಒಕ್ಕಲಿಗರು ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ರಾಜಕೀಯವಾಗಿ ಬಲಾಢ್ಯರು. ಹಾಸನ ಮತ್ತು ರಾಮನಗರಗಳು ‘ಒಕ್ಕಲಿಗ ಪಕ್ಷ’ವೆಂದು ಹೆಸರಾದ ಜೆಡಿಎಸ್‍ನ ನಾಯಕರುಗಳನ್ನು ಸತತವಾಗಿ ಆರಿಸಿ ಕಳಿಸಿದ ಜಿಲ್ಲೆಗಳು. ಆದರೂ ಮಂಡ್ಯವೇ ಈ ವಿದ್ಯಮಾನದ ರಾಜಧಾನಿ.

ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಹಿಡಿಯಲು ದಕ್ಷಿಣ ಕರ್ನಾಟಕದಲ್ಲಿ ಪ್ರಾಬಲ್ಯ ಬೆಳೆಸಿಕೊಳ್ಳುವುದು ಬಿಜೆಪಿಗೆ ಅನಿವಾರ್ಯ. ಬಿಜೆಪಿ ಪ್ರಬಲವಾಗುವುದೆಂದರೆ ಕೆಲವು ವಿರೋಧ ಪಕ್ಷಗಳ ನಾಯಕರುಗಳನ್ನು ತನ್ನೆಡೆಗೆ ಸೆಳೆದುಕೊಳ್ಳುವುದು ಮಾತ್ರವಲ್ಲಾ. ತನ್ನ ಐಡಿಯಾಲಜಿಯನ್ನೂ ಅಲ್ಲಿ ಸ್ಥಾಪಿಸುವುದು. ಹಾಗೆ ಮಾಡಿದಾಗ ಮಾತ್ರ ಈ ಸಾರಿ ದಕ್ಷಿಣ ಕನ್ನಡದಲ್ಲಿ ಆದಂತೆ ಯಾರನ್ನೇ ಚುನಾವಣೆಗೆ ನಿಲ್ಲಿಸಿದರೂ ಅಲ್ಲಿಂದ ಗೆದ್ದು ಬರುವಂತೆ ಮಾಡಿಕೊಳ್ಳಬಹುದು. ಈ ಎಲ್ಲಾ ದೃಷ್ಟಿಯಿಂದ ಆರೆಸ್ಸೆಸ್‍ಗೆ ತನ್ನ ಚಿಂತನೆಯನ್ನು ಹರಡಲು ಮಂಡ್ಯ ಮತ್ತು ಸುತ್ತಲಿನ ಜಿಲ್ಲೆಗಳು ಬಹುಮುಖ್ಯ. ಕನಕಪುರದಲ್ಲಿ ಏಸು ಪ್ರತಿಮೆಯ ವಿಚಾರದಲ್ಲಿ ಗಲಭೆ ಎಬ್ಬಿಸಲು ಕಲ್ಲಡ್ಕ ಪ್ರಭಾಕರ ಭಟ್ಟರೇ ರಂಗಕ್ಕಿಳಿದಿರುವುದೂ ಆ ಉದ್ದೇಶದಿಂದಲೇ. ಈಗ ‘ಅವರು ಬಂದು ಇಲ್ಲಿ ಏನು ಮಾಡಿಕೊಳ್ಳಲೂ ಸಾಧ್ಯವಿಲ್ಲ’ ಎಂಬಂತೆ ವರ್ತಿಸುತ್ತಿರುವ ಡಿ.ಕೆ.ಬ್ರದರ್ಸ್‍ಗೆ ಇನ್ನು ನಾಲ್ಕೈದು ವರ್ಷಗಳಲ್ಲೇ ಆಘಾತವಾಗುವಂತೆ ಅವರ ವಿರುದ್ಧ ಅಲೆ ಬೀಸುವಂತೆ ಮಾಡುವುದು ಸಂಘಪರಿವಾರಕ್ಕೆ ಕಷ್ಟವಿಲ್ಲ.

