Homeಕ್ರೀಡೆಕ್ರಿಕೆಟ್ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

- Advertisement -
- Advertisement -

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ರನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ನಡೆಯುತ್ತಿರುವ 3ನೇ ಏಕದಿನ ಪಂದ್ಯದಿಂದಲೂ ಸಹ ಮತ್ತೆ ಅವರನ್ನು ಕೈಬಿಟ್ಟಿರುವುದಕ್ಕೆ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. #JusticeForSanjuSamson ಹ್ಯಾಸ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಹ ದನಿಗೂಡಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯಕ್ಕೆ ಮಾತ್ರ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ ಎಂದು ಆಕ್ರೋಶ ಕೇಳಿಬಂದಿದೆ.

ಮೊದಲೇ ಏಕದಿನ ಪಂದ್ಯದಲ್ಲಿ 306 ರನ್‌ಗಳ ಉತ್ತಮ ಮೊತ್ತ ಗಳಿಸಿಯೂ ಭಾರತ ತಂಡ ಸೋಲು ಅನುಭವಿಸಿತ್ತು. ಆ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ 33 ರನ್ ಗಳಿಸಿದ್ದರು. ಆದರೂ ಆಲ್‌ರೌಂಡರ್ ಬೇಕೆಂಬ ಕಾರಣಕ್ಕೆ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಕೋಕ್ ನೀಡಿ ದೀಪಕ್ ಹೂಡಾರನ್ನು ಆಡಿಸಲಾಗಿತ್ತು. ಮಳೆಯಿಂದ ಆ ಪಂದ್ಯ ರದ್ದಾಯಿತು. ಇಂದು ನಡೆದ ಮೂರನೇ ಪಂದ್ಯದಲ್ಲಿಯೂ ಸಹ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿಲ್ಲ. ಸಂಜು ಸ್ಯಾಮ್ಸನ್ ಬದಲಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್ ಕೈಬಿಡಬಹುದಿತ್ತಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂತ್ ವರ್ಸಸ್ ಸ್ಯಾಮ್ಸನ್

ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಹೋಲಿಕೆ ಆರಂಭಿಸಿದ್ದಾರೆ. 2015ರಲ್ಲಿಯೇ ಪಂತ್‌ಗಿಂತಲೂ ಮೊದಲೇ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸಂಜು ಸ್ಯಾಮ್ಸನ್‌ಗೆ ಈ ಏಳು ವರ್ಷಗಳಲ್ಲಿ ಕೇವಲ 27 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಆನಂತರ ಬಂದ ರಿಷಬ್‌ ಪಂತ್‌ಗೆ 95 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಿದ್ದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ರವರ ಸರಾಸರಿ 6 ಇದ್ದರೆ ರಿಷಬ್ ಪಂತ್ ಸರಾಸರಿ ಕೇವಲ 35 ಇದೆ. ಆದರೂ ರಿಷಬ್ ಪಂತ್‌ಗೆ ಏಕೆ ಅವಕಾಶ? ನ್ಯೂಜಿಲೆಂಡ್ ವಿರುದ್ಧದ ಎರಡು ಇನ್ನಿಂಗ್ಸ್‌ಗಳಲ್ಲಿ ಪಂತ್ ಕ್ರಮವಾಗಿ  ಕೇವಲ 15, 10 ರನ್ ಗಳಿಸಿದ್ದಾರೆ ಅಷ್ಟೇ. ಆದರೂ ಅವರಿಗೆ ಅವಕಾಶವೇಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಶಶಿ ತರೂರ್, “ಪಂತ್ ನಂ.4ರಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸುವುದು ಮುಖ್ಯವಾಗಿದೆ ಎನ್ನುತ್ತಾರೆ ವಿವಿಎಸ್ ಲಕ್ಷ್ಮಣ್. ಪಂತ್ ತಮ್ಮ ಕೊನೆಯ 11 ಇನ್ನಿಂಗ್ಸ್‌ಗಳಲ್ಲಿ ಹತ್ತರಲ್ಲಿ ವಿಫಲರಾಗಿ ಔಟ್‌ ಆಫ್ ಫಾರ್ಮ್ ಇರುವ ಉತ್ತಮ ಆಟಗಾರರಾಗಿದ್ದಾರೆ; ODI ಗಳಲ್ಲಿ ಸ್ಯಾಮ್ಸನ್ ಸರಾಸರಿ 66, ಅವರು ತನ್ನ ಕೊನೆಯ ಐದು ಪಂದ್ಯಗಳಲ್ಲಿ ರನ್ ಗಳಿಸಿದ್ದಾರೆ. ಆದರೂ ಬೆಂಚ್‌ನಲ್ಲಿದ್ದಾರೆ. ಹೋಗಿ ಹುಡುಕಿಕೊಳ್ಳಿ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಪಂರತ್ ಕೇವಲ 10 ರನ್‌ಗಳಿಗೆ ಔಟ್‌ ಆದ ನಂತರ ಮತ್ತೊಂದು ಟ್ವೀಟ್ ಮಾಡಿರುವ ತರೂರ್, “ಪಂತ್ ಮತ್ತೊಮ್ಮೆ ವಿಫಲವಾಗಿದ್ದಾರೆ. ಅವರಿಗೆ ವೈಟ್ ಬಾಲ್ ಕ್ರಿಕೆಟ್‌ನಿಂದ ವಿರಾಮ ಬೇಕಿದೆ. ಆದರೆ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ನಿರಾಕರಿಸಲಾಗಿದೆ. ಅವರು ಭಾರತದ ಉತ್ತಮ ಬ್ಯಾಟ್ಸ್‌ಮನ್ ಎಂದು ನಿರೂಪಿಸಲು ಮತ್ತೆ ಐಪಿಎಲ್‌ ಬರುವವರೆಗೂ ಕಾಯಬೇಕಿದೆ” ಎಂದು ಕಿಡಿಕಾರಿದ್ದಾರೆ.

ಇನ್ನು ಸ್ಯಾಮ್ಸನ್ ಸ್ಥಾನಕ್ಕೆ ಬಂದಿದ್ದ ದೀಪಕ್ ಹೂಡಾ ಸಹ ಇಂದು ವಿಫಲರಾಗಿದ್ದಾರೆ. ಅವರು ಕೇವಲ 12 ರನ್‌ಗಳಿಗೆ ಔಟ್ ಆಗಿದ್ದಾರೆ.

ಫಿಫಾ ವರ್ಲ್ಡ್‌ಕಪ್ ಪುಟ್ಬಾಲ್ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಪರವಾಗಿ ಅಭಿಮಾನಿಗಳು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...