Homeಕ್ರೀಡೆಕ್ರಿಕೆಟ್ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

- Advertisement -
- Advertisement -

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ರನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ನಡೆಯುತ್ತಿರುವ 3ನೇ ಏಕದಿನ ಪಂದ್ಯದಿಂದಲೂ ಸಹ ಮತ್ತೆ ಅವರನ್ನು ಕೈಬಿಟ್ಟಿರುವುದಕ್ಕೆ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. #JusticeForSanjuSamson ಹ್ಯಾಸ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಹ ದನಿಗೂಡಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯಕ್ಕೆ ಮಾತ್ರ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ ಎಂದು ಆಕ್ರೋಶ ಕೇಳಿಬಂದಿದೆ.

ಮೊದಲೇ ಏಕದಿನ ಪಂದ್ಯದಲ್ಲಿ 306 ರನ್‌ಗಳ ಉತ್ತಮ ಮೊತ್ತ ಗಳಿಸಿಯೂ ಭಾರತ ತಂಡ ಸೋಲು ಅನುಭವಿಸಿತ್ತು. ಆ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ 33 ರನ್ ಗಳಿಸಿದ್ದರು. ಆದರೂ ಆಲ್‌ರೌಂಡರ್ ಬೇಕೆಂಬ ಕಾರಣಕ್ಕೆ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಕೋಕ್ ನೀಡಿ ದೀಪಕ್ ಹೂಡಾರನ್ನು ಆಡಿಸಲಾಗಿತ್ತು. ಮಳೆಯಿಂದ ಆ ಪಂದ್ಯ ರದ್ದಾಯಿತು. ಇಂದು ನಡೆದ ಮೂರನೇ ಪಂದ್ಯದಲ್ಲಿಯೂ ಸಹ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿಲ್ಲ. ಸಂಜು ಸ್ಯಾಮ್ಸನ್ ಬದಲಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್ ಕೈಬಿಡಬಹುದಿತ್ತಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂತ್ ವರ್ಸಸ್ ಸ್ಯಾಮ್ಸನ್

ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಹೋಲಿಕೆ ಆರಂಭಿಸಿದ್ದಾರೆ. 2015ರಲ್ಲಿಯೇ ಪಂತ್‌ಗಿಂತಲೂ ಮೊದಲೇ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸಂಜು ಸ್ಯಾಮ್ಸನ್‌ಗೆ ಈ ಏಳು ವರ್ಷಗಳಲ್ಲಿ ಕೇವಲ 27 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಆನಂತರ ಬಂದ ರಿಷಬ್‌ ಪಂತ್‌ಗೆ 95 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಿದ್ದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ರವರ ಸರಾಸರಿ 6 ಇದ್ದರೆ ರಿಷಬ್ ಪಂತ್ ಸರಾಸರಿ ಕೇವಲ 35 ಇದೆ. ಆದರೂ ರಿಷಬ್ ಪಂತ್‌ಗೆ ಏಕೆ ಅವಕಾಶ? ನ್ಯೂಜಿಲೆಂಡ್ ವಿರುದ್ಧದ ಎರಡು ಇನ್ನಿಂಗ್ಸ್‌ಗಳಲ್ಲಿ ಪಂತ್ ಕ್ರಮವಾಗಿ  ಕೇವಲ 15, 10 ರನ್ ಗಳಿಸಿದ್ದಾರೆ ಅಷ್ಟೇ. ಆದರೂ ಅವರಿಗೆ ಅವಕಾಶವೇಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಶಶಿ ತರೂರ್, “ಪಂತ್ ನಂ.4ರಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸುವುದು ಮುಖ್ಯವಾಗಿದೆ ಎನ್ನುತ್ತಾರೆ ವಿವಿಎಸ್ ಲಕ್ಷ್ಮಣ್. ಪಂತ್ ತಮ್ಮ ಕೊನೆಯ 11 ಇನ್ನಿಂಗ್ಸ್‌ಗಳಲ್ಲಿ ಹತ್ತರಲ್ಲಿ ವಿಫಲರಾಗಿ ಔಟ್‌ ಆಫ್ ಫಾರ್ಮ್ ಇರುವ ಉತ್ತಮ ಆಟಗಾರರಾಗಿದ್ದಾರೆ; ODI ಗಳಲ್ಲಿ ಸ್ಯಾಮ್ಸನ್ ಸರಾಸರಿ 66, ಅವರು ತನ್ನ ಕೊನೆಯ ಐದು ಪಂದ್ಯಗಳಲ್ಲಿ ರನ್ ಗಳಿಸಿದ್ದಾರೆ. ಆದರೂ ಬೆಂಚ್‌ನಲ್ಲಿದ್ದಾರೆ. ಹೋಗಿ ಹುಡುಕಿಕೊಳ್ಳಿ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಪಂರತ್ ಕೇವಲ 10 ರನ್‌ಗಳಿಗೆ ಔಟ್‌ ಆದ ನಂತರ ಮತ್ತೊಂದು ಟ್ವೀಟ್ ಮಾಡಿರುವ ತರೂರ್, “ಪಂತ್ ಮತ್ತೊಮ್ಮೆ ವಿಫಲವಾಗಿದ್ದಾರೆ. ಅವರಿಗೆ ವೈಟ್ ಬಾಲ್ ಕ್ರಿಕೆಟ್‌ನಿಂದ ವಿರಾಮ ಬೇಕಿದೆ. ಆದರೆ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ನಿರಾಕರಿಸಲಾಗಿದೆ. ಅವರು ಭಾರತದ ಉತ್ತಮ ಬ್ಯಾಟ್ಸ್‌ಮನ್ ಎಂದು ನಿರೂಪಿಸಲು ಮತ್ತೆ ಐಪಿಎಲ್‌ ಬರುವವರೆಗೂ ಕಾಯಬೇಕಿದೆ” ಎಂದು ಕಿಡಿಕಾರಿದ್ದಾರೆ.

ಇನ್ನು ಸ್ಯಾಮ್ಸನ್ ಸ್ಥಾನಕ್ಕೆ ಬಂದಿದ್ದ ದೀಪಕ್ ಹೂಡಾ ಸಹ ಇಂದು ವಿಫಲರಾಗಿದ್ದಾರೆ. ಅವರು ಕೇವಲ 12 ರನ್‌ಗಳಿಗೆ ಔಟ್ ಆಗಿದ್ದಾರೆ.

ಫಿಫಾ ವರ್ಲ್ಡ್‌ಕಪ್ ಪುಟ್ಬಾಲ್ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಪರವಾಗಿ ಅಭಿಮಾನಿಗಳು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...