Homeಮುಖಪುಟಮೋದಿ, ಅಮಿತ್ ಶಾ ಕುರಿತು ಕಟುಟೀಕೆಯೇ ಸಂಜೀವ್ ಭಟ್ ಜೀವಾವಧಿ ಶಿಕ್ಷೆಗೆ ಕಾರಣವೆ?

ಮೋದಿ, ಅಮಿತ್ ಶಾ ಕುರಿತು ಕಟುಟೀಕೆಯೇ ಸಂಜೀವ್ ಭಟ್ ಜೀವಾವಧಿ ಶಿಕ್ಷೆಗೆ ಕಾರಣವೆ?

ಶ್ವೇತಾ ಭಟ್ ಅವರ ಕಾರಿಗೆ ನಂಬರ್ ಪ್ಲೇಟ್ ರಹಿತ ಲಾರಿಯೊಂದನ್ನು ಗುದ್ದಿಸಿ ಅವರನ್ನು ಕೊಲ್ಲುವ ಯತ್ನ ನಡೆಸಲಾಯಿತು ಎಂದೂ ವರದಿಯಾಗಿತ್ತು.

- Advertisement -
- Advertisement -

| ಶ್ರೀನಿವಾಸ ಕಾರ್ಕಳ |

1989ರ ಕಸ್ಟಡಿ ಸಾವು ಪ್ರಕರಣದಲ್ಲಿ ಗುಜರಾತಿನ ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರಿಗೆ ಜಾಮ್ ನಗರ್ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಈ ಕುರಿತು ಕಸ್ಟಡಿ ಸಾವಿಗೆ ಜೀವಾವಧಿ ಶಿಕ್ಷೆಯೇ? ಅದು ಮೋದಿಯ ವಿರುದ್ಧ ಸಾಕ್ಷಿ ನುಡಿದಿದ್ದ ವ್ಯಕ್ತಿಗೆ? ಇದರಲ್ಲಿ ರಾಜಕೀಯವಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಜೀವ್ ಭಟ್ ಮತ್ತು ಮೋದಿ ನಡುವೆ ಇದ್ದ ವೈಮನಸ್ಸನ್ನು ಕುರಿತು ಶ್ರೀನಿವಾಸ ಕಾರ್ಕಳ ರವರು ಮೇ 1 ರಂದು ಬರೆದಿದ್ದ ಲೇಖನವನ್ನು ಮರುಪ್ರಕಟಿಸುತ್ತಿದ್ದೇವೆ.

“ಶತ್ರುಗಳ ಮನೆಗೇ ನುಗ್ಗಿ ಅವರನ್ನು ಕೊಲ್ಲುವುದು ನನ್ನ ಜಾಯಮಾನ” ಎಂದು ನರೇಂದ್ರ ಮೋದಿಯವರು ಆಗಾಗ ಹೇಳುತ್ತಿರುತ್ತಾರೆ. ಅವರ ಈ ಮಾತು ಬರೇ ಬೊಗಳೆಯಲ್ಲ. ಪಾಕಿಸ್ತಾನದ ವಿಷಯದಲ್ಲಿ ಅವರ ಈ “ಶತ್ರುಗಳ ಮನೆಗೇ ನುಗ್ಗಿ ಹೊಡೆದುಹಾಕುವ” ಕಾರ್ಯಾಚರಣೆಗಳು ಚರ್ಚಾರ್ಹವಿರಬಹುದು, ಕೆಲವೊಮ್ಮೆ ಹಾಸ್ಯಾಸ್ಪದವೂ ಇರಬಹುದು. ಆದರೆ ತಮ್ಮ ವಿರೋಧಿಗಳ ವಿಷಯದಲ್ಲಿ ಅವರು ನಡೆದುಕೊಂಡ ರೀತಿಯ ಮಟ್ಟಿಗೆ ಅವರ ಈ ಮಾತು ಸತ್ಯಕ್ಕೆ ತುಂಬ ಹತ್ತಿರವಿರುವಂಥದ್ದು. ಗುಜರಾತ್ ನರಮೇಧದ ಬಳಿಕದ ವಿದ್ಯಮಾನಗಳನ್ನು ಪರಾಂಬರಿಸಿ ನೋಡಿದರೆ ಹಳೆಯ ದ್ವೇಷ ಮುಂದುವರಿಸುತ್ತಾ ಮೋದಿ ಮತ್ತು ಶಾ ಜೋಡಿ ತಮ್ಮ ವಿರೋಧಿಗಳನ್ನು ಮಟ್ಟಹಾಕಲು ಮಾಡಿದ ಅವಿರತ ಯತ್ನಗಳ ಅಸಂಖ್ಯ ಉದಾಹರಣೆಗಳನ್ನು ನೋಡಬಹುದು (ಗುಜರಾತ್ ಮಾಜಿ ಗೃಹಮಂತ್ರಿ ಹರೇನ್ ಪಾಂಡ್ಯ ಹತ್ಯೆ ಮತ್ತು ಜಸ್ಟಿಸ್ ಲೋಯಾ ನಿಗೂಢ ಸಾವು ಈಗಲೂ ಅನೇಕ ಅನುಮಾನಗಳನ್ನು ಹುಟ್ಟು ಹಾಕಿದ್ದು, ಗುಮಾನಿಯ ಬೆರಳುಗಳು ನಿರ್ದಿಷ್ಟ ಇಬ್ಬರು ವ್ಯಕ್ತಿಗಳತ್ತಲೇ ತಿರುಗಿರುವುದು ಅಚ್ಚರಿಯ ಸಂಗತಿಯೇನಲ್ಲ).

