Homeಮುಖಪುಟಒಕ್ಕಲಿಗರ ರಾಜಧಾನಿಯ ಮೇಲೆ ವೈದಿಕಶಾಹಿಯ ಕಣ್ಣು: ಮಂಡ್ಯಕ್ಕೇನು ಕಾದಿದೆ?

ಒಕ್ಕಲಿಗರ ರಾಜಧಾನಿಯ ಮೇಲೆ ವೈದಿಕಶಾಹಿಯ ಕಣ್ಣು: ಮಂಡ್ಯಕ್ಕೇನು ಕಾದಿದೆ?

- Advertisement -
- Advertisement -

ಮಂಡ್ಯದ ಒಕ್ಕಲಿಗರು ಕುವೆಂಪು ಅವರ ಕಟ್ಟಾ ಅನುಯಾಯಿಗಳೇನೂ ಅಲ್ಲ. ಆದರೆ, ಇಲ್ಲಿನ ಮುಖ್ಯವಾಹಿನಿ ಪ್ರಜ್ಞೆಯು ವೈದಿಕಶಾಹಿಯ ಪದತಲದಲ್ಲಿ ಶರಣಾಗಿಲ್ಲ. ಅದು 30 ವರ್ಷಗಳ ಕೆಳಗೆ ಹೇಗೋ ಇಂದಿಗೂ ಹಾಗೆಯೇ ಇದೆ. ಇದೇ ಮಾತನ್ನು ರಾಜ್ಯದ ಉಳಿದೆಲ್ಲಾ ಜಿಲ್ಲೆಗಳ ವಿಚಾರದಲ್ಲಿ ಹೇಳುವ ಹಾಗಿಲ್ಲ. ಕಳೆದ 30 ವರ್ಷಗಳಲ್ಲಿ ಉಳಿದ ಜಿಲ್ಲೆಗಳ ಅಧ್ಯಾಪಕರು, ಸಾಹಿತಿಗಳ ಒಂದು ವಿಭಾಗ, ಪತ್ರಕರ್ತರು ಮತ್ತಿತರ ಸುಶಿಕ್ಷಿತ ವರ್ಗ ನಿಧಾನಕ್ಕೆ ವೈದಿಕರ ಬಾಲಂಗೋಚಿಗಳಾಗುತ್ತಾ ನಡೆದರು. ಅದರ ಭಾಗವಾಗಿ ಅಲ್ಲಿ ಆರೆಸ್ಸೆಸ್ ಚಿಂತನೆ ಹಾಗೂ ಬಿಜೆಪಿಯೂ ಬೆಳೆಯುತ್ತಾ ಸಾಗಿದವು. ಆದರೆ ಮಂಡ್ಯದಲ್ಲಿ ಇವ್ಯಾವುವೂ ಆಗಿರಲಿಲ್ಲ.

ಒಕ್ಕಲಿಗ ಪ್ರಾಧಾನ್ಯತೆ ಮಂಡ್ಯಕ್ಕೆ ಮಾತ್ರ ಸೀಮಿತವಾದದ್ದೇನಲ್ಲ. ದಕ್ಷಿಣದ ಏಳೆಂಟು ಜಿಲ್ಲೆಗಳಲ್ಲಿ ಒಕ್ಕಲಿಗರು ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ರಾಜಕೀಯವಾಗಿ ಬಲಾಢ್ಯರು. ಹಾಸನ ಮತ್ತು ರಾಮನಗರಗಳು ‘ಒಕ್ಕಲಿಗ ಪಕ್ಷ’ವೆಂದು ಹೆಸರಾದ ಜೆಡಿಎಸ್‍ನ ನಾಯಕರುಗಳನ್ನು ಸತತವಾಗಿ ಆರಿಸಿ ಕಳಿಸಿದ ಜಿಲ್ಲೆಗಳು. ಆದರೂ ಮಂಡ್ಯವೇ ಈ ವಿದ್ಯಮಾನದ ರಾಜಧಾನಿ.

ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಹಿಡಿಯಲು ದಕ್ಷಿಣ ಕರ್ನಾಟಕದಲ್ಲಿ ಪ್ರಾಬಲ್ಯ ಬೆಳೆಸಿಕೊಳ್ಳುವುದು ಬಿಜೆಪಿಗೆ ಅನಿವಾರ್ಯ. ಬಿಜೆಪಿ ಪ್ರಬಲವಾಗುವುದೆಂದರೆ ಕೆಲವು ವಿರೋಧ ಪಕ್ಷಗಳ ನಾಯಕರುಗಳನ್ನು ತನ್ನೆಡೆಗೆ ಸೆಳೆದುಕೊಳ್ಳುವುದು ಮಾತ್ರವಲ್ಲಾ. ತನ್ನ ಐಡಿಯಾಲಜಿಯನ್ನೂ ಅಲ್ಲಿ ಸ್ಥಾಪಿಸುವುದು. ಹಾಗೆ ಮಾಡಿದಾಗ ಮಾತ್ರ ಈ ಸಾರಿ ದಕ್ಷಿಣ ಕನ್ನಡದಲ್ಲಿ ಆದಂತೆ ಯಾರನ್ನೇ ಚುನಾವಣೆಗೆ ನಿಲ್ಲಿಸಿದರೂ ಅಲ್ಲಿಂದ ಗೆದ್ದು ಬರುವಂತೆ ಮಾಡಿಕೊಳ್ಳಬಹುದು. ಈ ಎಲ್ಲಾ ದೃಷ್ಟಿಯಿಂದ ಆರೆಸ್ಸೆಸ್‍ಗೆ ತನ್ನ ಚಿಂತನೆಯನ್ನು ಹರಡಲು ಮಂಡ್ಯ ಮತ್ತು ಸುತ್ತಲಿನ ಜಿಲ್ಲೆಗಳು ಬಹುಮುಖ್ಯ. ಕನಕಪುರದಲ್ಲಿ ಏಸು ಪ್ರತಿಮೆಯ ವಿಚಾರದಲ್ಲಿ ಗಲಭೆ ಎಬ್ಬಿಸಲು ಕಲ್ಲಡ್ಕ ಪ್ರಭಾಕರ ಭಟ್ಟರೇ ರಂಗಕ್ಕಿಳಿದಿರುವುದೂ ಆ ಉದ್ದೇಶದಿಂದಲೇ. ಈಗ ‘ಅವರು ಬಂದು ಇಲ್ಲಿ ಏನು ಮಾಡಿಕೊಳ್ಳಲೂ ಸಾಧ್ಯವಿಲ್ಲ’ ಎಂಬಂತೆ ವರ್ತಿಸುತ್ತಿರುವ ಡಿ.ಕೆ.ಬ್ರದರ್ಸ್‍ಗೆ ಇನ್ನು ನಾಲ್ಕೈದು ವರ್ಷಗಳಲ್ಲೇ ಆಘಾತವಾಗುವಂತೆ ಅವರ ವಿರುದ್ಧ ಅಲೆ ಬೀಸುವಂತೆ ಮಾಡುವುದು ಸಂಘಪರಿವಾರಕ್ಕೆ ಕಷ್ಟವಿಲ್ಲ.

ಅದೇ ರೀತಿ ಮಂಡ್ಯದ ಮೇಲೆ ಆರೆಸ್ಸೆಸ್‍ನ ಕಣ್ಣು ಬಿದ್ದಿರುವುದಕ್ಕೂ ಇದೇ ಕಾರಣವಿದೆ. ಮೊದಲು ಅವರು ಗುರಿ ಮಾಡಿಕೊಂಡಿದ್ದು ಆದಿಚುಂಚನಗಿರಿ ಮಠದ ಮೇಲೆ. ಮೂಲತಃ ನಾಥಪರಂಪರೆಗೆ ಸೇರಿದ ಈ ಮಠವು ಅವೈದಿಕ ನೆಲೆಯದ್ದಾಗಿತ್ತು. ಆದರೆ ಎಲ್ಲಾ ಬ್ರಾಹ್ಮಣೇತರ ಜಾತಿಗಳಿಗೂ, ಅದರಲ್ಲೂ ಅಂತಹ ಮಠಗಳಿಗೆ ತಾವು ಬ್ರಾಹ್ಮಣಶಾಹಿಯ ಜೊತೆಗೆ ಗುರುತಿಸಿಕೊಂಡರೇನೇ ಮಾನ್ಯತೆ ಎಂಬ ಭಾವನೆ. ಇದು ಕೀಳರಿಮೆಯಿಂದ ಕೂಡಿದ್ದೋ ಅಥವಾ ಅಧಿಕಾರದ ಹಂಬಲದಿಂದ ಬಂದಿದ್ದೋ ಹೇಳುವುದು ಕಷ್ಟ. ಹೀಗಾಗಿ ಬಾಲಗಂಗಾಧರನಾಥರನ್ನೇ ಆರೆಸ್ಸೆಸ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಕಷ್ಟವಾಗಿರಲಿಲ್ಲ.

