Homeಮುಖಪುಟಮೋದಿ, ಅಮಿತ್ ಶಾ ಕುರಿತು ಕಟುಟೀಕೆಯೇ ಸಂಜೀವ್ ಭಟ್ ಜೀವಾವಧಿ ಶಿಕ್ಷೆಗೆ ಕಾರಣವೆ?

ಮೋದಿ, ಅಮಿತ್ ಶಾ ಕುರಿತು ಕಟುಟೀಕೆಯೇ ಸಂಜೀವ್ ಭಟ್ ಜೀವಾವಧಿ ಶಿಕ್ಷೆಗೆ ಕಾರಣವೆ?

ಶ್ವೇತಾ ಭಟ್ ಅವರ ಕಾರಿಗೆ ನಂಬರ್ ಪ್ಲೇಟ್ ರಹಿತ ಲಾರಿಯೊಂದನ್ನು ಗುದ್ದಿಸಿ ಅವರನ್ನು ಕೊಲ್ಲುವ ಯತ್ನ ನಡೆಸಲಾಯಿತು ಎಂದೂ ವರದಿಯಾಗಿತ್ತು.

- Advertisement -
- Advertisement -

| ಶ್ರೀನಿವಾಸ ಕಾರ್ಕಳ |

1989ರ ಕಸ್ಟಡಿ ಸಾವು ಪ್ರಕರಣದಲ್ಲಿ ಗುಜರಾತಿನ ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಅವರಿಗೆ ಜಾಮ್ ನಗರ್ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಈ ಕುರಿತು ಕಸ್ಟಡಿ ಸಾವಿಗೆ ಜೀವಾವಧಿ ಶಿಕ್ಷೆಯೇ? ಅದು ಮೋದಿಯ ವಿರುದ್ಧ ಸಾಕ್ಷಿ ನುಡಿದಿದ್ದ ವ್ಯಕ್ತಿಗೆ? ಇದರಲ್ಲಿ ರಾಜಕೀಯವಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಜೀವ್ ಭಟ್ ಮತ್ತು ಮೋದಿ ನಡುವೆ ಇದ್ದ ವೈಮನಸ್ಸನ್ನು ಕುರಿತು ಶ್ರೀನಿವಾಸ ಕಾರ್ಕಳ ರವರು ಮೇ 1 ರಂದು ಬರೆದಿದ್ದ ಲೇಖನವನ್ನು ಮರುಪ್ರಕಟಿಸುತ್ತಿದ್ದೇವೆ.

“ಶತ್ರುಗಳ ಮನೆಗೇ ನುಗ್ಗಿ ಅವರನ್ನು ಕೊಲ್ಲುವುದು ನನ್ನ ಜಾಯಮಾನ” ಎಂದು ನರೇಂದ್ರ ಮೋದಿಯವರು ಆಗಾಗ ಹೇಳುತ್ತಿರುತ್ತಾರೆ. ಅವರ ಈ ಮಾತು ಬರೇ ಬೊಗಳೆಯಲ್ಲ. ಪಾಕಿಸ್ತಾನದ ವಿಷಯದಲ್ಲಿ ಅವರ ಈ “ಶತ್ರುಗಳ ಮನೆಗೇ ನುಗ್ಗಿ ಹೊಡೆದುಹಾಕುವ” ಕಾರ್ಯಾಚರಣೆಗಳು ಚರ್ಚಾರ್ಹವಿರಬಹುದು, ಕೆಲವೊಮ್ಮೆ ಹಾಸ್ಯಾಸ್ಪದವೂ ಇರಬಹುದು. ಆದರೆ ತಮ್ಮ ವಿರೋಧಿಗಳ ವಿಷಯದಲ್ಲಿ ಅವರು ನಡೆದುಕೊಂಡ ರೀತಿಯ ಮಟ್ಟಿಗೆ ಅವರ ಈ ಮಾತು ಸತ್ಯಕ್ಕೆ ತುಂಬ ಹತ್ತಿರವಿರುವಂಥದ್ದು. ಗುಜರಾತ್ ನರಮೇಧದ ಬಳಿಕದ ವಿದ್ಯಮಾನಗಳನ್ನು ಪರಾಂಬರಿಸಿ ನೋಡಿದರೆ ಹಳೆಯ ದ್ವೇಷ ಮುಂದುವರಿಸುತ್ತಾ ಮೋದಿ ಮತ್ತು ಶಾ ಜೋಡಿ ತಮ್ಮ ವಿರೋಧಿಗಳನ್ನು ಮಟ್ಟಹಾಕಲು ಮಾಡಿದ ಅವಿರತ ಯತ್ನಗಳ ಅಸಂಖ್ಯ ಉದಾಹರಣೆಗಳನ್ನು ನೋಡಬಹುದು (ಗುಜರಾತ್ ಮಾಜಿ ಗೃಹಮಂತ್ರಿ ಹರೇನ್ ಪಾಂಡ್ಯ ಹತ್ಯೆ ಮತ್ತು ಜಸ್ಟಿಸ್ ಲೋಯಾ ನಿಗೂಢ ಸಾವು ಈಗಲೂ ಅನೇಕ ಅನುಮಾನಗಳನ್ನು ಹುಟ್ಟು ಹಾಕಿದ್ದು, ಗುಮಾನಿಯ ಬೆರಳುಗಳು ನಿರ್ದಿಷ್ಟ ಇಬ್ಬರು ವ್ಯಕ್ತಿಗಳತ್ತಲೇ ತಿರುಗಿರುವುದು ಅಚ್ಚರಿಯ ಸಂಗತಿಯೇನಲ್ಲ).

