Homeಕರ್ನಾಟಕಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ!

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಮತ್ತು ಕನ್ನಡ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಹಲವು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಹುಟ್ಟಿದ ದಿನವೇ ಅವರ ಪ್ರತಿಮೆಗೆ ಅವಮಾನ ಮಾಡಿರುವುದು ಸರಿಯಲ್ಲ. ಬಿಜೆಪಿ ಸರ್ಕಾರವು ಕನ್ನಡಿಗರ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಅನುಮತಿ ಪಡೆದಿದ್ದೇವೆ

ಪೊಲೀಸರು ಅನುಮತಿ ಪಡೆಯದೇ ಪ್ರತಿಮೆ ನಿರ್ಮಾಣ ಮಾಡಿರುವುದು ಕಾನೂನುಬಾಹಿರ ಎಂದು ವಾದಿಸಿದರೆ ಹಲವು ಕನ್ನಡ ಹೋರಾಟಗಾರರು, ಹಿಂದಿನ ಸರ್ಕಾರವಿದ್ದಾಗಲೇ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಪಡೆದಿದ್ದೇವೆ ಮತ್ತು ಗ್ರಾಮಪಂಚಾಯ್ತಿಯಿಂದ ಅನುಮತಿ ಪಡೆದಿದ್ದೇವೆ ಎಂದು ವಾದಿಸಿದ್ದಾರೆ.

ಈಶ್ವರಪ್ಪ ಎಲ್ಲಿದ್ದಾರೆ?

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡುವು ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದ ಕೆ.ಎಸ್ ಈಶ್ವರಪ್ಪನವರು ಈಗ ಎಲ್ಲಿದ್ದಾರೆ ಎಂದು ಹಲವು ನೆಟ್ಟಿಗರು ಪ್ರಶ್ನಿಸಿದ್ದಾರೆ. ಇತ್ತ ಸಂಗೊಳ್ಳಿ ರಾಯಣ್ಣನವರಿಗೆ ಬಿಜೆಪಿಯವರಿಂದಲೇ ಅವಮಾನವಾಗುತ್ತಿದ್ದು ತಿರುಗಿ ನೋಡದ ಈಶ್ವರಪ್ಪನವರಿಗೆ ರಾಯಣ್ಣರ ಮೇಲೆ ಪ್ರೀತಿ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ರಾಯಣ್ಣನ ಹೆಸರಲ್ಲಿ ಬ್ರಿಗೇಡಗಳನ್ನ ಕಟ್ಟಿಕೊಳ್ಳೊದೇನು, ನಿನ್ನ ಪತ್ರಿಕೆಗಳಲ್ಲಿ ರಾಯಣ್ಣನ ಕುರಿತು ಬರೆದಿದ್ದೇನು! ರಾಯಣ್ಣನನ್ನು ರಾಜಕೀಯಕ್ಕೆ ಬಳಸಿಕೊಳ್ಳೋದು. ಪುತ್ಥಳಿಯನ್ನು ಹಿಂದಿನಿಂದ ತೆಗೆಸೋದು. ಕನ್ನಡಿಗರಿಗೆ ಮಂಕುಬೂದಿ ಎರಚಿದ್ದು ಸಾಕು ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಸಂಗೊಳ್ಳಿ ರಾಯಣ್ಣ ಬೇಡ: ಸಾವರ್ಕರ್ ಬೇಕು – ಇದು ಬಿಜೆಪಿ ನೀತಿ

ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕನ್ನಡಿಗರ ಹೆಮ್ಮಯ ರಾಯಣ್ಣನ ಪ್ರತಿಮೆ ತೆರವು ಗೊಳಿಸಿದ ಸರ್ಕಾರ. ಬೆಂಗಳೂರಿನಲ್ಲಿ ಮರಾಠಿ ಸಾವರ್ಕರ್ ಪ್ರತಿಮೆ ಉದ್ಘಾಟನೆ ಮಾಡಿದ ಸರ್ಕಾರ. ಕರ್ನಾಟಕದಲ್ಲಿ ಕನ್ನಡಿಗರ ಸರ್ಕಾರವಿದೆಯೋ ಅಥವಾ ನಾಗಪುರದ ಸರ್ಕಾರವಿದೆಯೋ? ಇದು ರಾಯಣ್ಣನ ಜನ್ಮದಿನದಂದೆ ಕನ್ನಡಿಗರಿಂದ ಕನ್ನಡಿಗ ರಾಯಣ್ಣನಿಗೆ ಮಾಡಿದ ಅವಮಾನ ಎಂದು ಪ್ರತಾಪ್ ಕಣಗಲ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ ಎಂದು ಗದ್ದಪ್ಪ ಎಂಬುವವರು ವ್ಯಂಗ್ಯವಾಡಿದ್ದಾರೆ.

ಪ್ರತಿಭಟನೆಗೆ ಕರೆ

ಈ ಸರ್ಕಾರಕ್ಕೆ ಮರಾಠಿಗ ಸಾವರ್ಕರ್ ಬೇಕು. ಕೆಚ್ಚೆದೆಯ ಕನ್ನಡಿಗ ಸ್ವಾತಂತ್ರ್ಯ ಸೇನಾನಿ ರಾಯಣ್ಣ ಬೇಕಾಗಿಲ್ಲ….! ನಾಡ ಅಭಿಮಾನಿಗಳೇ ಬನ್ನಿ, ನಾಳೆ ಬೆಳಿಗ್ಗೆ ಮುಖ್ಯಮಂತ್ರಿಗಳಿಗೆ ಬಿಸಿ ಮುಟ್ಟಿಸುವ. ಬೆಳಗ್ಗೆ -11 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣ ಮುಂಭಾಗ ಪ್ರತಿಭಟನೆ ನಡೆಸೋಣ ಎಂದು ಕನ್ನಡ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್‌ರವರು ಕರೆನೀಡಿದ್ದಾರೆ.

ಬೆಳಗಾವಿಯ ಪೀರನವಾಡಿಯಲ್ಲಿ ಹುತಾತ್ಮ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ಅವಕಾಶ ನೀಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿರುವ ಅವಮಾನ, ಈ ಮೂಲಕ ಸರ್ಕಾರ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಕೂಡಲೇ ಸರ್ಕಾರ ಎಚ್ಚೆತ್ತು ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಜೆಡಿಎಸ್ ಪಕ್ಷ ಘೋಷಿಸಿದೆ.

ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ.‌ ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು ರಾಯಣ್ಣನ ಅಭಿಮಾನಿಗಳು ಮೂರ್ತಿ ಸ್ಥಾಪನೆಗೆ‌ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ನಡೆದುಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...