Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...