Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....