ರಾಜಕೀಯದಲ್ಲಿ ಶತ್ರುತ್ವ ತುಂಬ ಸಹಜ. ಆದರೆ ಮುತ್ಸದ್ದಿಗಳೆನಿಸಿದ ಹೆಚ್ಚಿನ ರಾಜಕಾರಣಿಗಳು ತಮ್ಮ ಸ್ಥಾನದ ಘನತೆಯನ್ನು ಕಾಪಾಡಿಕೊಂಡು ಅವೆಲ್ಲವನ್ನೂ ಮರೆತು ಮುಂದುವರಿಯುವುದಿದೆ. ಆದರೆ ಗುಜರಾತ್‍ನ ಈ ಜೋಡಿ ಹಾಗಲ್ಲ. ಅವರು ತಮ್ಮ ಶತ್ರುಗಳನ್ನು ಎಂದೂ ಮರೆಯುವುದಿಲ್ಲ, ಆ ಶತ್ರುಗಳನ್ನು ಹಣ್ಣುಗಾಯಿ, ನೀರುಗಾಯಿ ಮಾಡದೆ ಅವರು ವಿರಮಿಸುವವರೂ ಅಲ್ಲ.

2002ರ ಗುಜರಾತ್ ನರಮೇಧ ನಡೆದಾಗ ಅಲ್ಲಿನ ಮುಖ್ಯಮಂತ್ರಿಯಾಗಿದ್ದವರು ನರೇಂದ್ರ ಮೋದಿ. ಸದರಿ ನರಮೇಧವನ್ನು ಸ್ವತಃ ಮೋದಿಯವರು ನಡೆಸಿದರು ಎಂದು ಅವರ ವಿರೋಧಿಗಳೂ ಆಪಾದಿಸುವುದಿಲ್ಲ. ಆದರೆ ಮುಖ್ಯಮಂತ್ರಿಯಾಗಿದ್ದ ಅವರಿಗೆ ಆ ನರಮೇಧವನ್ನು ತಡೆಯುವ ಹೊಣೆಗಾರಿಕೆಯಿತ್ತು. ಆ ಹೊಣೆಗಾರಿಕೆಯನ್ನು ಅವರು ನಿಭಾಯಿಸುವಲ್ಲಿ ವಿಫಲರಾದರು. ನರಮೇಧವನ್ನು ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ತಡೆಯಲು ಕನಿಷ್ಠ ಯತ್ನವನ್ನೂ ಮಾಡದಿರುವುದು ಎಂದರೆ ಒಂದರ್ಥದಲ್ಲಿ ಆ ಅಪರಾಧದಲ್ಲಿ ಭಾಗಿಯಾದುದಕ್ಕೆ ಸಮ.

