Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...