ರಾಜಕೀಯದಲ್ಲಿ ಶತ್ರುತ್ವ ತುಂಬ ಸಹಜ. ಆದರೆ ಮುತ್ಸದ್ದಿಗಳೆನಿಸಿದ ಹೆಚ್ಚಿನ ರಾಜಕಾರಣಿಗಳು ತಮ್ಮ ಸ್ಥಾನದ ಘನತೆಯನ್ನು ಕಾಪಾಡಿಕೊಂಡು ಅವೆಲ್ಲವನ್ನೂ ಮರೆತು ಮುಂದುವರಿಯುವುದಿದೆ. ಆದರೆ ಗುಜರಾತ್‍ನ ಈ ಜೋಡಿ ಹಾಗಲ್ಲ. ಅವರು ತಮ್ಮ ಶತ್ರುಗಳನ್ನು ಎಂದೂ ಮರೆಯುವುದಿಲ್ಲ, ಆ ಶತ್ರುಗಳನ್ನು ಹಣ್ಣುಗಾಯಿ, ನೀರುಗಾಯಿ ಮಾಡದೆ ಅವರು ವಿರಮಿಸುವವರೂ ಅಲ್ಲ.

2002ರ ಗುಜರಾತ್ ನರಮೇಧ ನಡೆದಾಗ ಅಲ್ಲಿನ ಮುಖ್ಯಮಂತ್ರಿಯಾಗಿದ್ದವರು ನರೇಂದ್ರ ಮೋದಿ. ಸದರಿ ನರಮೇಧವನ್ನು ಸ್ವತಃ ಮೋದಿಯವರು ನಡೆಸಿದರು ಎಂದು ಅವರ ವಿರೋಧಿಗಳೂ ಆಪಾದಿಸುವುದಿಲ್ಲ. ಆದರೆ ಮುಖ್ಯಮಂತ್ರಿಯಾಗಿದ್ದ ಅವರಿಗೆ ಆ ನರಮೇಧವನ್ನು ತಡೆಯುವ ಹೊಣೆಗಾರಿಕೆಯಿತ್ತು. ಆ ಹೊಣೆಗಾರಿಕೆಯನ್ನು ಅವರು ನಿಭಾಯಿಸುವಲ್ಲಿ ವಿಫಲರಾದರು. ನರಮೇಧವನ್ನು ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ತಡೆಯಲು ಕನಿಷ್ಠ ಯತ್ನವನ್ನೂ ಮಾಡದಿರುವುದು ಎಂದರೆ ಒಂದರ್ಥದಲ್ಲಿ ಆ ಅಪರಾಧದಲ್ಲಿ ಭಾಗಿಯಾದುದಕ್ಕೆ ಸಮ.