ಒಂದೆಡೆಯಲ್ಲಿ ನರಮೇಧ ತಡೆಯಲು ಪರಿಣಾಮಕಾರಿಯಾಗಿ ಯತ್ನಿಸಲಿಲ್ಲ, ಇನ್ನೊಂದೆಡೆಯಲ್ಲಿ ನರಮೇಧದ ಅಪರಾಧಿಗಳಿಗೆ ಸರಿಯಾದ ಶಿಕ್ಷೆ ಆಗುವಂತೆಯೂ ನೋಡಿಕೊಳ್ಳಲಿಲ್ಲ. ನ್ಯಾಯ ಒದಗಿಸಬೇಕಾದ ಪ್ರಭುತ್ವವೇ ಅನ್ಯಾಯ ಎಸಗುತ್ತದೆ ಎಂಬುದು ಅರಿವಾಗುತ್ತಲೇ ತೀಸ್ತಾ ಸೆಟಲ್ವಾಡ್‍ರಂತಹ ಮಾನವತಾವಾದಿ ಹೋರಾಟಗಾರರು ದೊಡ್ಡ ರಿಸ್ಕ್ ತೆಗೆದುಕೊಂಡು ರಂಗಕ್ಕಿಳಿದರು, ಕೋರ್ಟ್ ಮೆಟ್ಟಲು ಹತ್ತಿದರು. ಗುಜರಾತಿನ ಪ್ರಕರಣಗಳನ್ನು ಸುಪ್ರೀಂ ಕೋರ್ಟು ಗಂಭೀರವಾಗಿ ಪರಿಗಣಿಸುವಂತೆ, ಕೆಲವೊಂದು ಪ್ರಕರಣಗಳಲ್ಲಿ ನ್ಯಾಯನೀಡುವಂತೆ ಮಾಡಲು ತೀಸ್ತಾರ ಈ ಯತ್ನ ಕಾರಣವಾಗಿತ್ತು. “ಗುಜರಾತ್ ಹೊತ್ತಿ ಉರಿಯುತ್ತಿದ್ದಾಗ ಆಧುನಿಕ ದಿನಗಳ ನೀರೋ ಬೇರೆಡೆಗೆ ನೋಡುತ್ತ ಕುಳಿತಿದ್ದ” ಎಂದು ನ್ಯಾಯಾಲಯ ಕಟುವಾಗಿ ಟೀಕಿಸುವಂತಾಯಿತು.

ಇದೇ ಕಾರಣಕ್ಕೆ ಮೋದಿಯವರ ಕೆಂಗಣ್ಣಿಗೆ ಗುರಿಯಾದರು ತೀಸ್ತಾ. ತೀಸ್ತಾರ ದುರದೃಷ್ಟಕ್ಕೆ ಮೋದಿಯರು ಮುಂದೆ ದೇಶದ ಪ್ರಧಾನಿಯೇ ಆದರು. ಆ ಬಳಿಕವೂ ತೀಸ್ತಾರನ್ನು ಮರೆಯದ ಮೋದಿಯವರು ಆಕೆಯನ್ನು ಜೈಲಿಗೆ ತಳ್ಳಲು ನಡೆಸಿದ ಯತ್ನ ಒಂದೆರಡು ಬಾರಿಯದಲ್ಲ. ತೀಸ್ತಾರ ಎನ್‍ಜಿಒ ಸಂಪೂರ್ಣ ನಿಷ್ಕ್ರಿಯವಾಗುವಂತೆ ಮಾಡಲಾಯಿತು. ಮಾತ್ರವಲ್ಲ, ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸಿರದಿದ್ದರೆ ಕಳೆದ ಐದು ವರ್ಷಗಳಿಂದಲೂ ಅವರು ಜೈಲಿನಲ್ಲಿರಬೇಕಾಗಿತ್ತು.

