Homeಮುಖಪುಟಒಕ್ಕಲಿಗರ ರಾಜಧಾನಿಯ ಮೇಲೆ ವೈದಿಕಶಾಹಿಯ ಕಣ್ಣು: ಮಂಡ್ಯಕ್ಕೇನು ಕಾದಿದೆ?

ಒಕ್ಕಲಿಗರ ರಾಜಧಾನಿಯ ಮೇಲೆ ವೈದಿಕಶಾಹಿಯ ಕಣ್ಣು: ಮಂಡ್ಯಕ್ಕೇನು ಕಾದಿದೆ?

- Advertisement -
- Advertisement -

ಮಂಡ್ಯದ ಒಕ್ಕಲಿಗರು ಕುವೆಂಪು ಅವರ ಕಟ್ಟಾ ಅನುಯಾಯಿಗಳೇನೂ ಅಲ್ಲ. ಆದರೆ, ಇಲ್ಲಿನ ಮುಖ್ಯವಾಹಿನಿ ಪ್ರಜ್ಞೆಯು ವೈದಿಕಶಾಹಿಯ ಪದತಲದಲ್ಲಿ ಶರಣಾಗಿಲ್ಲ. ಅದು 30 ವರ್ಷಗಳ ಕೆಳಗೆ ಹೇಗೋ ಇಂದಿಗೂ ಹಾಗೆಯೇ ಇದೆ. ಇದೇ ಮಾತನ್ನು ರಾಜ್ಯದ ಉಳಿದೆಲ್ಲಾ ಜಿಲ್ಲೆಗಳ ವಿಚಾರದಲ್ಲಿ ಹೇಳುವ ಹಾಗಿಲ್ಲ. ಕಳೆದ 30 ವರ್ಷಗಳಲ್ಲಿ ಉಳಿದ ಜಿಲ್ಲೆಗಳ ಅಧ್ಯಾಪಕರು, ಸಾಹಿತಿಗಳ ಒಂದು ವಿಭಾಗ, ಪತ್ರಕರ್ತರು ಮತ್ತಿತರ ಸುಶಿಕ್ಷಿತ ವರ್ಗ ನಿಧಾನಕ್ಕೆ ವೈದಿಕರ ಬಾಲಂಗೋಚಿಗಳಾಗುತ್ತಾ ನಡೆದರು. ಅದರ ಭಾಗವಾಗಿ ಅಲ್ಲಿ ಆರೆಸ್ಸೆಸ್ ಚಿಂತನೆ ಹಾಗೂ ಬಿಜೆಪಿಯೂ ಬೆಳೆಯುತ್ತಾ ಸಾಗಿದವು. ಆದರೆ ಮಂಡ್ಯದಲ್ಲಿ ಇವ್ಯಾವುವೂ ಆಗಿರಲಿಲ್ಲ.

ಒಕ್ಕಲಿಗ ಪ್ರಾಧಾನ್ಯತೆ ಮಂಡ್ಯಕ್ಕೆ ಮಾತ್ರ ಸೀಮಿತವಾದದ್ದೇನಲ್ಲ. ದಕ್ಷಿಣದ ಏಳೆಂಟು ಜಿಲ್ಲೆಗಳಲ್ಲಿ ಒಕ್ಕಲಿಗರು ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ರಾಜಕೀಯವಾಗಿ ಬಲಾಢ್ಯರು. ಹಾಸನ ಮತ್ತು ರಾಮನಗರಗಳು ‘ಒಕ್ಕಲಿಗ ಪಕ್ಷ’ವೆಂದು ಹೆಸರಾದ ಜೆಡಿಎಸ್‍ನ ನಾಯಕರುಗಳನ್ನು ಸತತವಾಗಿ ಆರಿಸಿ ಕಳಿಸಿದ ಜಿಲ್ಲೆಗಳು. ಆದರೂ ಮಂಡ್ಯವೇ ಈ ವಿದ್ಯಮಾನದ ರಾಜಧಾನಿ.

ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಹಿಡಿಯಲು ದಕ್ಷಿಣ ಕರ್ನಾಟಕದಲ್ಲಿ ಪ್ರಾಬಲ್ಯ ಬೆಳೆಸಿಕೊಳ್ಳುವುದು ಬಿಜೆಪಿಗೆ ಅನಿವಾರ್ಯ. ಬಿಜೆಪಿ ಪ್ರಬಲವಾಗುವುದೆಂದರೆ ಕೆಲವು ವಿರೋಧ ಪಕ್ಷಗಳ ನಾಯಕರುಗಳನ್ನು ತನ್ನೆಡೆಗೆ ಸೆಳೆದುಕೊಳ್ಳುವುದು ಮಾತ್ರವಲ್ಲಾ. ತನ್ನ ಐಡಿಯಾಲಜಿಯನ್ನೂ ಅಲ್ಲಿ ಸ್ಥಾಪಿಸುವುದು. ಹಾಗೆ ಮಾಡಿದಾಗ ಮಾತ್ರ ಈ ಸಾರಿ ದಕ್ಷಿಣ ಕನ್ನಡದಲ್ಲಿ ಆದಂತೆ ಯಾರನ್ನೇ ಚುನಾವಣೆಗೆ ನಿಲ್ಲಿಸಿದರೂ ಅಲ್ಲಿಂದ ಗೆದ್ದು ಬರುವಂತೆ ಮಾಡಿಕೊಳ್ಳಬಹುದು. ಈ ಎಲ್ಲಾ ದೃಷ್ಟಿಯಿಂದ ಆರೆಸ್ಸೆಸ್‍ಗೆ ತನ್ನ ಚಿಂತನೆಯನ್ನು ಹರಡಲು ಮಂಡ್ಯ ಮತ್ತು ಸುತ್ತಲಿನ ಜಿಲ್ಲೆಗಳು ಬಹುಮುಖ್ಯ. ಕನಕಪುರದಲ್ಲಿ ಏಸು ಪ್ರತಿಮೆಯ ವಿಚಾರದಲ್ಲಿ ಗಲಭೆ ಎಬ್ಬಿಸಲು ಕಲ್ಲಡ್ಕ ಪ್ರಭಾಕರ ಭಟ್ಟರೇ ರಂಗಕ್ಕಿಳಿದಿರುವುದೂ ಆ ಉದ್ದೇಶದಿಂದಲೇ. ಈಗ ‘ಅವರು ಬಂದು ಇಲ್ಲಿ ಏನು ಮಾಡಿಕೊಳ್ಳಲೂ ಸಾಧ್ಯವಿಲ್ಲ’ ಎಂಬಂತೆ ವರ್ತಿಸುತ್ತಿರುವ ಡಿ.ಕೆ.ಬ್ರದರ್ಸ್‍ಗೆ ಇನ್ನು ನಾಲ್ಕೈದು ವರ್ಷಗಳಲ್ಲೇ ಆಘಾತವಾಗುವಂತೆ ಅವರ ವಿರುದ್ಧ ಅಲೆ ಬೀಸುವಂತೆ ಮಾಡುವುದು ಸಂಘಪರಿವಾರಕ್ಕೆ ಕಷ್ಟವಿಲ್ಲ.

ಅದೇ ರೀತಿ ಮಂಡ್ಯದ ಮೇಲೆ ಆರೆಸ್ಸೆಸ್‍ನ ಕಣ್ಣು ಬಿದ್ದಿರುವುದಕ್ಕೂ ಇದೇ ಕಾರಣವಿದೆ. ಮೊದಲು ಅವರು ಗುರಿ ಮಾಡಿಕೊಂಡಿದ್ದು ಆದಿಚುಂಚನಗಿರಿ ಮಠದ ಮೇಲೆ. ಮೂಲತಃ ನಾಥಪರಂಪರೆಗೆ ಸೇರಿದ ಈ ಮಠವು ಅವೈದಿಕ ನೆಲೆಯದ್ದಾಗಿತ್ತು. ಆದರೆ ಎಲ್ಲಾ ಬ್ರಾಹ್ಮಣೇತರ ಜಾತಿಗಳಿಗೂ, ಅದರಲ್ಲೂ ಅಂತಹ ಮಠಗಳಿಗೆ ತಾವು ಬ್ರಾಹ್ಮಣಶಾಹಿಯ ಜೊತೆಗೆ ಗುರುತಿಸಿಕೊಂಡರೇನೇ ಮಾನ್ಯತೆ ಎಂಬ ಭಾವನೆ. ಇದು ಕೀಳರಿಮೆಯಿಂದ ಕೂಡಿದ್ದೋ ಅಥವಾ ಅಧಿಕಾರದ ಹಂಬಲದಿಂದ ಬಂದಿದ್ದೋ ಹೇಳುವುದು ಕಷ್ಟ. ಹೀಗಾಗಿ ಬಾಲಗಂಗಾಧರನಾಥರನ್ನೇ ಆರೆಸ್ಸೆಸ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಕಷ್ಟವಾಗಿರಲಿಲ್ಲ.

