Homeಮುಖಪುಟಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ

ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೋಡೌನ್‌ಗಳಲ್ಲಿ ಇರುವ ಹೆಚ್ಚುವರಿ ಅಕ್ಕಿಯನ್ನು ಹ್ಯಾಂಡ್ ಸ್ಯಾನಿಟೈಸರ್ ತಯಾರಿಸಲು ಎಥೆನಾಲ್ ಆಗಿ ಪರಿವರ್ತಿಸಲಾಗುವುದು ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಪೆಟ್ರೋಲ್‌ಗೆ ಸೇರಿಸಲಾಗುವುದು ಎಂದು ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು. ಇದಕ್ಕೆ ಪ್ರತಿಯಾಗಿ ರಾಹುಲ್‌ ಗಾಂಧಿ ಟೀಕೆ ಕೇಳಿಬಂದಿದೆ.

ಕೊರೊನಾ ವೈರಸ್ ದೇಶದಾದ್ಯಂತ ತ್ವರಿತ ಗತಿಯಲ್ಲಿ ಹರಡದಂತೆ ಕಳೆದ ತಿಂಗಳು ದೇಶದಾದ್ಯಂತ ಲಾಕ್‌ಡೌನ್‌ ಗೋಷಿಸಿದ ನಂತರ ಲಕ್ಷಾಂತರ ಭಾರತೀಯ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗುತ್ತಿದೆ.

“ಭಾರತದ ಬಡವರು ಯಾವಾಗ ಎಚ್ಚರಗೊಳ್ಳುತ್ತಾರೆ? ನೀವು ಹಸಿವಿನಿಂದ ಸಾಯುತ್ತಿದ್ದೀರಿ, ಅವರು ನಿಮ್ಮ ಅಕ್ಕಿಯನ್ನು ಸ್ಯಾನಿಟೈಸರ್ ತಯಾರಿಸುವ ಮೂಲಕ ಶ್ರೀಮಂತರ ಕೈಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ” ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.

ಹೆಚ್ಚುವರಿ ಆಹಾರ ಧಾನ್ಯವನ್ನು ಎಥೆನಾಲ್ ಆಗಿ ಪರಿವರ್ತಿಸಲು ಅನುವು ಮಾಡಿಕೊಡುವ ಜೈವಿಕ ಇಂಧನಗಳ ರಾಷ್ಟ್ರೀಯ ನೀತಿಯ ಉಲ್ಲೇಖದಂತೆ, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಜೈವಿಕ ಇಂಧನ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

ಹೆಚ್ಚುವರಿ ಆಹಾರ ಧಾನ್ಯಗಳ ಸಂಗ್ರಹದ ಸಣ್ಣ ಭಾಗವನ್ನು ಎಥೆನಾಲ್ ಆಗಿ ಪರಿವರ್ತಿಸಲು ಸಮಿತಿ ಅನುಮತಿ ನೀಡಿದೆ ಎಂದು ಪ್ರಧಾನ್ ಹೇಳಿದ್ದರು.

ಕೊರೊನಾ ವೈರಸ್ ಲಾಕ್‌ಡೌನ್ ಘೋಷಣೆಯಾದಾಗಿನಿಂದ, ಭಾರತದ ಆಹಾರ ನಿಗಮದ ಗೋಡೌನ್‌ಗಳು ತುಂಬಿದ್ದರೂ ಸಹ, ಲಾಕ್‌ಡೌನ್‌ನಿಂದಾಗಿ ಭಾರತದ ಅನೇಕ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ದೊಡ್ಡ ವಿವಾದಗಳಿವೆ.

ಲಾಕ್‌ಡೌನ್‌ನಿಂದಾಗಿ ಮನೆಯಿಲ್ಲದೆ ನಿರುದ್ಯೋಗಿಗಳಾಗಿ ನಗರಗಳಲ್ಲಿ ಸಿಲುಕಿಕೊಂಡಿದ್ದ ಹಲವಾರು ವಲಸೆ ಕಾರ್ಮಿಕರು ಹಸಿವಿನಿಂದ ಸಾಯುವ ಹಂತದಲ್ಲಿದ್ದಾರೆ ಎಂದು ಹಲವಾರು ವರದಿಗಳು ಉಲ್ಲೇಖಿಸಿವೆ. ಬಡವರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ ಎಂಬ ಟೀಕೆಗಳು ಜೋರಾಗಿವೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆಹಾರದಾನ್ಯವನ್ನು ಈ ರೀತಿಯಲ್ಲಿ ಕೇಂದ್ರ ಸರ್ಕಾರವು ದುರ್ಬಳಕೆ ಮಾಡುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...