ಒಂದೆಡೆಯಲ್ಲಿ ನರಮೇಧ ತಡೆಯಲು ಪರಿಣಾಮಕಾರಿಯಾಗಿ ಯತ್ನಿಸಲಿಲ್ಲ, ಇನ್ನೊಂದೆಡೆಯಲ್ಲಿ ನರಮೇಧದ ಅಪರಾಧಿಗಳಿಗೆ ಸರಿಯಾದ ಶಿಕ್ಷೆ ಆಗುವಂತೆಯೂ ನೋಡಿಕೊಳ್ಳಲಿಲ್ಲ. ನ್ಯಾಯ ಒದಗಿಸಬೇಕಾದ ಪ್ರಭುತ್ವವೇ ಅನ್ಯಾಯ ಎಸಗುತ್ತದೆ ಎಂಬುದು ಅರಿವಾಗುತ್ತಲೇ ತೀಸ್ತಾ ಸೆಟಲ್ವಾಡ್‍ರಂತಹ ಮಾನವತಾವಾದಿ ಹೋರಾಟಗಾರರು ದೊಡ್ಡ ರಿಸ್ಕ್ ತೆಗೆದುಕೊಂಡು ರಂಗಕ್ಕಿಳಿದರು, ಕೋರ್ಟ್ ಮೆಟ್ಟಲು ಹತ್ತಿದರು. ಗುಜರಾತಿನ ಪ್ರಕರಣಗಳನ್ನು ಸುಪ್ರೀಂ ಕೋರ್ಟು ಗಂಭೀರವಾಗಿ ಪರಿಗಣಿಸುವಂತೆ, ಕೆಲವೊಂದು ಪ್ರಕರಣಗಳಲ್ಲಿ ನ್ಯಾಯನೀಡುವಂತೆ ಮಾಡಲು ತೀಸ್ತಾರ ಈ ಯತ್ನ ಕಾರಣವಾಗಿತ್ತು. “ಗುಜರಾತ್ ಹೊತ್ತಿ ಉರಿಯುತ್ತಿದ್ದಾಗ ಆಧುನಿಕ ದಿನಗಳ ನೀರೋ ಬೇರೆಡೆಗೆ ನೋಡುತ್ತ ಕುಳಿತಿದ್ದ” ಎಂದು ನ್ಯಾಯಾಲಯ ಕಟುವಾಗಿ ಟೀಕಿಸುವಂತಾಯಿತು.

ಇದೇ ಕಾರಣಕ್ಕೆ ಮೋದಿಯವರ ಕೆಂಗಣ್ಣಿಗೆ ಗುರಿಯಾದರು ತೀಸ್ತಾ. ತೀಸ್ತಾರ ದುರದೃಷ್ಟಕ್ಕೆ ಮೋದಿಯರು ಮುಂದೆ ದೇಶದ ಪ್ರಧಾನಿಯೇ ಆದರು. ಆ ಬಳಿಕವೂ ತೀಸ್ತಾರನ್ನು ಮರೆಯದ ಮೋದಿಯವರು ಆಕೆಯನ್ನು ಜೈಲಿಗೆ ತಳ್ಳಲು ನಡೆಸಿದ ಯತ್ನ ಒಂದೆರಡು ಬಾರಿಯದಲ್ಲ. ತೀಸ್ತಾರ ಎನ್‍ಜಿಒ ಸಂಪೂರ್ಣ ನಿಷ್ಕ್ರಿಯವಾಗುವಂತೆ ಮಾಡಲಾಯಿತು. ಮಾತ್ರವಲ್ಲ, ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸಿರದಿದ್ದರೆ ಕಳೆದ ಐದು ವರ್ಷಗಳಿಂದಲೂ ಅವರು ಜೈಲಿನಲ್ಲಿರಬೇಕಾಗಿತ್ತು.