ಈಗಂತೂ ಈ ವಿಚಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಗೌರಿ ಲಂಕೇಶ್ ಮರ್ಡರ್ ಕೇಸಿನಲ್ಲಿ ಬಂಧಿತನಾಗಿರುವ ಹೊಟ್ಟೆ ನವೀನನನ್ನು ಸನಾತನ ಸಂಸ್ಥೆಯ ಸುಜಿತ್ ಅಲಿಯಾಸ್ ಪ್ರವೀಣ್ ಮಾತಾಡಿಸಿ ಗೌರಿ ಲಂಕೇಶ್ ಹತ್ಯೆಯ ಯೋಜನೆಯ ಸುದ್ದಿ ತಿಳಿಸಿದ್ದು ವಿಜಯನಗರದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಬಂದಿದ್ದಾಗಲೇ. ಅಲ್ಲಿ ಹಿಂದೂ ಜನಜಾಗೃತಿ ಸಮಿತಿ ಎಂಬ ಸನಾತನ ಸಂಸ್ಥೆಯ ಸೋದರ ಸಂಘಟನೆಯ ಕಾರ್ಯಕ್ರಮಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಆರೆಸ್ಸೆಸ್ ಮತ್ತು ಸನಾತನ ಸಂಸ್ಥೆಗಳು ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರಿಸಿಕೊಂಡರೂ, ಅಸಲೀ ಸತ್ಯ ಗೊತ್ತಿದ್ದವರಿಗೆಲ್ಲಾ ಗೊತ್ತಿದೆ.

ಗೌರಿ ಲಂಕೇಶರ ಹತ್ಯೆಯ ಕೇಸಿನ ವಿಚಾರಣೆಯಲ್ಲಿ ಹೊಟ್ಟೆ ನವೀನನನ್ನು ಇಲ್ಲಿಯೇ ಮಾತಾಡಿಸಲಾಯಿತು ಎಂಬುದು ಚಾರ್ಜ್‍ಶೀಟ್‍ನಲ್ಲಿ ಪ್ರಸ್ತಾಪವಾದ ನಂತರವೂ, ಈ ಮಠದಲ್ಲಿ ಎರಡು ಸಭೆಗಳು ನಡೆದಿವೆ. ಜಯಂತ್ ಬಾಲಾಜಿ ಅತಾವಳೆ ಸನಾತನ ಸಂಸ್ಥೆಯ ಸ್ಥಾಪಕನ ಜಯಂತಿಯು 2019ರ ಮೇ 18ರಂದು ನಡೆಯಿತು ಮತ್ತು ಆ ಕಾರ್ಯಕ್ರಮದಲ್ಲಿ ಮಠದ ಉಸ್ತುವಾರಿ ಸೌಮ್ಯನಾಥ ಸ್ವಾಮೀಜಿಯೂ ಪಾಲ್ಗೊಂಡು ಭಾಷಣ ಮಾಡಿದರು. ಅದರಲ್ಲಿ ಅತಾವಳೆಯನ್ನೂ ಹೊಗಳಿ ಮಾತಾಡಿದರು. ಅವರ ಸಾರ್ಥಕ ಬದುಕು ಮತ್ತು ಮಾರ್ಗದರ್ಶನವು ಹಿಂದೂ ಸಮಾಜಕ್ಕೆ ಬೇಕೆಂದು ಹೇಳಿದರು. ಅಂದ ಹಾಗೆ ಈ ಹೊಟ್ಟೆ ನವೀನ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಡುಗ ಮತ್ತು ಇದೀಗ ಪಶ್ಚಾತ್ತಾಪ ಪಡುತ್ತಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

