Homeಮುಖಪುಟಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

- Advertisement -
- Advertisement -

ಜೀವಾವಧಿ ಜೈಲು ಶಿಕ್ಷೆ ಪ್ರಶ್ನಿಸಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

1990ರ ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಪ್ರಕರಣದಲ್ಲಿ ಸಂಜೀವ್ ಭಟ್ ಅವರಿಗೆ ಜಾಮ್‌ನಗರ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ. ಇದನ್ನು ಪ್ರಶ್ನಿಸಿ ಭಟ್ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಸನ್ನ ಭಾಲಚಂದ್ರ ವರಾಳೆ ಅವರ ಪೀಠವು ನೋಟಿಸ್ ನೀಡುವಾಗ, ಪ್ರಸ್ತುತ ಅರ್ಜಿಯನ್ನು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಇತರ ಅರ್ಜಿಗಳನ್ನು ಟ್ಯಾಗ್ ಮಾಡಿದೆ.

ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ ಕಾಮತ್, ಈ ಅರ್ಜಿಯ ವಿಚಾರಣೆಯ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ ಮತ್ತು ಈ ಅರ್ಜಿಯನ್ನು ನ್ಯಾಯಾಲದ ಮುಂದೆ ಬಾಕಿ ಉಳಿದಿರುವ ಇತರ ಅರ್ಜಿಗಳೊಂದಿಗೆ ಟ್ಯಾಗ್ ಮಾಡಬಹುದು ಎಂಬ ನ್ಯಾಯಾಲಯದ ಪ್ರತಿಪಾದನೆಯನ್ನು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ, ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಲಯ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಆದೇಶಿಸಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಭಟ್ ಪರ ಇನ್ನಿಬ್ಬರು ವಕೀಲರಾದ ರಾಜೇಶ್ ಜಿ.ಇನಾಮದಾರ್ ಮತ್ತು ಶಾಶ್ವತ್ ಆನಂದ್ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ಪ್ರಕರಣವು ನವೆಂಬರ್ 1990ರಲ್ಲಿ ಸಂಭವಿಸಿದ ಪ್ರಭುದಾಸ್ ಮಾಧವ್‌ಜಿ ವೈಷ್ಣಾನಿಯವರ ಕಸ್ಟಡಿ ಸಾವಿಗೆ ಸಂಬಂಧಿಸಿದೆ. ಪೊಲೀಸ್ ಕಸ್ಟಡಿಯ ಚಿತ್ರಹಿಂಸೆಯಿಂದ ವೈಷ್ಣಾನಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು. ವೈಷ್ಣಾನಿ ಸಾವಿನ ಸಮಯದಲ್ಲಿ ಸಂಜೀವ್ ಭಟ್ ಅವರು ಜಾಮ್‌ನಗರದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು. ಭಾರತ್ ಬಂದ್‌ ವೇಳೆ ಗಲಭೆ ನಡೆಸಿದ ಆರೋಪದ ಮೇಲೆ ವೈಷ್ಣಾನಿ ಸೇರಿದಂತೆ ಸುಮಾರು 133 ಜನರನ್ನು ಇತರ ಅಧಿಕಾರಿಗಳೊಂದಿಗೆ ಸಂಜೀವ್ ಭಟ್ ಕಸ್ಟಡಿಗೆ ತೆಗೆದುಕೊಂಡಿದ್ದರು. ಹಾಗಾಗಿ, ವೈಷ್ಣಾನಿ ಕಸ್ಟಡಿ ಸಾವಿನ ಆರೋಪ ಭಟ್ ಮತ್ತು ಇತರರ ಮೇಲೆ ಬಂದಿದೆ.

ಒಂಬತ್ತು ದಿನಗಳ ಕಾಲ ಪೊಲೀಸ್ ಬಂಧನದಲ್ಲಿದ್ದ ವೈಷ್ಣಾನಿ, ಜಾಮೀನಿನ ಮೇಲೆ ಬಿಡುಗಡೆಯಾದ ಹತ್ತು ದಿನಗಳ ನಂತರ ನಿಧನರಾಗಿದ್ದರು. ವೈದ್ಯಕೀಯ ದಾಖಲೆಗಳ ಪ್ರಕಾರ, ಅವರ ಸಾವಿಗೆ ಮೂತ್ರಪಿಂಡದ ವೈಫಲ್ಯ ಕಾರಣ ಎಂದು ಹೇಳಲಾಗಿತ್ತು.

ವೈಷ್ಣಾನಿ ಸಾವಿನ ನಂತರ, ಕಸ್ಟಡಿ ಚಿತ್ರಹಿಂಸೆ ಆರೋಪದ ಮೇಲೆ ಭಟ್ ಮತ್ತು ಇತರ ಕೆಲವು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. 1995ರಲ್ಲಿ ಪ್ರಕರಣದ ವಿಚಾರಣೆ ಆರಂಭಗೊಂಡಾಗ ಗುಜರಾತ್ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. 2011 ರವರೆಗೆ ವಿಚಾರಣೆಗೆ ತಡೆ ನೀಡಲಾಗಿತ್ತು. ನಂತರ ತಡೆ ತೆರವುಗೊಂಡು ವಿಚಾರಣೆ ಮುಂದುವರೆದಿತ್ತು.

ಜೂನ್ 2019ರಲ್ಲಿ, ಜಾಮ್‌ನಗರ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಪ್ರಕರಣದಲ್ಲಿ ಸಂಜೀವ್ ಭಟ್ ಮತ್ತು ಪೊಲೀಸ್ ಪೇದೆ ಪ್ರವೀಣ್‌ಸಿನ್ಹ ಝಲಾ ಅವರಿಗೆ ಐಪಿಸಿ ಸೆಕ್ಷನ್ 302 (ಕೊಲೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) ಮತ್ತು 506 (11) (ಕ್ರಿಮಿನಲ್ ಬೆದರಿಕೆಯ ಅಪರಾಧಕ್ಕೆ ಶಿಕ್ಷೆ) ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಂಜೀವ್ ಭಟ್ ಜೊತೆ ಪೊಲೀಸ್ ಪೇದೆಗಳಾದ ಪ್ರವಿನ್‌ಸಿನ್ಹ ಜಡೇಜಾ, ಅನೋಪ್‌ಸಿನ್ಹ ಜೇತ್ವಾ, ಕೇಸುಭ ಡೊಲುಭಾ ಜಡೇಜಾ ಮತ್ತು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಶೈಲೇಶ್ ಪಾಂಡ್ಯ, ದೀಪಕ್‌ಕುಮಾರ್ ಭಗವಾನದಾಸ್ ಷಾ ಕೂಡ ಕಸ್ಟಡಿ ಚಿತ್ರಹಿಂಸೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಅವರಿಗೆ ಐಪಿಸಿಯ ಸೆಕ್ಷನ್ 323 ಮತ್ತು 506 ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ, ಝಲಾ, ಭಟ್, ಶಾ ಮತ್ತು ಪಾಂಡ್ಯ ಅವರು 2019 ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅವರ ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಅಶುತೋಷ್ ಶಾಸ್ತ್ರಿ ಮತ್ತು ನ್ಯಾಯಮೂರ್ತಿ ಸಂದೀಪ್ ಎನ್.ಭಟ್ ಅವರ ಪೀಠವು, ಜಾಮ್‌ನಗರ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ಆದ್ದರಿಂದ ಶಿಕ್ಷೆಯ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ : ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ : ಸಂಪೂರ್ಣ ಸಮಿತಿ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...