Homeಮುಖಪುಟಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

- Advertisement -
- Advertisement -

ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ಎನ್ನುವುದನ್ನು ಬಹಳ ಮಂದಿ ಮರೆತುಬಿಟ್ಟಿದ್ದಾರೆ.

ಮೊದಲನೆಯದಾಗಿ, ಉದ್ಯಮವಾಗಿ ಪರಿವರ್ತನೆಗೊಳ್ಳುತ್ತಿದ್ದ ಕನ್ನಡ ಮಾಧ್ಯಮ‌ ಕ್ಷೇತ್ರವನ್ನು ಪತ್ರಿಕಾ ಧರ್ಮವನ್ನೇ ಮರೆತ ಕೇವಲ ಲಾಭ-ನಷ್ಟದ ವ್ಯಾಪಾರವನ್ನಾಗಿ‌ ಮಾಡಿದವರು ಸಂಕೇಶ್ವರ್. ಇಂಗ್ಲೀಷ್‌ ಮಾಧ್ಯಮದಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಾರಂಭಿಸಿದ್ದ ಬೆಲೆ‌ ಸಮರದ ಅನಾರೋಗ್ಯ‌ ಪೈಪೋಟಿಯ ವ್ಯಾಪಾರಿ ತಂತ್ರವನ್ನು‌ ವಿಜಯ ಕರ್ನಾಟಕದ ಮೂಲಕ ಕರ್ನಾಟಕಕ್ಕೆ ಪರಿಚಯಿಸಿದವರು ಸಂಕೇಶ್ವರ್. (ಒಂದು ರೂಪಾಯಿಗೆ ಪತ್ರಿಕೆ, ಪತ್ರಿಕೆಯ ಜೊತೆ ಏನೇನೋ‌ ಗಿಪ್ಟ್‌ಗಳ‌ ಆಮಿಷ ಇತ್ಯಾದಿ)

ಎರಡನೆಯದಾಗಿ ಪತ್ರಿಕೆಗೆ ಓದುಗರನ್ನು ಸೆಳೆಯಲು ತನ್ನ ಜಾತಿಯನ್ನು ದುರ್ಬಳಕೆ‌ ಮಾಡಿಕೊಂಡವರು ಸಂಕೇಶ್ವರ್. ಬ್ರಾಹ್ಮಣರು ಸಂಪಾದಕೀಯ ವಿಭಾಗದಲ್ಲಿ ಪಾರುಪತ್ಯ ನಡೆಸುತ್ತಿದ್ದರೂ‌, ಜನಸಂಖ್ಯಾ ಬಲ ಇಲ್ಲದ ಬ್ರಾಹ್ಮಣ ಸಂಪಾದಕರಿಗಾಗಲಿ, ಮಾಧ್ಯಮ ಮಾಲೀಕರಾಗಾಲಿ ತನ್ನ ಜಾತಿ ಬಲದ ಮೂಲಕ‌‌ ಪ್ರಸಾರದ ಸಂಖ್ಯೆಯನ್ನು ಹೆಚ್ಚು‌ಮಾಡಲು ಸಾಧ್ಯವಾಗಿರಲಿಲ್ಲ. ಅಂತಹದ್ದೊಂದು ಕೆಟ್ಟ ಪರಂಪರೆಯನ್ನು ಸಂಕೇಶ್ವರ್ ಪ್ರಾರಂಭಿಸಿದರು. ಲಿಂಗಾಯತ ಸ್ವಾಮಿಗಳು,‌ಮಠಗಳು ಮತ್ತು‌ ಲಿಂಗಾಯತ ಶಿಕ್ಷಣ ಸಂಸ್ಥೆಗಳನ್ನು ಇದಕ್ಕಾಗಿ‌ ಬಳಸಿಕೊಂಡರು.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಮೂರನೆಯದಾಗಿ, ಪತ್ರಿಕೆಯನ್ನು ಮುಜುಗರ ಇಲ್ಲದೆ ನೇರವಾಗಿ ತನ್ನ ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡವರು ಕೂಡಾ ಸಂಕೇಶ್ವರ್. ಪತ್ರಿಕೆಯ ಮೂಲಕವೇ ಅವರ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿ ಸಂಸತ್ ಪ್ರವೇಶಿಸಿದ ಸಂಕೇಶ್ವರ್ ಕೊನೆಗೆ ಅಧಿಕಾರದ ಮತ್ತಿನಿಂದ ಸ್ವಂತ ಪಕ್ಷ ಕಟ್ಟಿ‌ ಮುಖ್ಯಮಂತ್ರಿಯಾಗಲು ಹೊರಟು ಬುದ್ದಿ ಕಲಿತು ಮತ್ತೆ‌ ಬಿಜೆಪಿ ಸೇರಿಕೊಂಡರು.