ಗುಜರಾತ್ ಗಲಭೆಯ ವಿಷಯಕ್ಕೆ ಬಂದಾಗ ತೀಸ್ತಾ ಸೆಟಲ್‍ವಾಡರ ಸಾಲಿನಲ್ಲಿಯೇ ಕೇಳಿಬರುವ ಇನ್ನೊಂದು ಹೆಸರು ಸಂಜೀವ ಭಟ್. ಗುಜರಾತಿನ  ಪೊಲೀಸ್ ಅಧಿಕಾರಿಯಾಗಿದ್ದ ಭಟ್ ಅವರು ಸದರಿ ಗಲಭೆಯಲ್ಲಿ ಮೋದಿಯವರ ಪಾತ್ರವನ್ನು ಬೆಟ್ಟು ಮಾಡಿದವರು; ಮೋದಿಯವರ ವಿರುದ್ಧ ಸಾಕ್ಷ್ಯ ನುಡಿದವರು. “ತಮ್ಮ ಆಕ್ರೋಶವನ್ನು ಹೊರಹಾಕಲು ಹಿಂದೂಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಗಲಭೆಯ ಸಮಯದ ಅಧಿಕಾರಿಗಳ ಸಭೆಯೊಂದರಲ್ಲಿ ಮೋದಿಯವರು ಹೇಳಿದ್ದರು, ನಾನೂ ಆ ಸಭೆಯಲ್ಲಿದ್ದೆ” ಎಂದು ನ್ಯಾಯಾಲಯದಲ್ಲಿ ಪ್ರಮಾಣಪತ್ರ ಸಲ್ಲಿಸಿ ಮೋದಿಯವರ ಶತ್ರುತ್ವ ಕಟ್ಟಿಕೊಂಡವರು. ಆ ಸಭೆಯಲ್ಲಿ ಸಂಜೀವ್ ಭಟ್ ಇದ್ದರೇ, ಮೋದಿ ಹಾಗೆ ಹೇಳಿದ್ದರೇ ಎಂಬುದೆಲ್ಲ ಸಾಬೀತಾಗಿಲ್ಲ, ಮಾತ್ರವಲ್ಲ ಅದು ಅನೇಕ ಅನುಮಾನಗಳಿಗೂ ಕಾರಣವಾಗಿದೆ.

ಆದರೆ ಸಂಜೀವ್ ಭಟ್ ತಮ್ಮ ವಿರುದ್ದ ಮಾತನಾಡಿದ್ದನ್ನು ಮೋದಿಯವರು ಹಗುರವಾಗಿ ತೆಗೆದುಕೊಳ್ಳಲಿಲ್ಲ. ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅವರ ನೇತೃತ್ವದ ಗುಜರಾತ್ ಸರಕಾರ ಭಟ್ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಶುರು ಮಾಡಿತು. ಅವರನ್ನು ಕೆಲಸದಿಂದ ಅಮಾನತು ಮಾಡಲಾಯಿತು, ಅವರ ಮೇಲಿನ ಹಳೆಯ ಕೇಸುಗಳನ್ನು ಮತ್ತೆ ತೆರೆಯಲಾಯಿತು. ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂದೆಗೆದುಕೊಳ್ಳಲಾಯಿತು. ಅವರ ಮನೆಯ ಒಂದು ಭಾಗವನ್ನು ಕೆಡವಲಾಯಿತು. ಮೋದಿಯವರು ದೇಶದ ಪ್ರಧಾನಿಯಾದ ಬಳಿಕವಂತೂ ಭಟ್ ಅವರ ಮೇಲಿನ ಪ್ರತೀಕಾರ ಕ್ರಮಗಳು ಇನ್ನೂ ಹೆಚ್ಚಾದವು. ಅವರನ್ನು ಕೆಲಸದಿಂದಲೇ ವಜಾ ಮಾಡಲಾಯಿತು.