ಅದೇ ರೀತಿ ಮಂಡ್ಯದ ಮೇಲೆ ಆರೆಸ್ಸೆಸ್‍ನ ಕಣ್ಣು ಬಿದ್ದಿರುವುದಕ್ಕೂ ಇದೇ ಕಾರಣವಿದೆ. ಮೊದಲು ಅವರು ಗುರಿ ಮಾಡಿಕೊಂಡಿದ್ದು ಆದಿಚುಂಚನಗಿರಿ ಮಠದ ಮೇಲೆ. ಮೂಲತಃ ನಾಥಪರಂಪರೆಗೆ ಸೇರಿದ ಈ ಮಠವು ಅವೈದಿಕ ನೆಲೆಯದ್ದಾಗಿತ್ತು. ಆದರೆ ಎಲ್ಲಾ ಬ್ರಾಹ್ಮಣೇತರ ಜಾತಿಗಳಿಗೂ, ಅದರಲ್ಲೂ ಅಂತಹ ಮಠಗಳಿಗೆ ತಾವು ಬ್ರಾಹ್ಮಣಶಾಹಿಯ ಜೊತೆಗೆ ಗುರುತಿಸಿಕೊಂಡರೇನೇ ಮಾನ್ಯತೆ ಎಂಬ ಭಾವನೆ. ಇದು ಕೀಳರಿಮೆಯಿಂದ ಕೂಡಿದ್ದೋ ಅಥವಾ ಅಧಿಕಾರದ ಹಂಬಲದಿಂದ ಬಂದಿದ್ದೋ ಹೇಳುವುದು ಕಷ್ಟ. ಹೀಗಾಗಿ ಬಾಲಗಂಗಾಧರನಾಥರನ್ನೇ ಆರೆಸ್ಸೆಸ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಕಷ್ಟವಾಗಿರಲಿಲ್ಲ.

ಈಗಂತೂ ಈ ವಿಚಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಗೌರಿ ಲಂಕೇಶ್ ಮರ್ಡರ್ ಕೇಸಿನಲ್ಲಿ ಬಂಧಿತನಾಗಿರುವ ಹೊಟ್ಟೆ ನವೀನನನ್ನು ಸನಾತನ ಸಂಸ್ಥೆಯ ಸುಜಿತ್ ಅಲಿಯಾಸ್ ಪ್ರವೀಣ್ ಮಾತಾಡಿಸಿ ಗೌರಿ ಲಂಕೇಶ್ ಹತ್ಯೆಯ ಯೋಜನೆಯ ಸುದ್ದಿ ತಿಳಿಸಿದ್ದು ವಿಜಯನಗರದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಬಂದಿದ್ದಾಗಲೇ. ಅಲ್ಲಿ ಹಿಂದೂ ಜನಜಾಗೃತಿ ಸಮಿತಿ ಎಂಬ ಸನಾತನ ಸಂಸ್ಥೆಯ ಸೋದರ ಸಂಘಟನೆಯ ಕಾರ್ಯಕ್ರಮಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಆರೆಸ್ಸೆಸ್ ಮತ್ತು ಸನಾತನ ಸಂಸ್ಥೆಗಳು ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರಿಸಿಕೊಂಡರೂ, ಅಸಲೀ ಸತ್ಯ ಗೊತ್ತಿದ್ದವರಿಗೆಲ್ಲಾ ಗೊತ್ತಿದೆ.

ಗೌರಿ ಲಂಕೇಶರ ಹತ್ಯೆಯ ಕೇಸಿನ ವಿಚಾರಣೆಯಲ್ಲಿ ಹೊಟ್ಟೆ ನವೀನನನ್ನು ಇಲ್ಲಿಯೇ ಮಾತಾಡಿಸಲಾಯಿತು ಎಂಬುದು ಚಾರ್ಜ್‍ಶೀಟ್‍ನಲ್ಲಿ ಪ್ರಸ್ತಾಪವಾದ ನಂತರವೂ, ಈ ಮಠದಲ್ಲಿ ಎರಡು ಸಭೆಗಳು ನಡೆದಿವೆ. ಜಯಂತ್ ಬಾಲಾಜಿ ಅತಾವಳೆ ಸನಾತನ ಸಂಸ್ಥೆಯ ಸ್ಥಾಪಕನ ಜಯಂತಿಯು 2019ರ ಮೇ 18ರಂದು ನಡೆಯಿತು ಮತ್ತು ಆ ಕಾರ್ಯಕ್ರಮದಲ್ಲಿ ಮಠದ ಉಸ್ತುವಾರಿ ಸೌಮ್ಯನಾಥ ಸ್ವಾಮೀಜಿಯೂ ಪಾಲ್ಗೊಂಡು ಭಾಷಣ ಮಾಡಿದರು. ಅದರಲ್ಲಿ ಅತಾವಳೆಯನ್ನೂ ಹೊಗಳಿ ಮಾತಾಡಿದರು. ಅವರ ಸಾರ್ಥಕ ಬದುಕು ಮತ್ತು ಮಾರ್ಗದರ್ಶನವು ಹಿಂದೂ ಸಮಾಜಕ್ಕೆ ಬೇಕೆಂದು ಹೇಳಿದರು. ಅಂದ ಹಾಗೆ ಈ ಹೊಟ್ಟೆ ನವೀನ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಡುಗ ಮತ್ತು ಇದೀಗ ಪಶ್ಚಾತ್ತಾಪ ಪಡುತ್ತಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

