Homeಮುಖಪುಟಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ

ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೋಡೌನ್‌ಗಳಲ್ಲಿ ಇರುವ ಹೆಚ್ಚುವರಿ ಅಕ್ಕಿಯನ್ನು ಹ್ಯಾಂಡ್ ಸ್ಯಾನಿಟೈಸರ್ ತಯಾರಿಸಲು ಎಥೆನಾಲ್ ಆಗಿ ಪರಿವರ್ತಿಸಲಾಗುವುದು ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಪೆಟ್ರೋಲ್‌ಗೆ ಸೇರಿಸಲಾಗುವುದು ಎಂದು ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು. ಇದಕ್ಕೆ ಪ್ರತಿಯಾಗಿ ರಾಹುಲ್‌ ಗಾಂಧಿ ಟೀಕೆ ಕೇಳಿಬಂದಿದೆ.

ಕೊರೊನಾ ವೈರಸ್ ದೇಶದಾದ್ಯಂತ ತ್ವರಿತ ಗತಿಯಲ್ಲಿ ಹರಡದಂತೆ ಕಳೆದ ತಿಂಗಳು ದೇಶದಾದ್ಯಂತ ಲಾಕ್‌ಡೌನ್‌ ಗೋಷಿಸಿದ ನಂತರ ಲಕ್ಷಾಂತರ ಭಾರತೀಯ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗುತ್ತಿದೆ.

“ಭಾರತದ ಬಡವರು ಯಾವಾಗ ಎಚ್ಚರಗೊಳ್ಳುತ್ತಾರೆ? ನೀವು ಹಸಿವಿನಿಂದ ಸಾಯುತ್ತಿದ್ದೀರಿ, ಅವರು ನಿಮ್ಮ ಅಕ್ಕಿಯನ್ನು ಸ್ಯಾನಿಟೈಸರ್ ತಯಾರಿಸುವ ಮೂಲಕ ಶ್ರೀಮಂತರ ಕೈಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ” ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.

ಹೆಚ್ಚುವರಿ ಆಹಾರ ಧಾನ್ಯವನ್ನು ಎಥೆನಾಲ್ ಆಗಿ ಪರಿವರ್ತಿಸಲು ಅನುವು ಮಾಡಿಕೊಡುವ ಜೈವಿಕ ಇಂಧನಗಳ ರಾಷ್ಟ್ರೀಯ ನೀತಿಯ ಉಲ್ಲೇಖದಂತೆ, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಜೈವಿಕ ಇಂಧನ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

ಹೆಚ್ಚುವರಿ ಆಹಾರ ಧಾನ್ಯಗಳ ಸಂಗ್ರಹದ ಸಣ್ಣ ಭಾಗವನ್ನು ಎಥೆನಾಲ್ ಆಗಿ ಪರಿವರ್ತಿಸಲು ಸಮಿತಿ ಅನುಮತಿ ನೀಡಿದೆ ಎಂದು ಪ್ರಧಾನ್ ಹೇಳಿದ್ದರು.

ಕೊರೊನಾ ವೈರಸ್ ಲಾಕ್‌ಡೌನ್ ಘೋಷಣೆಯಾದಾಗಿನಿಂದ, ಭಾರತದ ಆಹಾರ ನಿಗಮದ ಗೋಡೌನ್‌ಗಳು ತುಂಬಿದ್ದರೂ ಸಹ, ಲಾಕ್‌ಡೌನ್‌ನಿಂದಾಗಿ ಭಾರತದ ಅನೇಕ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ದೊಡ್ಡ ವಿವಾದಗಳಿವೆ.

ಲಾಕ್‌ಡೌನ್‌ನಿಂದಾಗಿ ಮನೆಯಿಲ್ಲದೆ ನಿರುದ್ಯೋಗಿಗಳಾಗಿ ನಗರಗಳಲ್ಲಿ ಸಿಲುಕಿಕೊಂಡಿದ್ದ ಹಲವಾರು ವಲಸೆ ಕಾರ್ಮಿಕರು ಹಸಿವಿನಿಂದ ಸಾಯುವ ಹಂತದಲ್ಲಿದ್ದಾರೆ ಎಂದು ಹಲವಾರು ವರದಿಗಳು ಉಲ್ಲೇಖಿಸಿವೆ. ಬಡವರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ ಎಂಬ ಟೀಕೆಗಳು ಜೋರಾಗಿವೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆಹಾರದಾನ್ಯವನ್ನು ಈ ರೀತಿಯಲ್ಲಿ ಕೇಂದ್ರ ಸರ್ಕಾರವು ದುರ್ಬಳಕೆ ಮಾಡುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...