ನಾಲ್ಕನೆಯದಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಹಲವಾರು ‘ಪತ್ರಕರ್ತ ರತ್ನ’ ಗಳನ್ನು‌ ನೀಡಿದವರು‌ ಕೂಡಾ ಸಂಕೇಶ್ವರ್. ಅವರಲ್ಲಿ ವಿಶ್ವೇಶ್ವರ ಭಟ್, ತಿಮ್ಮಪ್ಪ ಭಟ್, ಹರಿಪ್ರಕಾಶ ಕೋಣೆಮನೆ ಮೊದಲಾದವರು ಪ್ರಮುಖರು. ಇಂದಿನ‌‌ ಕನ್ನಡ ಪತ್ರಿಕೆಗಳಲ್ಲಿ ಈ ಭಟ್ರುಗಳ ಶಿಷ್ಯಗಣವೇ ತುಂಬಿವೆ.

ಕೊನೆಗೂ ಸಂಕೇಶ್ವರ್ ಅವರಿಗೆ ತನ್ನ ಜಾತಿಯ ನಾಲ್ಕು ಒಳ್ಳೆಯ ಪತ್ರಕರ್ತರನ್ನು‌ ರೂಪಿಸಲು‌ ಕೂಡಾ ಸಾಧ್ಯವಾಗಿಲ್ಲ. ರವಿ ಬೆಳಗೆರೆ,‌ ಚಕ್ರವರ್ತಿಯಂತಹವರಿಗೆ ಮುಖ್ಯವಾಹಿನಿ ಮಾಧ್ಯಮದಲ್ಲಿ ಮಾನ್ಯತೆ ನೀಡಿದವರು ಕೂಡಾ ಸಂಕೇಶ್ವರ್. ಈ ರೀತಿ ಕನ್ನಡ ಪತ್ರಿಕೋದ್ಯೋಗವನ್ನು ವ್ಯಾಪಾರ, ಜಾತಿ ಮತ್ತು ರಾಜಕೀಯದ ಕೆಸರಲ್ಲಿ ಮುಳುಗಿಸಿದವರು ಸಂಕೇಶ್ವರ್.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಉದ್ಯಮವಾಗಿ ಬದಲಾಗುತ್ತಿದ್ದ ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಸಂಕೇಶ್ವರ್ ಅವರಂತಹ ಚಾಣಾಕ್ಷ್ಯ ಉದ್ಯಮಿಯ ಅಗತ್ಯ ಖಂಡಿತ ಇತ್ತು. ಸಂಕೇಶ್ವರ್ ಅಂತಹ ಒಂದು ನಿರ್ವಾತವನ್ನು ತುಂಬಬಹುದೆಂಬ ನಿರೀಕ್ಷೆ ಇತ್ತು. ಅವರು ಕನ್ನಡ ಓದುಗರ ಸಂಖ್ಯೆಯನ್ನು ಬೆಳೆಸಿದರು, ಹೊಸ ಪ್ರಯೋಗಳಿಗೆ ಕನ್ನಡ ಮಾಧ್ಯಮವನ್ನು ತೆರೆದರು ಎನ್ನುವುದು ನಿಜ,‌ಇದು ಅವರ ಕೊಡುಗೆಯೂ ಹೌದು.

ಇದರ ಜೊತೆಗೆ ಕನ್ನಡ ಪತ್ರಿಕೆಗಳನ್ನು ಸಂಪೂರ್ಣ ವ್ಯಾಪಾರದ ಸರಕನ್ನಾಗಿ‌ ಮಾಡಿದ ಮತ್ತು ಸಮಾಜದಲ್ಲಿ ಪತ್ರಕರ್ತರಿಗಿದ್ದ ಗೌರವ‌ ಕಳೆದುಕೊಳ್ಳುವಂತೆ ಮಾಡಿದ ಕೀರ್ತಿಯೂ ಅವರಿಗೆ‌ ಸಲ್ಲುತ್ತದೆ.

