Homeಮುಖಪುಟಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ 'ನಕಲಿ' ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ...

ಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ ‘ನಕಲಿ’ ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ ನಡುವೆ ಜಟಾಪಟಿ

- Advertisement -
- Advertisement -

ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್‌ ಆದ್ಮಿ ಪಕ್ಷ (ಎಎಪಿ) ಭರ್ಜರಿ ಪ್ರಚಾರದ ಮೂಲಕ ತಯಾರಿ ನಡೆಸುತ್ತಿದೆ. ಈ ನಡುವೆ ಸರ್ಕಾರದ ಯೋಜನೆಯೊಂದರ ವಿಷಯದಲ್ಲಿ ಎಎಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಜಟಾಪಟಿ ಏರ್ಪಟ್ಟಿದೆ.

ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡುವ ‘ಸಂಜೀವಿನಿ’ ಎಂಬ ಯೋಜನೆಯನ್ನು ಡಿಸೆಂಬರ್ 18ರಂದು ಮಾಜಿ ಸಿಎಂ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ಧನ ಸಹಾಯ ನೀಡುವ ಯೋಜನೆಯನ್ನು ಕೇಜ್ರಿವಾಲ್ ಘೋಷಿಸಿದ್ದರು. ಚುನಾವಣೆಗೂ ಮೊದಲು 1 ಸಾವಿರ ರೂ. ಕೊಡಲಾಗುವುದು. ಚುನಾವಣೆ ಬಳಿಕ ಮತ್ತೆ ಅಧಿಕಾರಕ್ಕೆ ಬಂದರೆ 2, 100 ರೂ. ನೀಡಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಚುನಾವಣೆ ಪ್ರಚಾರದ ಭಾಗವಾಗಿ ಮನೆ ಮನೆಗೆ ತೆರಳಿ ಎರಡೂ ಯೋಜನೆಗಳಿಗೆ ಅರ್ಹ ಜನರನ್ನು ನೋಂದಣಿ ಮಾಡಿಸುವ ಕಾರ್ಯವನ್ನು ಸ್ವತಃ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಆದರೆ, ಈ ನಡುವೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ “ನಮ್ಮ ಇಲಾಖೆಯಡಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ ಎಂದಿದೆ.

“ಈ ದಿನದವರೆಗೆ ನಮ್ಮಲ್ಲಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ. ಈ ಯೋಜನೆಗಾಗಿ ಹಿರಿಯ ನಾಗರಿಕರ ಮಾಹಿತಿಗಳನ್ನು ಸಂಗ್ರಹಿಸಲು ನಾವು ಯಾವುದೇ ಅಧಿಕಾರಿಗಳನ್ನು ನೇಮಿಸಿಲ್ಲ. ಯಾವುದೇ ಸಂಸ್ಥೆಗೆ ಜವಾಬ್ದಾರಿ ಕೊಟ್ಟಿಲ್ಲ. ಯೋಜನೆಯ ಹೆಸರಿನಲ್ಲಿ ಯಾವುದೇ ಕಾರ್ಡ್‌ಗಳನ್ನು ವಿತರಿಸುತ್ತಿಲ್ಲ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

“ಅಸ್ತಿತ್ವದಲ್ಲಿ ಇಲ್ಲದ ‘ಸಂಜೀವಿನಿ’ ಎಂಬ ಯೋಜನೆಯ ಹೆಸರಿನಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ಮಾಹಿತಿ ಸಂಗ್ರಹಿಸಲು ಯಾರಾದರು ಬಂದರೆ ಮಾಹಿತಿ ಕೊಡಬೇಡಿ. ಯಾವುದೇ ದಾಖಲೆಗೆ ನಿಮ್ಮ ಸಹಿ, ಹೆಬ್ಬೆಟ್ಟಿನ ಗುರುತು ಹಾಕಬೇಡಿ” ಎಂದು ಪ್ರಕಟಣೆಯಲ್ಲಿ ಎಚ್ಚರಿಕೆಯ ಸಲಹೆ ನೀಡಿದೆ.

ಕೇಜ್ರಿವಾಲ್ ಘೋಷಣೆ ಮಾಡಿರುವ ಮತ್ತು ನೋಂದಣಿ ಮಾಡಿಸುತ್ತಿರುವ ಯೋಜನೆಯನ್ನು ಅವರದ್ದೇ ಸರ್ಕಾರದ ಅಧಿಕಾರಿಗಳು ನಕಲಿ ಎಂದು ಪ್ರಕಟಣೆ ಹೊರಡಿಸಿರುವುದು ಎಎಪಿ ನಾಯಕರು ಮುಖಭಂಗ ಅನುಭವಿಸುವಂತೆ ಮಾಡಿದೆ.

