Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...