Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...