ಅಧಿಕಾರಿಗಳ ವಿರುದ್ದ ಕ್ರಮ : ಸಂಜಯ್ ಸಿಂಗ್

ಬಿಜೆಪಿಯ ಒತಡಕ್ಕೆ ಒಳಗಾಗಿ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ ಎಂದು ಎಎಪಿ ಹೇಳಿದೆ. ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಎಪಿ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

“ಯಾಕೆ ಇಷ್ಟೊಂದು ದ್ವೇಷ? ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯ ವಿರುದ್ದ ಪ್ರಕಟಣೆ ಹೊರಡಿಸುವಂತೆ ಬಿಜೆಪಿ ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ. ಒತ್ತಡಕ್ಕೆ ಮಣಿದು ಪ್ರಕಟಣೆ ಹೊರಡಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿ ಹಬ್ಬಿಸುವ ಸುಳ್ಳುಗಳನ್ನು ಸಾರ್ವಜನಿಕರು ನಂಬುವುದಿಲ್ಲ” ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

ದೆಹಲಿ ಜನರನ್ನು ವಂಚಿಸಿದ ಕೇಜ್ರಿವಾಲ್ 

“ಅರವಿಂದ್ ಕೇಜ್ರಿವಾಲ್ ಅಥವಾ ಎಎಪಿ ಸರ್ಕಾರ ದೆಹಲಿ ಸುಳ್ಳು ಯೋಜನೆಯ ಹೆಸರಿನಲ್ಲಿ ದೆಹಲಿಯ ಜನರನ್ನು ವಂಚಿಸಿದೆ. ಅವರ ವಂಚನೆಯನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ. ಈ ಕಾರಣಕ್ಕೆ ಈಗ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಸುಳ್ಳು ಯೋಜನೆಯ ಬಗ್ಗೆ ಡಿಜಿಟಲ್ ವೇದಿಕೆಗಳಲ್ಲಿ ಪ್ರಚಾರ ಮಾಡಿ ಕೇಜ್ರಿವಾಲ್ ದೆಹಲಿ ಜನರಿಗೆ ಮೋಸ ಮಾಡಿದ್ದಾರೆ. ಸಿಎಂ ಅತಿಶಿ ಅವರ ಖಾತೆಯಿಂದ ಹಣ ಡ್ರಾ ಅಗ್ತಿದೆ. ಅದು ಎಲ್ಲಿಗೆ ಹೋಗುತ್ತಿದೆ ಗೊತ್ತಿಲ್ಲ. ಇದರ ಬಗ್ಗೆ ಅವರು ಏಕೆ ಸುಮ್ಮನಿದ್ದಾರೆ?” ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ V/S ಅತಿಶಿ 

ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಅತಿಶಿ ನಡುವೆ ಹೊಂದಾಣಿಕೆಯಿಲ್ಲ. ಈ ಕಾರಣಕ್ಕೆ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ಅಧಿಕಾರಿಗಳು ನಕಲಿ ಎಂದಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಕೇಜ್ರಿವಾಲ್ ಘೋಷಿಸಿದ ಯೋಜನೆ ನಕಲಿ : ಕಾಂಗ್ರೆಸ್

ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಕೂಡ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ವಂಚನೆ ಎಂದು ಹೇಳಿದ್ದಾರೆ. “ಈ ಹಿಂದೆಯೂ ನಾವು ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೆವು… ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿದಾಗ ಹಣ ಬಿಡುಗಡೆ ಮಾಡಲಾಗ್ತಿದೆ. ಇದು ವಂಚನೆಯಾಗಿದೆ. ಯೋಜನೆಗಳಿಗೆ ನೋಂದಾಯಿಸಲು ಜನರ ಮಾಹಿತಿ ಸಂಗ್ರಹಿಸುವುದು ಡೇಟಾ ಸಂಗ್ರಹಿಸುವ ಮಾರ್ಗವಾಗಿದೆ” ಎಂದಿದ್ದಾರೆ.

ಸಿಎಂ ಅತಿಶಿ ಅವರನ್ನು ಶೀಘ್ರದಲ್ಲೇ ಬಂದಿಸಬಹುದು : ಕೇಜ್ರಿವಾಲ್

ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಇಂದು (ಡಿ.25) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು “ನಕಲಿ ಪ್ರಕರಣದಲ್ಲಿ ಅತಿಶಿ ಅವರ ಬಂಧನಕ್ಕೂ ಮುನ್ನ ಎಎಪಿಯ ಹಿರಿಯ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ. ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಂತಹ ಕಲ್ಯಾಣ ಯೋಜನೆಗಳನ್ನು ಕಂಡು ಕೆಲವರು ನಲುಗಿ ಹೋಗಿದ್ದಾರೆ. ಹೀಗಾಗಿ, ಇಂತಹ ಕೆಲಸಕ್ಕೆ ಕೈ ಹಾಕಬಹುದು” ಎಂದಿದ್ದಾರೆ.

ಇದನ್ನೂ ಓದಿ : ʼಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆʼ : ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...