Homeಕರ್ನಾಟಕಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ!

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಮತ್ತು ಕನ್ನಡ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಹಲವು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಹುಟ್ಟಿದ ದಿನವೇ ಅವರ ಪ್ರತಿಮೆಗೆ ಅವಮಾನ ಮಾಡಿರುವುದು ಸರಿಯಲ್ಲ. ಬಿಜೆಪಿ ಸರ್ಕಾರವು ಕನ್ನಡಿಗರ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಅನುಮತಿ ಪಡೆದಿದ್ದೇವೆ

ಪೊಲೀಸರು ಅನುಮತಿ ಪಡೆಯದೇ ಪ್ರತಿಮೆ ನಿರ್ಮಾಣ ಮಾಡಿರುವುದು ಕಾನೂನುಬಾಹಿರ ಎಂದು ವಾದಿಸಿದರೆ ಹಲವು ಕನ್ನಡ ಹೋರಾಟಗಾರರು, ಹಿಂದಿನ ಸರ್ಕಾರವಿದ್ದಾಗಲೇ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಪಡೆದಿದ್ದೇವೆ ಮತ್ತು ಗ್ರಾಮಪಂಚಾಯ್ತಿಯಿಂದ ಅನುಮತಿ ಪಡೆದಿದ್ದೇವೆ ಎಂದು ವಾದಿಸಿದ್ದಾರೆ.

ಈಶ್ವರಪ್ಪ ಎಲ್ಲಿದ್ದಾರೆ?

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡುವು ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದ ಕೆ.ಎಸ್ ಈಶ್ವರಪ್ಪನವರು ಈಗ ಎಲ್ಲಿದ್ದಾರೆ ಎಂದು ಹಲವು ನೆಟ್ಟಿಗರು ಪ್ರಶ್ನಿಸಿದ್ದಾರೆ. ಇತ್ತ ಸಂಗೊಳ್ಳಿ ರಾಯಣ್ಣನವರಿಗೆ ಬಿಜೆಪಿಯವರಿಂದಲೇ ಅವಮಾನವಾಗುತ್ತಿದ್ದು ತಿರುಗಿ ನೋಡದ ಈಶ್ವರಪ್ಪನವರಿಗೆ ರಾಯಣ್ಣರ ಮೇಲೆ ಪ್ರೀತಿ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ರಾಯಣ್ಣನ ಹೆಸರಲ್ಲಿ ಬ್ರಿಗೇಡಗಳನ್ನ ಕಟ್ಟಿಕೊಳ್ಳೊದೇನು, ನಿನ್ನ ಪತ್ರಿಕೆಗಳಲ್ಲಿ ರಾಯಣ್ಣನ ಕುರಿತು ಬರೆದಿದ್ದೇನು! ರಾಯಣ್ಣನನ್ನು ರಾಜಕೀಯಕ್ಕೆ ಬಳಸಿಕೊಳ್ಳೋದು. ಪುತ್ಥಳಿಯನ್ನು ಹಿಂದಿನಿಂದ ತೆಗೆಸೋದು. ಕನ್ನಡಿಗರಿಗೆ ಮಂಕುಬೂದಿ ಎರಚಿದ್ದು ಸಾಕು ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಸಂಗೊಳ್ಳಿ ರಾಯಣ್ಣ ಬೇಡ: ಸಾವರ್ಕರ್ ಬೇಕು – ಇದು ಬಿಜೆಪಿ ನೀತಿ

ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕನ್ನಡಿಗರ ಹೆಮ್ಮಯ ರಾಯಣ್ಣನ ಪ್ರತಿಮೆ ತೆರವು ಗೊಳಿಸಿದ ಸರ್ಕಾರ. ಬೆಂಗಳೂರಿನಲ್ಲಿ ಮರಾಠಿ ಸಾವರ್ಕರ್ ಪ್ರತಿಮೆ ಉದ್ಘಾಟನೆ ಮಾಡಿದ ಸರ್ಕಾರ. ಕರ್ನಾಟಕದಲ್ಲಿ ಕನ್ನಡಿಗರ ಸರ್ಕಾರವಿದೆಯೋ ಅಥವಾ ನಾಗಪುರದ ಸರ್ಕಾರವಿದೆಯೋ? ಇದು ರಾಯಣ್ಣನ ಜನ್ಮದಿನದಂದೆ ಕನ್ನಡಿಗರಿಂದ ಕನ್ನಡಿಗ ರಾಯಣ್ಣನಿಗೆ ಮಾಡಿದ ಅವಮಾನ ಎಂದು ಪ್ರತಾಪ್ ಕಣಗಲ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ ಎಂದು ಗದ್ದಪ್ಪ ಎಂಬುವವರು ವ್ಯಂಗ್ಯವಾಡಿದ್ದಾರೆ.

ಪ್ರತಿಭಟನೆಗೆ ಕರೆ

ಈ ಸರ್ಕಾರಕ್ಕೆ ಮರಾಠಿಗ ಸಾವರ್ಕರ್ ಬೇಕು. ಕೆಚ್ಚೆದೆಯ ಕನ್ನಡಿಗ ಸ್ವಾತಂತ್ರ್ಯ ಸೇನಾನಿ ರಾಯಣ್ಣ ಬೇಕಾಗಿಲ್ಲ….! ನಾಡ ಅಭಿಮಾನಿಗಳೇ ಬನ್ನಿ, ನಾಳೆ ಬೆಳಿಗ್ಗೆ ಮುಖ್ಯಮಂತ್ರಿಗಳಿಗೆ ಬಿಸಿ ಮುಟ್ಟಿಸುವ. ಬೆಳಗ್ಗೆ -11 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣ ಮುಂಭಾಗ ಪ್ರತಿಭಟನೆ ನಡೆಸೋಣ ಎಂದು ಕನ್ನಡ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್‌ರವರು ಕರೆನೀಡಿದ್ದಾರೆ.

ಬೆಳಗಾವಿಯ ಪೀರನವಾಡಿಯಲ್ಲಿ ಹುತಾತ್ಮ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ಅವಕಾಶ ನೀಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿರುವ ಅವಮಾನ, ಈ ಮೂಲಕ ಸರ್ಕಾರ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಕೂಡಲೇ ಸರ್ಕಾರ ಎಚ್ಚೆತ್ತು ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಜೆಡಿಎಸ್ ಪಕ್ಷ ಘೋಷಿಸಿದೆ.

ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ.‌ ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು ರಾಯಣ್ಣನ ಅಭಿಮಾನಿಗಳು ಮೂರ್ತಿ ಸ್ಥಾಪನೆಗೆ‌ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ನಡೆದುಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....