ಒಕ್ಕಲಿಗರ ಮೇಲೆ ಕೇಂದ್ರೀಕರಿಸಬೇಕು ಎಂಬ ಉದ್ದೇಶ ಇರುವುದರಿಂದ ಮತ್ತು ಆ ಕೆಲಸವನ್ನು ಇದುವರೆಗೆ ಆರ್.ಅಶೋಕ್ ಯಶಸ್ವಿಯಾಗಿ ಮಾಡಿಲ್ಲ ಹಾಗೂ ಸಿ.ಟಿ.ರವಿ ಮೈಸೂರು ಭಾಗದಲ್ಲಿ ಇದನ್ನು ಮಾಡುವುದು ಸುಲಭವಿಲ್ಲ ಎಂಬ ಕಾರಣದಿಂದಲೇ ಬೆಂಗಳೂರಿನ ಸಿ.ಎನ್.ಅಶ್ವತ್ಥನಾರಾಯಣರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ ಎಂಬುದನ್ನೂ ಇಲ್ಲಿ ಗಮನಿಸಬೇಕು.

ಇವೆಲ್ಲದರ ಮುಂದುವರೆದ ಭಾಗವಾಗಿಯೇ ಮಂಡ್ಯದಿಂದ ಕೇವಲ 3 ಕಿ.ಮೀ. ದೂರವಿರುವ ಸಾತನೂರಿನಲ್ಲಿ ಇದೀಗ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಎಂಬ ಸಂಘಪರಿವಾರದ ಅಷ್ಟು ಪ್ರಚಾರದಲ್ಲಿಲ್ಲದ ಅಂಗಸಂಘಟನೆಯೊಂದು ‘ರಾಷ್ಟ್ರೀಯವಾದಿಗಳ ಸಮ್ಮೇಳನ’ವನ್ನು ಆಯೋಜಿಸಿದೆ. ಅದರಲ್ಲಿ ಪೌರತ್ವ ಕಾಯ್ದೆಯ ವಿಚಾರದಿಂದ ಹಿಡಿದು, ಟಿಪ್ಪು ಮತ್ತು ಮೇಲುಕೋಟೆಯ ತನಕ ಹತ್ತು ಹಲವು ಸಂಗತಿಗಳನ್ನು ಚರ್ಚಿಸಲಾಗಿದೆ. ಕಳೆದ ತಿಂಗಳು (ಫೆ.23) ನಡೆದ ಈ ಕಾರ್ಯಕ್ರಮದಲ್ಲಿ ‘ಕಾವೇರಿ ಡಿಬೇಟ್’ ಕುರಿತಾದ ಕ್ರಿಯಾಯೋಜನೆಯನ್ನು ಮಂಡಿಸಲಾಗಿದೆ. ಅಂದರೆ ಕಾವೇರಿ ಬೆಲ್ಟ್‌ಅನ್ನು ಕೇಂದ್ರೀಕರಿಸುತ್ತಿರುವ ಹಿನ್ನೆಲೆಯಲ್ಲಿ ತಮಗೆ ಬೇಕಾದ ಕಥನವನ್ನು ಸೃಷ್ಟಿಸುವ ಕೆಲಸ ಯೋಜಿತವಾಗಿ ಸಾಗಿದೆ ಎಂಬುದರಲ್ಲಿ ಸಂಶಯವೇ ಇಲ್ಲ.

ಸಂಘಪರಿವಾರದ ಬೆಳವಣಿಗೆಗೆ ಬೇಕಾದ ವ್ಯವಸ್ಥಿತ ಯೋಜನೆಯೊಂದು ಸದ್ದಿಲ್ಲದೇ ಜಾರಿಯಾಗುತ್ತಿದೆ ಎಂಬುದನ್ನು ಮೇಲಿನ ಹಲವು ಸಂಗತಿಗಳು ಬಿಚ್ಚಿಡುತ್ತಿವೆ. ಹತ್ತು ಹಲವು ಬಗೆಯಲ್ಲಿ ವಿಘಟಿತವಾಗಿರುವ ‘ಮಂಡ್ಯ ಪ್ರಜ್ಞೆ’ಯ ಪ್ರತಿನಿಧಿಗಳು ಇದನ್ನು ವ್ಯವಸ್ಥಿತವಾಗಿ ಎದುರಿಸಬಲ್ಲರೇ ಎಂಬುದು ಮುಂದಿನ ದಿನಗಳಲ್ಲಿ ತೀರ್ಮಾನವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...