Homeಕರ್ನಾಟಕಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ!

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಮತ್ತು ಕನ್ನಡ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಹಲವು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಹುಟ್ಟಿದ ದಿನವೇ ಅವರ ಪ್ರತಿಮೆಗೆ ಅವಮಾನ ಮಾಡಿರುವುದು ಸರಿಯಲ್ಲ. ಬಿಜೆಪಿ ಸರ್ಕಾರವು ಕನ್ನಡಿಗರ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಅನುಮತಿ ಪಡೆದಿದ್ದೇವೆ

ಪೊಲೀಸರು ಅನುಮತಿ ಪಡೆಯದೇ ಪ್ರತಿಮೆ ನಿರ್ಮಾಣ ಮಾಡಿರುವುದು ಕಾನೂನುಬಾಹಿರ ಎಂದು ವಾದಿಸಿದರೆ ಹಲವು ಕನ್ನಡ ಹೋರಾಟಗಾರರು, ಹಿಂದಿನ ಸರ್ಕಾರವಿದ್ದಾಗಲೇ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಪಡೆದಿದ್ದೇವೆ ಮತ್ತು ಗ್ರಾಮಪಂಚಾಯ್ತಿಯಿಂದ ಅನುಮತಿ ಪಡೆದಿದ್ದೇವೆ ಎಂದು ವಾದಿಸಿದ್ದಾರೆ.

ಈಶ್ವರಪ್ಪ ಎಲ್ಲಿದ್ದಾರೆ?

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡುವು ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದ ಕೆ.ಎಸ್ ಈಶ್ವರಪ್ಪನವರು ಈಗ ಎಲ್ಲಿದ್ದಾರೆ ಎಂದು ಹಲವು ನೆಟ್ಟಿಗರು ಪ್ರಶ್ನಿಸಿದ್ದಾರೆ. ಇತ್ತ ಸಂಗೊಳ್ಳಿ ರಾಯಣ್ಣನವರಿಗೆ ಬಿಜೆಪಿಯವರಿಂದಲೇ ಅವಮಾನವಾಗುತ್ತಿದ್ದು ತಿರುಗಿ ನೋಡದ ಈಶ್ವರಪ್ಪನವರಿಗೆ ರಾಯಣ್ಣರ ಮೇಲೆ ಪ್ರೀತಿ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ರಾಯಣ್ಣನ ಹೆಸರಲ್ಲಿ ಬ್ರಿಗೇಡಗಳನ್ನ ಕಟ್ಟಿಕೊಳ್ಳೊದೇನು, ನಿನ್ನ ಪತ್ರಿಕೆಗಳಲ್ಲಿ ರಾಯಣ್ಣನ ಕುರಿತು ಬರೆದಿದ್ದೇನು! ರಾಯಣ್ಣನನ್ನು ರಾಜಕೀಯಕ್ಕೆ ಬಳಸಿಕೊಳ್ಳೋದು. ಪುತ್ಥಳಿಯನ್ನು ಹಿಂದಿನಿಂದ ತೆಗೆಸೋದು. ಕನ್ನಡಿಗರಿಗೆ ಮಂಕುಬೂದಿ ಎರಚಿದ್ದು ಸಾಕು ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಸಂಗೊಳ್ಳಿ ರಾಯಣ್ಣ ಬೇಡ: ಸಾವರ್ಕರ್ ಬೇಕು – ಇದು ಬಿಜೆಪಿ ನೀತಿ

ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕನ್ನಡಿಗರ ಹೆಮ್ಮಯ ರಾಯಣ್ಣನ ಪ್ರತಿಮೆ ತೆರವು ಗೊಳಿಸಿದ ಸರ್ಕಾರ. ಬೆಂಗಳೂರಿನಲ್ಲಿ ಮರಾಠಿ ಸಾವರ್ಕರ್ ಪ್ರತಿಮೆ ಉದ್ಘಾಟನೆ ಮಾಡಿದ ಸರ್ಕಾರ. ಕರ್ನಾಟಕದಲ್ಲಿ ಕನ್ನಡಿಗರ ಸರ್ಕಾರವಿದೆಯೋ ಅಥವಾ ನಾಗಪುರದ ಸರ್ಕಾರವಿದೆಯೋ? ಇದು ರಾಯಣ್ಣನ ಜನ್ಮದಿನದಂದೆ ಕನ್ನಡಿಗರಿಂದ ಕನ್ನಡಿಗ ರಾಯಣ್ಣನಿಗೆ ಮಾಡಿದ ಅವಮಾನ ಎಂದು ಪ್ರತಾಪ್ ಕಣಗಲ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ ಎಂದು ಗದ್ದಪ್ಪ ಎಂಬುವವರು ವ್ಯಂಗ್ಯವಾಡಿದ್ದಾರೆ.

ಪ್ರತಿಭಟನೆಗೆ ಕರೆ

ಈ ಸರ್ಕಾರಕ್ಕೆ ಮರಾಠಿಗ ಸಾವರ್ಕರ್ ಬೇಕು. ಕೆಚ್ಚೆದೆಯ ಕನ್ನಡಿಗ ಸ್ವಾತಂತ್ರ್ಯ ಸೇನಾನಿ ರಾಯಣ್ಣ ಬೇಕಾಗಿಲ್ಲ….! ನಾಡ ಅಭಿಮಾನಿಗಳೇ ಬನ್ನಿ, ನಾಳೆ ಬೆಳಿಗ್ಗೆ ಮುಖ್ಯಮಂತ್ರಿಗಳಿಗೆ ಬಿಸಿ ಮುಟ್ಟಿಸುವ. ಬೆಳಗ್ಗೆ -11 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣ ಮುಂಭಾಗ ಪ್ರತಿಭಟನೆ ನಡೆಸೋಣ ಎಂದು ಕನ್ನಡ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್‌ರವರು ಕರೆನೀಡಿದ್ದಾರೆ.

ಬೆಳಗಾವಿಯ ಪೀರನವಾಡಿಯಲ್ಲಿ ಹುತಾತ್ಮ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ಅವಕಾಶ ನೀಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿರುವ ಅವಮಾನ, ಈ ಮೂಲಕ ಸರ್ಕಾರ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಕೂಡಲೇ ಸರ್ಕಾರ ಎಚ್ಚೆತ್ತು ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಜೆಡಿಎಸ್ ಪಕ್ಷ ಘೋಷಿಸಿದೆ.

ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ.‌ ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು ರಾಯಣ್ಣನ ಅಭಿಮಾನಿಗಳು ಮೂರ್ತಿ ಸ್ಥಾಪನೆಗೆ‌ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ನಡೆದುಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...