Homeಮುಖಪುಟಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ 'ನಕಲಿ' ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ...

ಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ ‘ನಕಲಿ’ ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ ನಡುವೆ ಜಟಾಪಟಿ

- Advertisement -
- Advertisement -

ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್‌ ಆದ್ಮಿ ಪಕ್ಷ (ಎಎಪಿ) ಭರ್ಜರಿ ಪ್ರಚಾರದ ಮೂಲಕ ತಯಾರಿ ನಡೆಸುತ್ತಿದೆ. ಈ ನಡುವೆ ಸರ್ಕಾರದ ಯೋಜನೆಯೊಂದರ ವಿಷಯದಲ್ಲಿ ಎಎಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಜಟಾಪಟಿ ಏರ್ಪಟ್ಟಿದೆ.

ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡುವ ‘ಸಂಜೀವಿನಿ’ ಎಂಬ ಯೋಜನೆಯನ್ನು ಡಿಸೆಂಬರ್ 18ರಂದು ಮಾಜಿ ಸಿಎಂ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ಧನ ಸಹಾಯ ನೀಡುವ ಯೋಜನೆಯನ್ನು ಕೇಜ್ರಿವಾಲ್ ಘೋಷಿಸಿದ್ದರು. ಚುನಾವಣೆಗೂ ಮೊದಲು 1 ಸಾವಿರ ರೂ. ಕೊಡಲಾಗುವುದು. ಚುನಾವಣೆ ಬಳಿಕ ಮತ್ತೆ ಅಧಿಕಾರಕ್ಕೆ ಬಂದರೆ 2, 100 ರೂ. ನೀಡಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಚುನಾವಣೆ ಪ್ರಚಾರದ ಭಾಗವಾಗಿ ಮನೆ ಮನೆಗೆ ತೆರಳಿ ಎರಡೂ ಯೋಜನೆಗಳಿಗೆ ಅರ್ಹ ಜನರನ್ನು ನೋಂದಣಿ ಮಾಡಿಸುವ ಕಾರ್ಯವನ್ನು ಸ್ವತಃ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಆದರೆ, ಈ ನಡುವೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ “ನಮ್ಮ ಇಲಾಖೆಯಡಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ ಎಂದಿದೆ.

“ಈ ದಿನದವರೆಗೆ ನಮ್ಮಲ್ಲಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ. ಈ ಯೋಜನೆಗಾಗಿ ಹಿರಿಯ ನಾಗರಿಕರ ಮಾಹಿತಿಗಳನ್ನು ಸಂಗ್ರಹಿಸಲು ನಾವು ಯಾವುದೇ ಅಧಿಕಾರಿಗಳನ್ನು ನೇಮಿಸಿಲ್ಲ. ಯಾವುದೇ ಸಂಸ್ಥೆಗೆ ಜವಾಬ್ದಾರಿ ಕೊಟ್ಟಿಲ್ಲ. ಯೋಜನೆಯ ಹೆಸರಿನಲ್ಲಿ ಯಾವುದೇ ಕಾರ್ಡ್‌ಗಳನ್ನು ವಿತರಿಸುತ್ತಿಲ್ಲ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

“ಅಸ್ತಿತ್ವದಲ್ಲಿ ಇಲ್ಲದ ‘ಸಂಜೀವಿನಿ’ ಎಂಬ ಯೋಜನೆಯ ಹೆಸರಿನಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ಮಾಹಿತಿ ಸಂಗ್ರಹಿಸಲು ಯಾರಾದರು ಬಂದರೆ ಮಾಹಿತಿ ಕೊಡಬೇಡಿ. ಯಾವುದೇ ದಾಖಲೆಗೆ ನಿಮ್ಮ ಸಹಿ, ಹೆಬ್ಬೆಟ್ಟಿನ ಗುರುತು ಹಾಕಬೇಡಿ” ಎಂದು ಪ್ರಕಟಣೆಯಲ್ಲಿ ಎಚ್ಚರಿಕೆಯ ಸಲಹೆ ನೀಡಿದೆ.

ಕೇಜ್ರಿವಾಲ್ ಘೋಷಣೆ ಮಾಡಿರುವ ಮತ್ತು ನೋಂದಣಿ ಮಾಡಿಸುತ್ತಿರುವ ಯೋಜನೆಯನ್ನು ಅವರದ್ದೇ ಸರ್ಕಾರದ ಅಧಿಕಾರಿಗಳು ನಕಲಿ ಎಂದು ಪ್ರಕಟಣೆ ಹೊರಡಿಸಿರುವುದು ಎಎಪಿ ನಾಯಕರು ಮುಖಭಂಗ ಅನುಭವಿಸುವಂತೆ ಮಾಡಿದೆ.