ನನ್ನ ಪ್ರಕಾರ ಸಂಕೇಶ್ವರ್ ಅವರಿಗೆ ಪತ್ರಕರ್ತರ ಬಗ್ಗೆ ದ್ವೇಷ ಇಲ್ಲದೆ ಇದ್ದರೂ ವಿಶೇಷ ಗೌರವ ಖಂಡಿತ ಇಲ್ಲ. ಅವರು ಪತ್ರಿಕೆ ಪ್ರಾರಂಭಿಸಿದ ಹೊಸತರಲ್ಲಿ ಯಾರ ಜೊತೆಯಲ್ಲಿಯೋ ಮಾತನಾಡುತ್ತಾ “ನಮ್ಮ ಲಾರಿ ಚಾಲಕರ ಸಂಬಳಕ್ಕಿಂತಲೂ ಕಡಿಮೆ ಸಂಬಳಕ್ಕೆ ಪತ್ರಕರ್ತರು ಕೆಲಸಕ್ಕೆ ಸಿಗ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು‌ ನಕ್ಕಿದ್ದರಂತೆ. ಈ ಕಾರಣದಿಂದಾಗಿಯೋ ಏನೋ, ಈಶ್ವರ್ ದೈದೋಟ, ಮಹದೇವಪ್ಪ, ಕೃಷ್ಣ ಪ್ರಸಾದ್, ಜಯಂತ್ ಕಾಯ್ಕಿಣಿಯಂತಹವರು ಕೂಡಾ ಬಹಳ ದಿನ ಅವರ ಬಳಿ ಉಳಿಯಲಿಲ್ಲ.

ತಪ್ಪು‌ ಖಂಡಿತ ಅವರದ್ದಲ್ಲ, ಅವರ ಸಾರಥ್ಯದ ಪತ್ರಿಕೆ ಮತ್ತು ಟಿ.ವಿ ಚಾನೆಲ್‌ಗಳನ್ನು ಕನ್ನಡದ ಜನ ಒಪ್ಪಿಕೊಂಡಿದ್ದಾರೆ. ಅದೇ ರೀತಿ ಬಡವರ ಬಗೆಗಿನ ತಮ್ಮ ತಿರಸ್ಕಾರ ಮತ್ತು ಕೊರೊನಾಕ್ಕೆ ತಾವು ಕಂಡು ಹಿಡಿದ ಲಿಂಬೆಹುಳಿ ಚಿಕಿತ್ಸೆಯನ್ನೂ ಒಪ್ಪಿಕೊಳ್ಳಬಹುದೆಂಬ ಭರವಸೆಯಿಂದ ಮಾತನಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

(ಅಭಿಪ್ರಾಯ ಲೇಖಕರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತುಂಬಾ ಉತ್ತಮ ಬರಹ. ಕನ್ನಡ ಪತ್ರಿಕೋದ್ಯಮದ ಇಂದಿನ ಅಧೋಗತಿಯ ಕುರಿತು ಒಂದಿಷ್ಟು ಕಾಲ ವಿಜಯ ಸಂಕೇಶ್ವರ ಮೀಸಲಿರಿಸಿ, ಆತ್ಮಾವಲೋಕನ ಮಾಡಿಕೊಳ್ಳಲಿ. ಪತ್ರಿಕೋದ್ಯಮದ ಮೂಲಕ ಅವರು ಶತದಡ್ಡ ಶಿಖಾಮಣಿಗಳನ್ನೇ ಹಾಗೂ ತಲೆಯಲ್ಲಿ ಜಾತಿಯ ಹೆಂಡಿ ಬಿಟ್ಟರೆ ಮತ್ತೇನೂ ಇರದ ಎಡಬಿಡಂಗಿಗಳನ್ನೇ ಶ್ರೇಷ್ಠ ಪತ್ರಕರ್ತರೆಂದು ತಿಳಿದು ಬೆಳೆಸಿದ್ದಕ್ಕೆ ಕನ್ನಡ ಪತ್ರಿಕೋದ್ಯಮದ ಗುಣಮಟ್ಟವೂ ಒಂದಿಷ್ಟು ಕುಸಿಯಲು ಕಾರಣ. ಇದು, ಕನ್ನಡ ಪತ್ರಿಕೋದ್ಯಮದಲ್ಲಾದ ಬಹು ದೊಡ್ಡ ಅಪರಾಧ. ಇದಕ್ಕೂ, ವಿಜಯ ಸಂಕೇಶ್ವರ ಕಾರಣ ಎಂಬುದನ್ನು ತಳ್ಳಿ ಹಾಕುವಂತಿಲ್ಲ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...