Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...