ಈಗಂತೂ ಈ ವಿಚಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಗೌರಿ ಲಂಕೇಶ್ ಮರ್ಡರ್ ಕೇಸಿನಲ್ಲಿ ಬಂಧಿತನಾಗಿರುವ ಹೊಟ್ಟೆ ನವೀನನನ್ನು ಸನಾತನ ಸಂಸ್ಥೆಯ ಸುಜಿತ್ ಅಲಿಯಾಸ್ ಪ್ರವೀಣ್ ಮಾತಾಡಿಸಿ ಗೌರಿ ಲಂಕೇಶ್ ಹತ್ಯೆಯ ಯೋಜನೆಯ ಸುದ್ದಿ ತಿಳಿಸಿದ್ದು ವಿಜಯನಗರದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಬಂದಿದ್ದಾಗಲೇ. ಅಲ್ಲಿ ಹಿಂದೂ ಜನಜಾಗೃತಿ ಸಮಿತಿ ಎಂಬ ಸನಾತನ ಸಂಸ್ಥೆಯ ಸೋದರ ಸಂಘಟನೆಯ ಕಾರ್ಯಕ್ರಮಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಆರೆಸ್ಸೆಸ್ ಮತ್ತು ಸನಾತನ ಸಂಸ್ಥೆಗಳು ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರಿಸಿಕೊಂಡರೂ, ಅಸಲೀ ಸತ್ಯ ಗೊತ್ತಿದ್ದವರಿಗೆಲ್ಲಾ ಗೊತ್ತಿದೆ.

ಗೌರಿ ಲಂಕೇಶರ ಹತ್ಯೆಯ ಕೇಸಿನ ವಿಚಾರಣೆಯಲ್ಲಿ ಹೊಟ್ಟೆ ನವೀನನನ್ನು ಇಲ್ಲಿಯೇ ಮಾತಾಡಿಸಲಾಯಿತು ಎಂಬುದು ಚಾರ್ಜ್‍ಶೀಟ್‍ನಲ್ಲಿ ಪ್ರಸ್ತಾಪವಾದ ನಂತರವೂ, ಈ ಮಠದಲ್ಲಿ ಎರಡು ಸಭೆಗಳು ನಡೆದಿವೆ. ಜಯಂತ್ ಬಾಲಾಜಿ ಅತಾವಳೆ ಸನಾತನ ಸಂಸ್ಥೆಯ ಸ್ಥಾಪಕನ ಜಯಂತಿಯು 2019ರ ಮೇ 18ರಂದು ನಡೆಯಿತು ಮತ್ತು ಆ ಕಾರ್ಯಕ್ರಮದಲ್ಲಿ ಮಠದ ಉಸ್ತುವಾರಿ ಸೌಮ್ಯನಾಥ ಸ್ವಾಮೀಜಿಯೂ ಪಾಲ್ಗೊಂಡು ಭಾಷಣ ಮಾಡಿದರು. ಅದರಲ್ಲಿ ಅತಾವಳೆಯನ್ನೂ ಹೊಗಳಿ ಮಾತಾಡಿದರು. ಅವರ ಸಾರ್ಥಕ ಬದುಕು ಮತ್ತು ಮಾರ್ಗದರ್ಶನವು ಹಿಂದೂ ಸಮಾಜಕ್ಕೆ ಬೇಕೆಂದು ಹೇಳಿದರು. ಅಂದ ಹಾಗೆ ಈ ಹೊಟ್ಟೆ ನವೀನ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಡುಗ ಮತ್ತು ಇದೀಗ ಪಶ್ಚಾತ್ತಾಪ ಪಡುತ್ತಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

