Homeಕ್ರೀಡೆಕ್ರಿಕೆಟ್ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

- Advertisement -
- Advertisement -

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ರನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ನಡೆಯುತ್ತಿರುವ 3ನೇ ಏಕದಿನ ಪಂದ್ಯದಿಂದಲೂ ಸಹ ಮತ್ತೆ ಅವರನ್ನು ಕೈಬಿಟ್ಟಿರುವುದಕ್ಕೆ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. #JusticeForSanjuSamson ಹ್ಯಾಸ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಹ ದನಿಗೂಡಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯಕ್ಕೆ ಮಾತ್ರ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ ಎಂದು ಆಕ್ರೋಶ ಕೇಳಿಬಂದಿದೆ.

ಮೊದಲೇ ಏಕದಿನ ಪಂದ್ಯದಲ್ಲಿ 306 ರನ್‌ಗಳ ಉತ್ತಮ ಮೊತ್ತ ಗಳಿಸಿಯೂ ಭಾರತ ತಂಡ ಸೋಲು ಅನುಭವಿಸಿತ್ತು. ಆ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ 33 ರನ್ ಗಳಿಸಿದ್ದರು. ಆದರೂ ಆಲ್‌ರೌಂಡರ್ ಬೇಕೆಂಬ ಕಾರಣಕ್ಕೆ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಕೋಕ್ ನೀಡಿ ದೀಪಕ್ ಹೂಡಾರನ್ನು ಆಡಿಸಲಾಗಿತ್ತು. ಮಳೆಯಿಂದ ಆ ಪಂದ್ಯ ರದ್ದಾಯಿತು. ಇಂದು ನಡೆದ ಮೂರನೇ ಪಂದ್ಯದಲ್ಲಿಯೂ ಸಹ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿಲ್ಲ. ಸಂಜು ಸ್ಯಾಮ್ಸನ್ ಬದಲಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್ ಕೈಬಿಡಬಹುದಿತ್ತಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂತ್ ವರ್ಸಸ್ ಸ್ಯಾಮ್ಸನ್

ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಹೋಲಿಕೆ ಆರಂಭಿಸಿದ್ದಾರೆ. 2015ರಲ್ಲಿಯೇ ಪಂತ್‌ಗಿಂತಲೂ ಮೊದಲೇ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸಂಜು ಸ್ಯಾಮ್ಸನ್‌ಗೆ ಈ ಏಳು ವರ್ಷಗಳಲ್ಲಿ ಕೇವಲ 27 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಆನಂತರ ಬಂದ ರಿಷಬ್‌ ಪಂತ್‌ಗೆ 95 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಿದ್ದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ರವರ ಸರಾಸರಿ 6 ಇದ್ದರೆ ರಿಷಬ್ ಪಂತ್ ಸರಾಸರಿ ಕೇವಲ 35 ಇದೆ. ಆದರೂ ರಿಷಬ್ ಪಂತ್‌ಗೆ ಏಕೆ ಅವಕಾಶ? ನ್ಯೂಜಿಲೆಂಡ್ ವಿರುದ್ಧದ ಎರಡು ಇನ್ನಿಂಗ್ಸ್‌ಗಳಲ್ಲಿ ಪಂತ್ ಕ್ರಮವಾಗಿ  ಕೇವಲ 15, 10 ರನ್ ಗಳಿಸಿದ್ದಾರೆ ಅಷ್ಟೇ. ಆದರೂ ಅವರಿಗೆ ಅವಕಾಶವೇಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಶಶಿ ತರೂರ್, “ಪಂತ್ ನಂ.4ರಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸುವುದು ಮುಖ್ಯವಾಗಿದೆ ಎನ್ನುತ್ತಾರೆ ವಿವಿಎಸ್ ಲಕ್ಷ್ಮಣ್. ಪಂತ್ ತಮ್ಮ ಕೊನೆಯ 11 ಇನ್ನಿಂಗ್ಸ್‌ಗಳಲ್ಲಿ ಹತ್ತರಲ್ಲಿ ವಿಫಲರಾಗಿ ಔಟ್‌ ಆಫ್ ಫಾರ್ಮ್ ಇರುವ ಉತ್ತಮ ಆಟಗಾರರಾಗಿದ್ದಾರೆ; ODI ಗಳಲ್ಲಿ ಸ್ಯಾಮ್ಸನ್ ಸರಾಸರಿ 66, ಅವರು ತನ್ನ ಕೊನೆಯ ಐದು ಪಂದ್ಯಗಳಲ್ಲಿ ರನ್ ಗಳಿಸಿದ್ದಾರೆ. ಆದರೂ ಬೆಂಚ್‌ನಲ್ಲಿದ್ದಾರೆ. ಹೋಗಿ ಹುಡುಕಿಕೊಳ್ಳಿ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಪಂರತ್ ಕೇವಲ 10 ರನ್‌ಗಳಿಗೆ ಔಟ್‌ ಆದ ನಂತರ ಮತ್ತೊಂದು ಟ್ವೀಟ್ ಮಾಡಿರುವ ತರೂರ್, “ಪಂತ್ ಮತ್ತೊಮ್ಮೆ ವಿಫಲವಾಗಿದ್ದಾರೆ. ಅವರಿಗೆ ವೈಟ್ ಬಾಲ್ ಕ್ರಿಕೆಟ್‌ನಿಂದ ವಿರಾಮ ಬೇಕಿದೆ. ಆದರೆ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ನಿರಾಕರಿಸಲಾಗಿದೆ. ಅವರು ಭಾರತದ ಉತ್ತಮ ಬ್ಯಾಟ್ಸ್‌ಮನ್ ಎಂದು ನಿರೂಪಿಸಲು ಮತ್ತೆ ಐಪಿಎಲ್‌ ಬರುವವರೆಗೂ ಕಾಯಬೇಕಿದೆ” ಎಂದು ಕಿಡಿಕಾರಿದ್ದಾರೆ.

ಇನ್ನು ಸ್ಯಾಮ್ಸನ್ ಸ್ಥಾನಕ್ಕೆ ಬಂದಿದ್ದ ದೀಪಕ್ ಹೂಡಾ ಸಹ ಇಂದು ವಿಫಲರಾಗಿದ್ದಾರೆ. ಅವರು ಕೇವಲ 12 ರನ್‌ಗಳಿಗೆ ಔಟ್ ಆಗಿದ್ದಾರೆ.

ಫಿಫಾ ವರ್ಲ್ಡ್‌ಕಪ್ ಪುಟ್ಬಾಲ್ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಪರವಾಗಿ ಅಭಿಮಾನಿಗಳು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...