ಆದರೆ ಯಾವುದಕ್ಕೂ ಎದೆಗುಂದದ ಸಂಜೀವ ಭಟ್ ತಮ್ಮ ದಿಟ್ಟ ಮತ್ತು ಮೊನಚು ಮಾತುಗಳ ಮೂಲಕ ಮೋದಿಯವರ ನಡೆನುಡಿಗಳನ್ನು ಗೇಲಿ ಮಾಡುವ ಕೆಲಸ ಮುಂದುವರಿಸುತ್ತಲೇ ಹೋದರು. ಟ್ವಿಟರ್ ಮತ್ತು ಫೇಸ್‍ಬುಕ್‍ನಂತಹ ಸೋಶಿಯಲ್ ಮೀಡಿಯಾದಲ್ಲಿನ ಮೋದಿ ವಿರೋಧಿ ಬರೆಹಗಳ ಕಾರಣ ಅವರಿಗೆ ಲಕ್ಷಾಂತರ ಅಭಿಮಾನಿಗಳೂ ಹುಟ್ಟಿಕೊಂಡರು. ಆದರೆ ಸಂಜೀವ ಭಟ್ಟರಿಗೊಂದು ಪಾಠ ಕಲಿಸಲು ಹೊಂಚು ಹಾಕುತ್ತಲೇ ಇದ್ದ ಫ್ಯಾಸಿಸ್ಟ್ ಸರಕಾರದ ಏಜನ್ಸಿಗಳು ಕೊನೆಗೂ 23 ವರ್ಷಗಳ ಹಿಂದಿನ ಕೇಸೊಂದರಲ್ಲಿ ಅವರನ್ನು ಸೆಪ್ಟಂಬರ್ 5, 2018 ರಂದು ಜೈಲಿಗೆ ತಳ್ಳುವಲ್ಲಿ ಯಶಸ್ವಿಯಾದವು.

ಅಚ್ಚರಿಯ ಮತ್ತು ಆಘಾತಕಾರಿ ಅಂಶವೆಂದರೆ ನ್ಯಾಯಾಲಯ ಕೂಡಾ ಸಂಜೀವ್ ಭಟ್ ಅವರ ನೆರವಿಗೆ ಬರಲಿಲ್ಲ. ಸಂಜೀವ ಭಟ್ಟರನ್ನು ಭೇಟಿಯಾಗಲು ಅವರ ಪತ್ನಿ ಶ್ವೇತಾ ಭಟ್ಟರಿಗೂ ಸರಿಯಾಗಿ ಅವಕಾಶವನ್ನೂ ಕೊಡಲಿಲ್ಲ. ಅವರನ್ನು ಎಲ್ಲಿಟ್ಟಿದ್ದಾರೆ ಎಂಬುದೂ ಸರಿಯಾಗಿ ತಿಳಿಯದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಶ್ವೇತಾ ಭಟ್ ಅವರು ಸುಪ್ರೀಂಕೋರ್ಟ್ ಮೆಟ್ಟಲೇರಿದರೂ ಅವರಿಗೆ ನ್ಯಾಯ ದೊರಕಲಿಲ್ಲ. ಈ ನಡುವೆ ಶ್ವೇತಾ ಭಟ್ ಅವರ ಕಾರಿಗೆ ನಂಬರ್ ಪ್ಲೇಟ್ ರಹಿತ ಲಾರಿಯೊಂದನ್ನು ಗುದ್ದಿಸಿ ಅವರನ್ನು ಕೊಲ್ಲುವ ಯತ್ನ ನಡೆಸಲಾಯಿತು ಎಂದೂ ವರದಿಯಾಗಿತ್ತು.

ಸಂಜೀವ್ ಭಟ್‍ರನ್ನು ಬಂಧಿಸಿ ಸರಿ ಸುಮಾರು 10 ತಿಂಗಳುಗಳಾದವು. ಬಲಾಢ್ಯ ರಾಜಕಾರಣಿಯೊಬ್ಬರನ್ನು ಎದುರು ಹಾಕಿಕೊಂಡದ್ದಕ್ಕೆ ಪ್ರತೀಕಾರ ಕ್ರಮವಾಗಿಯೇ ಅವರನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿದ್ದಲ್ಲದೇ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂಬ ಆರೋಪ ಜೋರಾಗಿಯೇ ಕೇಳಿಬಂದಿದೆ. ಇದು ದೇಶದ ಪ್ರಜಾತಂತ್ರ ವ್ಯವಸ್ಥೆಯ ಬಗ್ಗೆ, ಸಂವಿಧಾನಾತ್ಮಕ ಹಕ್ಕುಗಳ ಬಗ್ಗೆ, ನ್ಯಾಯಾಂಗದ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡುವ ಒಂದು ವಿದ್ಯಮಾನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...