ಒಕ್ಕಲಿಗರ ಮೇಲೆ ಕೇಂದ್ರೀಕರಿಸಬೇಕು ಎಂಬ ಉದ್ದೇಶ ಇರುವುದರಿಂದ ಮತ್ತು ಆ ಕೆಲಸವನ್ನು ಇದುವರೆಗೆ ಆರ್.ಅಶೋಕ್ ಯಶಸ್ವಿಯಾಗಿ ಮಾಡಿಲ್ಲ ಹಾಗೂ ಸಿ.ಟಿ.ರವಿ ಮೈಸೂರು ಭಾಗದಲ್ಲಿ ಇದನ್ನು ಮಾಡುವುದು ಸುಲಭವಿಲ್ಲ ಎಂಬ ಕಾರಣದಿಂದಲೇ ಬೆಂಗಳೂರಿನ ಸಿ.ಎನ್.ಅಶ್ವತ್ಥನಾರಾಯಣರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ ಎಂಬುದನ್ನೂ ಇಲ್ಲಿ ಗಮನಿಸಬೇಕು.

ಇವೆಲ್ಲದರ ಮುಂದುವರೆದ ಭಾಗವಾಗಿಯೇ ಮಂಡ್ಯದಿಂದ ಕೇವಲ 3 ಕಿ.ಮೀ. ದೂರವಿರುವ ಸಾತನೂರಿನಲ್ಲಿ ಇದೀಗ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಎಂಬ ಸಂಘಪರಿವಾರದ ಅಷ್ಟು ಪ್ರಚಾರದಲ್ಲಿಲ್ಲದ ಅಂಗಸಂಘಟನೆಯೊಂದು ‘ರಾಷ್ಟ್ರೀಯವಾದಿಗಳ ಸಮ್ಮೇಳನ’ವನ್ನು ಆಯೋಜಿಸಿದೆ. ಅದರಲ್ಲಿ ಪೌರತ್ವ ಕಾಯ್ದೆಯ ವಿಚಾರದಿಂದ ಹಿಡಿದು, ಟಿಪ್ಪು ಮತ್ತು ಮೇಲುಕೋಟೆಯ ತನಕ ಹತ್ತು ಹಲವು ಸಂಗತಿಗಳನ್ನು ಚರ್ಚಿಸಲಾಗಿದೆ. ಕಳೆದ ತಿಂಗಳು (ಫೆ.23) ನಡೆದ ಈ ಕಾರ್ಯಕ್ರಮದಲ್ಲಿ ‘ಕಾವೇರಿ ಡಿಬೇಟ್’ ಕುರಿತಾದ ಕ್ರಿಯಾಯೋಜನೆಯನ್ನು ಮಂಡಿಸಲಾಗಿದೆ. ಅಂದರೆ ಕಾವೇರಿ ಬೆಲ್ಟ್‌ಅನ್ನು ಕೇಂದ್ರೀಕರಿಸುತ್ತಿರುವ ಹಿನ್ನೆಲೆಯಲ್ಲಿ ತಮಗೆ ಬೇಕಾದ ಕಥನವನ್ನು ಸೃಷ್ಟಿಸುವ ಕೆಲಸ ಯೋಜಿತವಾಗಿ ಸಾಗಿದೆ ಎಂಬುದರಲ್ಲಿ ಸಂಶಯವೇ ಇಲ್ಲ.

ಸಂಘಪರಿವಾರದ ಬೆಳವಣಿಗೆಗೆ ಬೇಕಾದ ವ್ಯವಸ್ಥಿತ ಯೋಜನೆಯೊಂದು ಸದ್ದಿಲ್ಲದೇ ಜಾರಿಯಾಗುತ್ತಿದೆ ಎಂಬುದನ್ನು ಮೇಲಿನ ಹಲವು ಸಂಗತಿಗಳು ಬಿಚ್ಚಿಡುತ್ತಿವೆ. ಹತ್ತು ಹಲವು ಬಗೆಯಲ್ಲಿ ವಿಘಟಿತವಾಗಿರುವ ‘ಮಂಡ್ಯ ಪ್ರಜ್ಞೆ’ಯ ಪ್ರತಿನಿಧಿಗಳು ಇದನ್ನು ವ್ಯವಸ್ಥಿತವಾಗಿ ಎದುರಿಸಬಲ್ಲರೇ ಎಂಬುದು ಮುಂದಿನ ದಿನಗಳಲ್ಲಿ ತೀರ್ಮಾನವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...