Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...