ಗುಜರಾತ್ ಗಲಭೆಯ ವಿಷಯಕ್ಕೆ ಬಂದಾಗ ತೀಸ್ತಾ ಸೆಟಲ್‍ವಾಡರ ಸಾಲಿನಲ್ಲಿಯೇ ಕೇಳಿಬರುವ ಇನ್ನೊಂದು ಹೆಸರು ಸಂಜೀವ ಭಟ್. ಗುಜರಾತಿನ  ಪೊಲೀಸ್ ಅಧಿಕಾರಿಯಾಗಿದ್ದ ಭಟ್ ಅವರು ಸದರಿ ಗಲಭೆಯಲ್ಲಿ ಮೋದಿಯವರ ಪಾತ್ರವನ್ನು ಬೆಟ್ಟು ಮಾಡಿದವರು; ಮೋದಿಯವರ ವಿರುದ್ಧ ಸಾಕ್ಷ್ಯ ನುಡಿದವರು. “ತಮ್ಮ ಆಕ್ರೋಶವನ್ನು ಹೊರಹಾಕಲು ಹಿಂದೂಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಗಲಭೆಯ ಸಮಯದ ಅಧಿಕಾರಿಗಳ ಸಭೆಯೊಂದರಲ್ಲಿ ಮೋದಿಯವರು ಹೇಳಿದ್ದರು, ನಾನೂ ಆ ಸಭೆಯಲ್ಲಿದ್ದೆ” ಎಂದು ನ್ಯಾಯಾಲಯದಲ್ಲಿ ಪ್ರಮಾಣಪತ್ರ ಸಲ್ಲಿಸಿ ಮೋದಿಯವರ ಶತ್ರುತ್ವ ಕಟ್ಟಿಕೊಂಡವರು. ಆ ಸಭೆಯಲ್ಲಿ ಸಂಜೀವ್ ಭಟ್ ಇದ್ದರೇ, ಮೋದಿ ಹಾಗೆ ಹೇಳಿದ್ದರೇ ಎಂಬುದೆಲ್ಲ ಸಾಬೀತಾಗಿಲ್ಲ, ಮಾತ್ರವಲ್ಲ ಅದು ಅನೇಕ ಅನುಮಾನಗಳಿಗೂ ಕಾರಣವಾಗಿದೆ.

ಆದರೆ ಸಂಜೀವ್ ಭಟ್ ತಮ್ಮ ವಿರುದ್ದ ಮಾತನಾಡಿದ್ದನ್ನು ಮೋದಿಯವರು ಹಗುರವಾಗಿ ತೆಗೆದುಕೊಳ್ಳಲಿಲ್ಲ. ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅವರ ನೇತೃತ್ವದ ಗುಜರಾತ್ ಸರಕಾರ ಭಟ್ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಶುರು ಮಾಡಿತು. ಅವರನ್ನು ಕೆಲಸದಿಂದ ಅಮಾನತು ಮಾಡಲಾಯಿತು, ಅವರ ಮೇಲಿನ ಹಳೆಯ ಕೇಸುಗಳನ್ನು ಮತ್ತೆ ತೆರೆಯಲಾಯಿತು. ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂದೆಗೆದುಕೊಳ್ಳಲಾಯಿತು. ಅವರ ಮನೆಯ ಒಂದು ಭಾಗವನ್ನು ಕೆಡವಲಾಯಿತು. ಮೋದಿಯವರು ದೇಶದ ಪ್ರಧಾನಿಯಾದ ಬಳಿಕವಂತೂ ಭಟ್ ಅವರ ಮೇಲಿನ ಪ್ರತೀಕಾರ ಕ್ರಮಗಳು ಇನ್ನೂ ಹೆಚ್ಚಾದವು. ಅವರನ್ನು ಕೆಲಸದಿಂದಲೇ ವಜಾ ಮಾಡಲಾಯಿತು.

