Homeಮುಖಪುಟಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ 'ನಕಲಿ' ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ...

ಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ ‘ನಕಲಿ’ ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ ನಡುವೆ ಜಟಾಪಟಿ

- Advertisement -
- Advertisement -

ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್‌ ಆದ್ಮಿ ಪಕ್ಷ (ಎಎಪಿ) ಭರ್ಜರಿ ಪ್ರಚಾರದ ಮೂಲಕ ತಯಾರಿ ನಡೆಸುತ್ತಿದೆ. ಈ ನಡುವೆ ಸರ್ಕಾರದ ಯೋಜನೆಯೊಂದರ ವಿಷಯದಲ್ಲಿ ಎಎಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಜಟಾಪಟಿ ಏರ್ಪಟ್ಟಿದೆ.

ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡುವ ‘ಸಂಜೀವಿನಿ’ ಎಂಬ ಯೋಜನೆಯನ್ನು ಡಿಸೆಂಬರ್ 18ರಂದು ಮಾಜಿ ಸಿಎಂ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ಧನ ಸಹಾಯ ನೀಡುವ ಯೋಜನೆಯನ್ನು ಕೇಜ್ರಿವಾಲ್ ಘೋಷಿಸಿದ್ದರು. ಚುನಾವಣೆಗೂ ಮೊದಲು 1 ಸಾವಿರ ರೂ. ಕೊಡಲಾಗುವುದು. ಚುನಾವಣೆ ಬಳಿಕ ಮತ್ತೆ ಅಧಿಕಾರಕ್ಕೆ ಬಂದರೆ 2, 100 ರೂ. ನೀಡಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಚುನಾವಣೆ ಪ್ರಚಾರದ ಭಾಗವಾಗಿ ಮನೆ ಮನೆಗೆ ತೆರಳಿ ಎರಡೂ ಯೋಜನೆಗಳಿಗೆ ಅರ್ಹ ಜನರನ್ನು ನೋಂದಣಿ ಮಾಡಿಸುವ ಕಾರ್ಯವನ್ನು ಸ್ವತಃ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಆದರೆ, ಈ ನಡುವೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ “ನಮ್ಮ ಇಲಾಖೆಯಡಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ ಎಂದಿದೆ.

“ಈ ದಿನದವರೆಗೆ ನಮ್ಮಲ್ಲಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ. ಈ ಯೋಜನೆಗಾಗಿ ಹಿರಿಯ ನಾಗರಿಕರ ಮಾಹಿತಿಗಳನ್ನು ಸಂಗ್ರಹಿಸಲು ನಾವು ಯಾವುದೇ ಅಧಿಕಾರಿಗಳನ್ನು ನೇಮಿಸಿಲ್ಲ. ಯಾವುದೇ ಸಂಸ್ಥೆಗೆ ಜವಾಬ್ದಾರಿ ಕೊಟ್ಟಿಲ್ಲ. ಯೋಜನೆಯ ಹೆಸರಿನಲ್ಲಿ ಯಾವುದೇ ಕಾರ್ಡ್‌ಗಳನ್ನು ವಿತರಿಸುತ್ತಿಲ್ಲ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

“ಅಸ್ತಿತ್ವದಲ್ಲಿ ಇಲ್ಲದ ‘ಸಂಜೀವಿನಿ’ ಎಂಬ ಯೋಜನೆಯ ಹೆಸರಿನಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ಮಾಹಿತಿ ಸಂಗ್ರಹಿಸಲು ಯಾರಾದರು ಬಂದರೆ ಮಾಹಿತಿ ಕೊಡಬೇಡಿ. ಯಾವುದೇ ದಾಖಲೆಗೆ ನಿಮ್ಮ ಸಹಿ, ಹೆಬ್ಬೆಟ್ಟಿನ ಗುರುತು ಹಾಕಬೇಡಿ” ಎಂದು ಪ್ರಕಟಣೆಯಲ್ಲಿ ಎಚ್ಚರಿಕೆಯ ಸಲಹೆ ನೀಡಿದೆ.

ಕೇಜ್ರಿವಾಲ್ ಘೋಷಣೆ ಮಾಡಿರುವ ಮತ್ತು ನೋಂದಣಿ ಮಾಡಿಸುತ್ತಿರುವ ಯೋಜನೆಯನ್ನು ಅವರದ್ದೇ ಸರ್ಕಾರದ ಅಧಿಕಾರಿಗಳು ನಕಲಿ ಎಂದು ಪ್ರಕಟಣೆ ಹೊರಡಿಸಿರುವುದು ಎಎಪಿ ನಾಯಕರು ಮುಖಭಂಗ ಅನುಭವಿಸುವಂತೆ ಮಾಡಿದೆ.

