Homeಮುಖಪುಟಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಕರ್ನಾಟಕ ರಣಧೀರರ ಪಡೆ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್ ನೇತೃತ್ವದಲ್ಲಿ ನೂರಾರು ಕನ್ನಡಿಗರು ನಿನ್ನೆ ಬೆಂಗಳೂರಿನಿಂದ ಹಲವು ವಾಹನಗಳಲ್ಲಿ ಜಾಥ ಹೊರಟಿದ್ದು ಇಂದು ಮುಂಜಾನೆ ಬೆಳಗಾವಿ ತಲುಪಿವೆ.

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಖಂಡಿಸಿ, ಅದೇ ಸ್ಥಳದಲ್ಲೀ ಕೂಡಲೇ ಪ್ರತಿಮೆ ನಿರ್ಮಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿ ಚಲೋ ಹೋರಾಟ ನಡೆಯುತ್ತಿದ್ದು, ಭಾರೀ ಜನಬೆಂಬಲ ವ್ಯಕ್ತವಾಗಿದೆ.

ಕರ್ನಾಟಕ ರಣಧೀರರ ಪಡೆ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್ ನೇತೃತ್ವದಲ್ಲಿ ನೂರಾರು ಕನ್ನಡಿಗರು ನಿನ್ನೆ ಬೆಂಗಳೂರಿನಿಂದ ಹಲವು ವಾಹನಗಳಲ್ಲಿ ಜಾಥ ಹೊರಟಿದ್ದು ಇಂದು ಮುಂಜಾನೆ ಬೆಳಗಾವಿ ತಲುಪಿವೆ. ಸಾಮಾಜಿಕ ಕಾರ್ಯಕರ್ತ ನಿಕೇತ್ ರಾಜ್ ಮೌರ್ಯ ನೇತೃತ್ವದಲ್ಲಿ ಮತ್ತೊಂದು ತಂಡ ಬೆಳಗಾಗಿ ತಲುಪಿದ್ದು ಅಲ್ಲಿನ ಸ್ಥಳೀಯರು, ಕನ್ನಡಪರ ಹೋರಾಟಗಾರರು ಸೇರಿ ಬೆಳಗಾವಿಯ ಸುವರ್ಣ ವಿಧಾನಸೌಧದೆಡೆಗೆ ಬೃಹತ್ ಮೆರವಣಿಗೆ ನಡೆಸುತ್ತಿದ್ದಾರೆ.

ಆಗಸ್ಟ್ 15 ರಂದು ಸಂಗೊಳ್ಳಿ ರಾಯಣ್ಣನ ಜನ್ಮದಿನದಂದು ಹಲವು ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ  ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಪ್ರತಿಮೆ ಸ್ಥಾಪಿಸಿದ್ದರು. ಆದರೆ ಪೊಲೀಸರು ಅದನ್ನು ತೆರವುಗೊಳಿಸಿ, ತಡೆಯಲು ಮುಂದಾದ ಕನ್ನಡಪರ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದರು.

ಅಂದಿನಿಂದ ನೂರಾರು ಕನ್ನಡಪರ ಸಂಘಟನೆಗಳು ಅದೇ ಸ್ಥಳದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದು ಕುಳಿತಿವೆ. ಹತ್ತಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ದನಿಯೆತ್ತಲಾಗುತ್ತಿದೆ. ಆದರೂ ಸರ್ಕಾರವಾಗಲೀ, ಬೆಳಗಾವಿ ಜಿಲ್ಲಾಡಳಿತವಾಗಲಿ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಆಗಸ್ಟ್ 17 ರಂದು ಬೆಳಗಾವಿಯಲ್ಲಿ ಸಾವಿರಾರು ಜನರು ಸೇರಿ ಭಾರೀ ಪ್ರತಿಭಟನೆ ನಡೆಸಿದ್ದರು. ಪೀರನವಾಡಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿ ಕೂಡಲೇ ಪ್ರತಿಮೆ ಸ್ಥಾಪನೆಗೆ ಪಟ್ಟು ಹಿಡಿದಿದ್ದರು. ಅದೇ ದಿನ ಬೆಂಗಳೂರಿನಲ್ಲಿ ಕರ್ನಾಟಕ ರಣಧೀರ ಪಡೆಯಿಂದ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿಲ್ಲ ಎಂಬುದು ಪೊಲೀಸರ ವಾದವಾದರೆ, ಅಲ್ಲಿನ ಸ್ಥಳೀಯರು ಮೂರು ವರ್ಷಗಳಿಂದ ಅನುಮತಿಗೆ ಪ್ರಯತ್ನಿಸಲಾಗುತ್ತಿದೆ. ಪೀರನವಾಡಿ ಗ್ರಾಮಪಂಚಾಯ್ತಿಯು ಅನುಮತಿ ನೀಡಿದೆ. ಆದರೆ ಪೊಲೀಸರು ಅನುಮತಿ ನಿರಾಕರಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ದನಿಯೆತ್ತಿದ್ದರು. ಶಾಂತಿಯುತವಾಗಿ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಸಹಕರಿಸಬೇಕು ಎಂದು ಕೋರಿದ್ದರು.

ಕರ್ನಾಟಕ ರಣಧೀರ ಪಡೆ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರಾಯಣ್ಣಿನಿಗಾಗಿ ಉಪವಾಸ ಸತ್ಯಾಗ್ರಹ ಕೂಡ ನಡೆದಿತ್ತು. ನಿನ್ನೆ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದ ಸ್ವಾಮೀಜಿಯವರು ಶಾಂತಿಯುತವಾಗಿ ವಿವಾದ ಬಗೆಹರಿಸುವಂತೆ ಮನವಿ ಮಾಡಿದ್ದರು.

ಗೃಹಸಚಿವ ಬಸವರಾಜ ಬೊಮ್ಮಾಯಿಯವರು ಮಾತನಾಡಿ ವಿವಾದ ಬಗೆಹರಿಸಿ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಕೆಲಸ ಮಾಡುತ್ತಿದ್ದು, ಸ್ವಲ್ಪಸಮಯಾವಕಾಶಬೇಕು ಎಂದಿದ್ದರು.

ಇಂದು ಬೆಳಗಾವಿಯಲ್ಲಿ ಈ ವಿಚಾರಕ್ಕೆ ಭಾರೀ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ಹಲವು ಭಾಗಗಳಿಂದ ಕನ್ನಡಿಗರು ಬೆಳಗಾವಿ ಚಲೋಗೆ ಕೈಜೋಡಿಸಿದ್ದಾರೆ. ಪೀರನವಾಡಿ ಸರ್ಕಲ್‌ಗೆ ರಾಯಣ್ಣ ವೃತ್ತ ಎಂದು ಹೆಸರಿಡಬೇಕೆಂದು ಒತ್ತಾಯಿಸಿದ್ದಾರೆ.

ಸರ್ಕಾರ ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಆದಷ್ಟು ಬೇಗ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡದಿದ್ದಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗುವ ಸಂಭವವಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

Also Read: BJP: Yes to Savarkar, No to Kitturu Rani Chennamma

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...