Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...