ಅಧಿಕಾರಿಗಳ ವಿರುದ್ದ ಕ್ರಮ : ಸಂಜಯ್ ಸಿಂಗ್

ಬಿಜೆಪಿಯ ಒತಡಕ್ಕೆ ಒಳಗಾಗಿ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ ಎಂದು ಎಎಪಿ ಹೇಳಿದೆ. ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಎಪಿ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

“ಯಾಕೆ ಇಷ್ಟೊಂದು ದ್ವೇಷ? ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯ ವಿರುದ್ದ ಪ್ರಕಟಣೆ ಹೊರಡಿಸುವಂತೆ ಬಿಜೆಪಿ ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ. ಒತ್ತಡಕ್ಕೆ ಮಣಿದು ಪ್ರಕಟಣೆ ಹೊರಡಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿ ಹಬ್ಬಿಸುವ ಸುಳ್ಳುಗಳನ್ನು ಸಾರ್ವಜನಿಕರು ನಂಬುವುದಿಲ್ಲ” ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

ದೆಹಲಿ ಜನರನ್ನು ವಂಚಿಸಿದ ಕೇಜ್ರಿವಾಲ್ 

“ಅರವಿಂದ್ ಕೇಜ್ರಿವಾಲ್ ಅಥವಾ ಎಎಪಿ ಸರ್ಕಾರ ದೆಹಲಿ ಸುಳ್ಳು ಯೋಜನೆಯ ಹೆಸರಿನಲ್ಲಿ ದೆಹಲಿಯ ಜನರನ್ನು ವಂಚಿಸಿದೆ. ಅವರ ವಂಚನೆಯನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ. ಈ ಕಾರಣಕ್ಕೆ ಈಗ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಸುಳ್ಳು ಯೋಜನೆಯ ಬಗ್ಗೆ ಡಿಜಿಟಲ್ ವೇದಿಕೆಗಳಲ್ಲಿ ಪ್ರಚಾರ ಮಾಡಿ ಕೇಜ್ರಿವಾಲ್ ದೆಹಲಿ ಜನರಿಗೆ ಮೋಸ ಮಾಡಿದ್ದಾರೆ. ಸಿಎಂ ಅತಿಶಿ ಅವರ ಖಾತೆಯಿಂದ ಹಣ ಡ್ರಾ ಅಗ್ತಿದೆ. ಅದು ಎಲ್ಲಿಗೆ ಹೋಗುತ್ತಿದೆ ಗೊತ್ತಿಲ್ಲ. ಇದರ ಬಗ್ಗೆ ಅವರು ಏಕೆ ಸುಮ್ಮನಿದ್ದಾರೆ?” ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ V/S ಅತಿಶಿ 

ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಅತಿಶಿ ನಡುವೆ ಹೊಂದಾಣಿಕೆಯಿಲ್ಲ. ಈ ಕಾರಣಕ್ಕೆ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ಅಧಿಕಾರಿಗಳು ನಕಲಿ ಎಂದಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಕೇಜ್ರಿವಾಲ್ ಘೋಷಿಸಿದ ಯೋಜನೆ ನಕಲಿ : ಕಾಂಗ್ರೆಸ್

ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಕೂಡ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ವಂಚನೆ ಎಂದು ಹೇಳಿದ್ದಾರೆ. “ಈ ಹಿಂದೆಯೂ ನಾವು ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೆವು… ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿದಾಗ ಹಣ ಬಿಡುಗಡೆ ಮಾಡಲಾಗ್ತಿದೆ. ಇದು ವಂಚನೆಯಾಗಿದೆ. ಯೋಜನೆಗಳಿಗೆ ನೋಂದಾಯಿಸಲು ಜನರ ಮಾಹಿತಿ ಸಂಗ್ರಹಿಸುವುದು ಡೇಟಾ ಸಂಗ್ರಹಿಸುವ ಮಾರ್ಗವಾಗಿದೆ” ಎಂದಿದ್ದಾರೆ.

ಸಿಎಂ ಅತಿಶಿ ಅವರನ್ನು ಶೀಘ್ರದಲ್ಲೇ ಬಂದಿಸಬಹುದು : ಕೇಜ್ರಿವಾಲ್

ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಇಂದು (ಡಿ.25) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು “ನಕಲಿ ಪ್ರಕರಣದಲ್ಲಿ ಅತಿಶಿ ಅವರ ಬಂಧನಕ್ಕೂ ಮುನ್ನ ಎಎಪಿಯ ಹಿರಿಯ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ. ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಂತಹ ಕಲ್ಯಾಣ ಯೋಜನೆಗಳನ್ನು ಕಂಡು ಕೆಲವರು ನಲುಗಿ ಹೋಗಿದ್ದಾರೆ. ಹೀಗಾಗಿ, ಇಂತಹ ಕೆಲಸಕ್ಕೆ ಕೈ ಹಾಕಬಹುದು” ಎಂದಿದ್ದಾರೆ.

ಇದನ್ನೂ ಓದಿ : ʼಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆʼ : ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...