Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...