Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...