ಅಧಿಕಾರಿಗಳ ವಿರುದ್ದ ಕ್ರಮ : ಸಂಜಯ್ ಸಿಂಗ್

ಬಿಜೆಪಿಯ ಒತಡಕ್ಕೆ ಒಳಗಾಗಿ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ ಎಂದು ಎಎಪಿ ಹೇಳಿದೆ. ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಎಪಿ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

“ಯಾಕೆ ಇಷ್ಟೊಂದು ದ್ವೇಷ? ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯ ವಿರುದ್ದ ಪ್ರಕಟಣೆ ಹೊರಡಿಸುವಂತೆ ಬಿಜೆಪಿ ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ. ಒತ್ತಡಕ್ಕೆ ಮಣಿದು ಪ್ರಕಟಣೆ ಹೊರಡಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿ ಹಬ್ಬಿಸುವ ಸುಳ್ಳುಗಳನ್ನು ಸಾರ್ವಜನಿಕರು ನಂಬುವುದಿಲ್ಲ” ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

ದೆಹಲಿ ಜನರನ್ನು ವಂಚಿಸಿದ ಕೇಜ್ರಿವಾಲ್ 

“ಅರವಿಂದ್ ಕೇಜ್ರಿವಾಲ್ ಅಥವಾ ಎಎಪಿ ಸರ್ಕಾರ ದೆಹಲಿ ಸುಳ್ಳು ಯೋಜನೆಯ ಹೆಸರಿನಲ್ಲಿ ದೆಹಲಿಯ ಜನರನ್ನು ವಂಚಿಸಿದೆ. ಅವರ ವಂಚನೆಯನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ. ಈ ಕಾರಣಕ್ಕೆ ಈಗ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಸುಳ್ಳು ಯೋಜನೆಯ ಬಗ್ಗೆ ಡಿಜಿಟಲ್ ವೇದಿಕೆಗಳಲ್ಲಿ ಪ್ರಚಾರ ಮಾಡಿ ಕೇಜ್ರಿವಾಲ್ ದೆಹಲಿ ಜನರಿಗೆ ಮೋಸ ಮಾಡಿದ್ದಾರೆ. ಸಿಎಂ ಅತಿಶಿ ಅವರ ಖಾತೆಯಿಂದ ಹಣ ಡ್ರಾ ಅಗ್ತಿದೆ. ಅದು ಎಲ್ಲಿಗೆ ಹೋಗುತ್ತಿದೆ ಗೊತ್ತಿಲ್ಲ. ಇದರ ಬಗ್ಗೆ ಅವರು ಏಕೆ ಸುಮ್ಮನಿದ್ದಾರೆ?” ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ V/S ಅತಿಶಿ 

ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಅತಿಶಿ ನಡುವೆ ಹೊಂದಾಣಿಕೆಯಿಲ್ಲ. ಈ ಕಾರಣಕ್ಕೆ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ಅಧಿಕಾರಿಗಳು ನಕಲಿ ಎಂದಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಕೇಜ್ರಿವಾಲ್ ಘೋಷಿಸಿದ ಯೋಜನೆ ನಕಲಿ : ಕಾಂಗ್ರೆಸ್

ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಕೂಡ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ವಂಚನೆ ಎಂದು ಹೇಳಿದ್ದಾರೆ. “ಈ ಹಿಂದೆಯೂ ನಾವು ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೆವು… ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿದಾಗ ಹಣ ಬಿಡುಗಡೆ ಮಾಡಲಾಗ್ತಿದೆ. ಇದು ವಂಚನೆಯಾಗಿದೆ. ಯೋಜನೆಗಳಿಗೆ ನೋಂದಾಯಿಸಲು ಜನರ ಮಾಹಿತಿ ಸಂಗ್ರಹಿಸುವುದು ಡೇಟಾ ಸಂಗ್ರಹಿಸುವ ಮಾರ್ಗವಾಗಿದೆ” ಎಂದಿದ್ದಾರೆ.

ಸಿಎಂ ಅತಿಶಿ ಅವರನ್ನು ಶೀಘ್ರದಲ್ಲೇ ಬಂದಿಸಬಹುದು : ಕೇಜ್ರಿವಾಲ್

ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಇಂದು (ಡಿ.25) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು “ನಕಲಿ ಪ್ರಕರಣದಲ್ಲಿ ಅತಿಶಿ ಅವರ ಬಂಧನಕ್ಕೂ ಮುನ್ನ ಎಎಪಿಯ ಹಿರಿಯ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ. ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಂತಹ ಕಲ್ಯಾಣ ಯೋಜನೆಗಳನ್ನು ಕಂಡು ಕೆಲವರು ನಲುಗಿ ಹೋಗಿದ್ದಾರೆ. ಹೀಗಾಗಿ, ಇಂತಹ ಕೆಲಸಕ್ಕೆ ಕೈ ಹಾಕಬಹುದು” ಎಂದಿದ್ದಾರೆ.

ಇದನ್ನೂ ಓದಿ : ʼಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆʼ : ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...