Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....