Homeಕ್ರೀಡೆಕ್ರಿಕೆಟ್ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

- Advertisement -
- Advertisement -

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ರನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ನಡೆಯುತ್ತಿರುವ 3ನೇ ಏಕದಿನ ಪಂದ್ಯದಿಂದಲೂ ಸಹ ಮತ್ತೆ ಅವರನ್ನು ಕೈಬಿಟ್ಟಿರುವುದಕ್ಕೆ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. #JusticeForSanjuSamson ಹ್ಯಾಸ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಹ ದನಿಗೂಡಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯಕ್ಕೆ ಮಾತ್ರ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ ಎಂದು ಆಕ್ರೋಶ ಕೇಳಿಬಂದಿದೆ.

ಮೊದಲೇ ಏಕದಿನ ಪಂದ್ಯದಲ್ಲಿ 306 ರನ್‌ಗಳ ಉತ್ತಮ ಮೊತ್ತ ಗಳಿಸಿಯೂ ಭಾರತ ತಂಡ ಸೋಲು ಅನುಭವಿಸಿತ್ತು. ಆ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ 33 ರನ್ ಗಳಿಸಿದ್ದರು. ಆದರೂ ಆಲ್‌ರೌಂಡರ್ ಬೇಕೆಂಬ ಕಾರಣಕ್ಕೆ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಕೋಕ್ ನೀಡಿ ದೀಪಕ್ ಹೂಡಾರನ್ನು ಆಡಿಸಲಾಗಿತ್ತು. ಮಳೆಯಿಂದ ಆ ಪಂದ್ಯ ರದ್ದಾಯಿತು. ಇಂದು ನಡೆದ ಮೂರನೇ ಪಂದ್ಯದಲ್ಲಿಯೂ ಸಹ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿಲ್ಲ. ಸಂಜು ಸ್ಯಾಮ್ಸನ್ ಬದಲಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್ ಕೈಬಿಡಬಹುದಿತ್ತಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂತ್ ವರ್ಸಸ್ ಸ್ಯಾಮ್ಸನ್

ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಹೋಲಿಕೆ ಆರಂಭಿಸಿದ್ದಾರೆ. 2015ರಲ್ಲಿಯೇ ಪಂತ್‌ಗಿಂತಲೂ ಮೊದಲೇ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸಂಜು ಸ್ಯಾಮ್ಸನ್‌ಗೆ ಈ ಏಳು ವರ್ಷಗಳಲ್ಲಿ ಕೇವಲ 27 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಆನಂತರ ಬಂದ ರಿಷಬ್‌ ಪಂತ್‌ಗೆ 95 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಿದ್ದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ರವರ ಸರಾಸರಿ 6 ಇದ್ದರೆ ರಿಷಬ್ ಪಂತ್ ಸರಾಸರಿ ಕೇವಲ 35 ಇದೆ. ಆದರೂ ರಿಷಬ್ ಪಂತ್‌ಗೆ ಏಕೆ ಅವಕಾಶ? ನ್ಯೂಜಿಲೆಂಡ್ ವಿರುದ್ಧದ ಎರಡು ಇನ್ನಿಂಗ್ಸ್‌ಗಳಲ್ಲಿ ಪಂತ್ ಕ್ರಮವಾಗಿ  ಕೇವಲ 15, 10 ರನ್ ಗಳಿಸಿದ್ದಾರೆ ಅಷ್ಟೇ. ಆದರೂ ಅವರಿಗೆ ಅವಕಾಶವೇಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಶಶಿ ತರೂರ್, “ಪಂತ್ ನಂ.4ರಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸುವುದು ಮುಖ್ಯವಾಗಿದೆ ಎನ್ನುತ್ತಾರೆ ವಿವಿಎಸ್ ಲಕ್ಷ್ಮಣ್. ಪಂತ್ ತಮ್ಮ ಕೊನೆಯ 11 ಇನ್ನಿಂಗ್ಸ್‌ಗಳಲ್ಲಿ ಹತ್ತರಲ್ಲಿ ವಿಫಲರಾಗಿ ಔಟ್‌ ಆಫ್ ಫಾರ್ಮ್ ಇರುವ ಉತ್ತಮ ಆಟಗಾರರಾಗಿದ್ದಾರೆ; ODI ಗಳಲ್ಲಿ ಸ್ಯಾಮ್ಸನ್ ಸರಾಸರಿ 66, ಅವರು ತನ್ನ ಕೊನೆಯ ಐದು ಪಂದ್ಯಗಳಲ್ಲಿ ರನ್ ಗಳಿಸಿದ್ದಾರೆ. ಆದರೂ ಬೆಂಚ್‌ನಲ್ಲಿದ್ದಾರೆ. ಹೋಗಿ ಹುಡುಕಿಕೊಳ್ಳಿ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಪಂರತ್ ಕೇವಲ 10 ರನ್‌ಗಳಿಗೆ ಔಟ್‌ ಆದ ನಂತರ ಮತ್ತೊಂದು ಟ್ವೀಟ್ ಮಾಡಿರುವ ತರೂರ್, “ಪಂತ್ ಮತ್ತೊಮ್ಮೆ ವಿಫಲವಾಗಿದ್ದಾರೆ. ಅವರಿಗೆ ವೈಟ್ ಬಾಲ್ ಕ್ರಿಕೆಟ್‌ನಿಂದ ವಿರಾಮ ಬೇಕಿದೆ. ಆದರೆ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ನಿರಾಕರಿಸಲಾಗಿದೆ. ಅವರು ಭಾರತದ ಉತ್ತಮ ಬ್ಯಾಟ್ಸ್‌ಮನ್ ಎಂದು ನಿರೂಪಿಸಲು ಮತ್ತೆ ಐಪಿಎಲ್‌ ಬರುವವರೆಗೂ ಕಾಯಬೇಕಿದೆ” ಎಂದು ಕಿಡಿಕಾರಿದ್ದಾರೆ.

ಇನ್ನು ಸ್ಯಾಮ್ಸನ್ ಸ್ಥಾನಕ್ಕೆ ಬಂದಿದ್ದ ದೀಪಕ್ ಹೂಡಾ ಸಹ ಇಂದು ವಿಫಲರಾಗಿದ್ದಾರೆ. ಅವರು ಕೇವಲ 12 ರನ್‌ಗಳಿಗೆ ಔಟ್ ಆಗಿದ್ದಾರೆ.

ಫಿಫಾ ವರ್ಲ್ಡ್‌ಕಪ್ ಪುಟ್ಬಾಲ್ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಪರವಾಗಿ ಅಭಿಮಾನಿಗಳು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...