ಒಕ್ಕಲಿಗರ ಮೇಲೆ ಕೇಂದ್ರೀಕರಿಸಬೇಕು ಎಂಬ ಉದ್ದೇಶ ಇರುವುದರಿಂದ ಮತ್ತು ಆ ಕೆಲಸವನ್ನು ಇದುವರೆಗೆ ಆರ್.ಅಶೋಕ್ ಯಶಸ್ವಿಯಾಗಿ ಮಾಡಿಲ್ಲ ಹಾಗೂ ಸಿ.ಟಿ.ರವಿ ಮೈಸೂರು ಭಾಗದಲ್ಲಿ ಇದನ್ನು ಮಾಡುವುದು ಸುಲಭವಿಲ್ಲ ಎಂಬ ಕಾರಣದಿಂದಲೇ ಬೆಂಗಳೂರಿನ ಸಿ.ಎನ್.ಅಶ್ವತ್ಥನಾರಾಯಣರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ ಎಂಬುದನ್ನೂ ಇಲ್ಲಿ ಗಮನಿಸಬೇಕು.

ಇವೆಲ್ಲದರ ಮುಂದುವರೆದ ಭಾಗವಾಗಿಯೇ ಮಂಡ್ಯದಿಂದ ಕೇವಲ 3 ಕಿ.ಮೀ. ದೂರವಿರುವ ಸಾತನೂರಿನಲ್ಲಿ ಇದೀಗ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಎಂಬ ಸಂಘಪರಿವಾರದ ಅಷ್ಟು ಪ್ರಚಾರದಲ್ಲಿಲ್ಲದ ಅಂಗಸಂಘಟನೆಯೊಂದು ‘ರಾಷ್ಟ್ರೀಯವಾದಿಗಳ ಸಮ್ಮೇಳನ’ವನ್ನು ಆಯೋಜಿಸಿದೆ. ಅದರಲ್ಲಿ ಪೌರತ್ವ ಕಾಯ್ದೆಯ ವಿಚಾರದಿಂದ ಹಿಡಿದು, ಟಿಪ್ಪು ಮತ್ತು ಮೇಲುಕೋಟೆಯ ತನಕ ಹತ್ತು ಹಲವು ಸಂಗತಿಗಳನ್ನು ಚರ್ಚಿಸಲಾಗಿದೆ. ಕಳೆದ ತಿಂಗಳು (ಫೆ.23) ನಡೆದ ಈ ಕಾರ್ಯಕ್ರಮದಲ್ಲಿ ‘ಕಾವೇರಿ ಡಿಬೇಟ್’ ಕುರಿತಾದ ಕ್ರಿಯಾಯೋಜನೆಯನ್ನು ಮಂಡಿಸಲಾಗಿದೆ. ಅಂದರೆ ಕಾವೇರಿ ಬೆಲ್ಟ್‌ಅನ್ನು ಕೇಂದ್ರೀಕರಿಸುತ್ತಿರುವ ಹಿನ್ನೆಲೆಯಲ್ಲಿ ತಮಗೆ ಬೇಕಾದ ಕಥನವನ್ನು ಸೃಷ್ಟಿಸುವ ಕೆಲಸ ಯೋಜಿತವಾಗಿ ಸಾಗಿದೆ ಎಂಬುದರಲ್ಲಿ ಸಂಶಯವೇ ಇಲ್ಲ.

ಸಂಘಪರಿವಾರದ ಬೆಳವಣಿಗೆಗೆ ಬೇಕಾದ ವ್ಯವಸ್ಥಿತ ಯೋಜನೆಯೊಂದು ಸದ್ದಿಲ್ಲದೇ ಜಾರಿಯಾಗುತ್ತಿದೆ ಎಂಬುದನ್ನು ಮೇಲಿನ ಹಲವು ಸಂಗತಿಗಳು ಬಿಚ್ಚಿಡುತ್ತಿವೆ. ಹತ್ತು ಹಲವು ಬಗೆಯಲ್ಲಿ ವಿಘಟಿತವಾಗಿರುವ ‘ಮಂಡ್ಯ ಪ್ರಜ್ಞೆ’ಯ ಪ್ರತಿನಿಧಿಗಳು ಇದನ್ನು ವ್ಯವಸ್ಥಿತವಾಗಿ ಎದುರಿಸಬಲ್ಲರೇ ಎಂಬುದು ಮುಂದಿನ ದಿನಗಳಲ್ಲಿ ತೀರ್ಮಾನವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...