Homeಮುಖಪುಟಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ

ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೋಡೌನ್‌ಗಳಲ್ಲಿ ಇರುವ ಹೆಚ್ಚುವರಿ ಅಕ್ಕಿಯನ್ನು ಹ್ಯಾಂಡ್ ಸ್ಯಾನಿಟೈಸರ್ ತಯಾರಿಸಲು ಎಥೆನಾಲ್ ಆಗಿ ಪರಿವರ್ತಿಸಲಾಗುವುದು ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಪೆಟ್ರೋಲ್‌ಗೆ ಸೇರಿಸಲಾಗುವುದು ಎಂದು ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು. ಇದಕ್ಕೆ ಪ್ರತಿಯಾಗಿ ರಾಹುಲ್‌ ಗಾಂಧಿ ಟೀಕೆ ಕೇಳಿಬಂದಿದೆ.

ಕೊರೊನಾ ವೈರಸ್ ದೇಶದಾದ್ಯಂತ ತ್ವರಿತ ಗತಿಯಲ್ಲಿ ಹರಡದಂತೆ ಕಳೆದ ತಿಂಗಳು ದೇಶದಾದ್ಯಂತ ಲಾಕ್‌ಡೌನ್‌ ಗೋಷಿಸಿದ ನಂತರ ಲಕ್ಷಾಂತರ ಭಾರತೀಯ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗುತ್ತಿದೆ.

“ಭಾರತದ ಬಡವರು ಯಾವಾಗ ಎಚ್ಚರಗೊಳ್ಳುತ್ತಾರೆ? ನೀವು ಹಸಿವಿನಿಂದ ಸಾಯುತ್ತಿದ್ದೀರಿ, ಅವರು ನಿಮ್ಮ ಅಕ್ಕಿಯನ್ನು ಸ್ಯಾನಿಟೈಸರ್ ತಯಾರಿಸುವ ಮೂಲಕ ಶ್ರೀಮಂತರ ಕೈಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ” ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.

ಹೆಚ್ಚುವರಿ ಆಹಾರ ಧಾನ್ಯವನ್ನು ಎಥೆನಾಲ್ ಆಗಿ ಪರಿವರ್ತಿಸಲು ಅನುವು ಮಾಡಿಕೊಡುವ ಜೈವಿಕ ಇಂಧನಗಳ ರಾಷ್ಟ್ರೀಯ ನೀತಿಯ ಉಲ್ಲೇಖದಂತೆ, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಜೈವಿಕ ಇಂಧನ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

ಹೆಚ್ಚುವರಿ ಆಹಾರ ಧಾನ್ಯಗಳ ಸಂಗ್ರಹದ ಸಣ್ಣ ಭಾಗವನ್ನು ಎಥೆನಾಲ್ ಆಗಿ ಪರಿವರ್ತಿಸಲು ಸಮಿತಿ ಅನುಮತಿ ನೀಡಿದೆ ಎಂದು ಪ್ರಧಾನ್ ಹೇಳಿದ್ದರು.

ಕೊರೊನಾ ವೈರಸ್ ಲಾಕ್‌ಡೌನ್ ಘೋಷಣೆಯಾದಾಗಿನಿಂದ, ಭಾರತದ ಆಹಾರ ನಿಗಮದ ಗೋಡೌನ್‌ಗಳು ತುಂಬಿದ್ದರೂ ಸಹ, ಲಾಕ್‌ಡೌನ್‌ನಿಂದಾಗಿ ಭಾರತದ ಅನೇಕ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ದೊಡ್ಡ ವಿವಾದಗಳಿವೆ.

ಲಾಕ್‌ಡೌನ್‌ನಿಂದಾಗಿ ಮನೆಯಿಲ್ಲದೆ ನಿರುದ್ಯೋಗಿಗಳಾಗಿ ನಗರಗಳಲ್ಲಿ ಸಿಲುಕಿಕೊಂಡಿದ್ದ ಹಲವಾರು ವಲಸೆ ಕಾರ್ಮಿಕರು ಹಸಿವಿನಿಂದ ಸಾಯುವ ಹಂತದಲ್ಲಿದ್ದಾರೆ ಎಂದು ಹಲವಾರು ವರದಿಗಳು ಉಲ್ಲೇಖಿಸಿವೆ. ಬಡವರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ ಎಂಬ ಟೀಕೆಗಳು ಜೋರಾಗಿವೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆಹಾರದಾನ್ಯವನ್ನು ಈ ರೀತಿಯಲ್ಲಿ ಕೇಂದ್ರ ಸರ್ಕಾರವು ದುರ್ಬಳಕೆ ಮಾಡುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...