ಆದರೆ ಯಾವುದಕ್ಕೂ ಎದೆಗುಂದದ ಸಂಜೀವ ಭಟ್ ತಮ್ಮ ದಿಟ್ಟ ಮತ್ತು ಮೊನಚು ಮಾತುಗಳ ಮೂಲಕ ಮೋದಿಯವರ ನಡೆನುಡಿಗಳನ್ನು ಗೇಲಿ ಮಾಡುವ ಕೆಲಸ ಮುಂದುವರಿಸುತ್ತಲೇ ಹೋದರು. ಟ್ವಿಟರ್ ಮತ್ತು ಫೇಸ್‍ಬುಕ್‍ನಂತಹ ಸೋಶಿಯಲ್ ಮೀಡಿಯಾದಲ್ಲಿನ ಮೋದಿ ವಿರೋಧಿ ಬರೆಹಗಳ ಕಾರಣ ಅವರಿಗೆ ಲಕ್ಷಾಂತರ ಅಭಿಮಾನಿಗಳೂ ಹುಟ್ಟಿಕೊಂಡರು. ಆದರೆ ಸಂಜೀವ ಭಟ್ಟರಿಗೊಂದು ಪಾಠ ಕಲಿಸಲು ಹೊಂಚು ಹಾಕುತ್ತಲೇ ಇದ್ದ ಫ್ಯಾಸಿಸ್ಟ್ ಸರಕಾರದ ಏಜನ್ಸಿಗಳು ಕೊನೆಗೂ 23 ವರ್ಷಗಳ ಹಿಂದಿನ ಕೇಸೊಂದರಲ್ಲಿ ಅವರನ್ನು ಸೆಪ್ಟಂಬರ್ 5, 2018 ರಂದು ಜೈಲಿಗೆ ತಳ್ಳುವಲ್ಲಿ ಯಶಸ್ವಿಯಾದವು.

ಅಚ್ಚರಿಯ ಮತ್ತು ಆಘಾತಕಾರಿ ಅಂಶವೆಂದರೆ ನ್ಯಾಯಾಲಯ ಕೂಡಾ ಸಂಜೀವ್ ಭಟ್ ಅವರ ನೆರವಿಗೆ ಬರಲಿಲ್ಲ. ಸಂಜೀವ ಭಟ್ಟರನ್ನು ಭೇಟಿಯಾಗಲು ಅವರ ಪತ್ನಿ ಶ್ವೇತಾ ಭಟ್ಟರಿಗೂ ಸರಿಯಾಗಿ ಅವಕಾಶವನ್ನೂ ಕೊಡಲಿಲ್ಲ. ಅವರನ್ನು ಎಲ್ಲಿಟ್ಟಿದ್ದಾರೆ ಎಂಬುದೂ ಸರಿಯಾಗಿ ತಿಳಿಯದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಶ್ವೇತಾ ಭಟ್ ಅವರು ಸುಪ್ರೀಂಕೋರ್ಟ್ ಮೆಟ್ಟಲೇರಿದರೂ ಅವರಿಗೆ ನ್ಯಾಯ ದೊರಕಲಿಲ್ಲ. ಈ ನಡುವೆ ಶ್ವೇತಾ ಭಟ್ ಅವರ ಕಾರಿಗೆ ನಂಬರ್ ಪ್ಲೇಟ್ ರಹಿತ ಲಾರಿಯೊಂದನ್ನು ಗುದ್ದಿಸಿ ಅವರನ್ನು ಕೊಲ್ಲುವ ಯತ್ನ ನಡೆಸಲಾಯಿತು ಎಂದೂ ವರದಿಯಾಗಿತ್ತು.

ಸಂಜೀವ್ ಭಟ್‍ರನ್ನು ಬಂಧಿಸಿ ಸರಿ ಸುಮಾರು 10 ತಿಂಗಳುಗಳಾದವು. ಬಲಾಢ್ಯ ರಾಜಕಾರಣಿಯೊಬ್ಬರನ್ನು ಎದುರು ಹಾಕಿಕೊಂಡದ್ದಕ್ಕೆ ಪ್ರತೀಕಾರ ಕ್ರಮವಾಗಿಯೇ ಅವರನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿದ್ದಲ್ಲದೇ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂಬ ಆರೋಪ ಜೋರಾಗಿಯೇ ಕೇಳಿಬಂದಿದೆ. ಇದು ದೇಶದ ಪ್ರಜಾತಂತ್ರ ವ್ಯವಸ್ಥೆಯ ಬಗ್ಗೆ, ಸಂವಿಧಾನಾತ್ಮಕ ಹಕ್ಕುಗಳ ಬಗ್ಗೆ, ನ್ಯಾಯಾಂಗದ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡುವ ಒಂದು ವಿದ್ಯಮಾನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...