Homeಮುಖಪುಟಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

- Advertisement -
- Advertisement -

ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ಎನ್ನುವುದನ್ನು ಬಹಳ ಮಂದಿ ಮರೆತುಬಿಟ್ಟಿದ್ದಾರೆ.

ಮೊದಲನೆಯದಾಗಿ, ಉದ್ಯಮವಾಗಿ ಪರಿವರ್ತನೆಗೊಳ್ಳುತ್ತಿದ್ದ ಕನ್ನಡ ಮಾಧ್ಯಮ‌ ಕ್ಷೇತ್ರವನ್ನು ಪತ್ರಿಕಾ ಧರ್ಮವನ್ನೇ ಮರೆತ ಕೇವಲ ಲಾಭ-ನಷ್ಟದ ವ್ಯಾಪಾರವನ್ನಾಗಿ‌ ಮಾಡಿದವರು ಸಂಕೇಶ್ವರ್. ಇಂಗ್ಲೀಷ್‌ ಮಾಧ್ಯಮದಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಾರಂಭಿಸಿದ್ದ ಬೆಲೆ‌ ಸಮರದ ಅನಾರೋಗ್ಯ‌ ಪೈಪೋಟಿಯ ವ್ಯಾಪಾರಿ ತಂತ್ರವನ್ನು‌ ವಿಜಯ ಕರ್ನಾಟಕದ ಮೂಲಕ ಕರ್ನಾಟಕಕ್ಕೆ ಪರಿಚಯಿಸಿದವರು ಸಂಕೇಶ್ವರ್. (ಒಂದು ರೂಪಾಯಿಗೆ ಪತ್ರಿಕೆ, ಪತ್ರಿಕೆಯ ಜೊತೆ ಏನೇನೋ‌ ಗಿಪ್ಟ್‌ಗಳ‌ ಆಮಿಷ ಇತ್ಯಾದಿ)

ಎರಡನೆಯದಾಗಿ ಪತ್ರಿಕೆಗೆ ಓದುಗರನ್ನು ಸೆಳೆಯಲು ತನ್ನ ಜಾತಿಯನ್ನು ದುರ್ಬಳಕೆ‌ ಮಾಡಿಕೊಂಡವರು ಸಂಕೇಶ್ವರ್. ಬ್ರಾಹ್ಮಣರು ಸಂಪಾದಕೀಯ ವಿಭಾಗದಲ್ಲಿ ಪಾರುಪತ್ಯ ನಡೆಸುತ್ತಿದ್ದರೂ‌, ಜನಸಂಖ್ಯಾ ಬಲ ಇಲ್ಲದ ಬ್ರಾಹ್ಮಣ ಸಂಪಾದಕರಿಗಾಗಲಿ, ಮಾಧ್ಯಮ ಮಾಲೀಕರಾಗಾಲಿ ತನ್ನ ಜಾತಿ ಬಲದ ಮೂಲಕ‌‌ ಪ್ರಸಾರದ ಸಂಖ್ಯೆಯನ್ನು ಹೆಚ್ಚು‌ಮಾಡಲು ಸಾಧ್ಯವಾಗಿರಲಿಲ್ಲ. ಅಂತಹದ್ದೊಂದು ಕೆಟ್ಟ ಪರಂಪರೆಯನ್ನು ಸಂಕೇಶ್ವರ್ ಪ್ರಾರಂಭಿಸಿದರು. ಲಿಂಗಾಯತ ಸ್ವಾಮಿಗಳು,‌ಮಠಗಳು ಮತ್ತು‌ ಲಿಂಗಾಯತ ಶಿಕ್ಷಣ ಸಂಸ್ಥೆಗಳನ್ನು ಇದಕ್ಕಾಗಿ‌ ಬಳಸಿಕೊಂಡರು.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಮೂರನೆಯದಾಗಿ, ಪತ್ರಿಕೆಯನ್ನು ಮುಜುಗರ ಇಲ್ಲದೆ ನೇರವಾಗಿ ತನ್ನ ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡವರು ಕೂಡಾ ಸಂಕೇಶ್ವರ್. ಪತ್ರಿಕೆಯ ಮೂಲಕವೇ ಅವರ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿ ಸಂಸತ್ ಪ್ರವೇಶಿಸಿದ ಸಂಕೇಶ್ವರ್ ಕೊನೆಗೆ ಅಧಿಕಾರದ ಮತ್ತಿನಿಂದ ಸ್ವಂತ ಪಕ್ಷ ಕಟ್ಟಿ‌ ಮುಖ್ಯಮಂತ್ರಿಯಾಗಲು ಹೊರಟು ಬುದ್ದಿ ಕಲಿತು ಮತ್ತೆ‌ ಬಿಜೆಪಿ ಸೇರಿಕೊಂಡರು.

ನಾಲ್ಕನೆಯದಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಹಲವಾರು ‘ಪತ್ರಕರ್ತ ರತ್ನ’ ಗಳನ್ನು‌ ನೀಡಿದವರು‌ ಕೂಡಾ ಸಂಕೇಶ್ವರ್. ಅವರಲ್ಲಿ ವಿಶ್ವೇಶ್ವರ ಭಟ್, ತಿಮ್ಮಪ್ಪ ಭಟ್, ಹರಿಪ್ರಕಾಶ ಕೋಣೆಮನೆ ಮೊದಲಾದವರು ಪ್ರಮುಖರು. ಇಂದಿನ‌‌ ಕನ್ನಡ ಪತ್ರಿಕೆಗಳಲ್ಲಿ ಈ ಭಟ್ರುಗಳ ಶಿಷ್ಯಗಣವೇ ತುಂಬಿವೆ.

ಕೊನೆಗೂ ಸಂಕೇಶ್ವರ್ ಅವರಿಗೆ ತನ್ನ ಜಾತಿಯ ನಾಲ್ಕು ಒಳ್ಳೆಯ ಪತ್ರಕರ್ತರನ್ನು‌ ರೂಪಿಸಲು‌ ಕೂಡಾ ಸಾಧ್ಯವಾಗಿಲ್ಲ. ರವಿ ಬೆಳಗೆರೆ,‌ ಚಕ್ರವರ್ತಿಯಂತಹವರಿಗೆ ಮುಖ್ಯವಾಹಿನಿ ಮಾಧ್ಯಮದಲ್ಲಿ ಮಾನ್ಯತೆ ನೀಡಿದವರು ಕೂಡಾ ಸಂಕೇಶ್ವರ್. ಈ ರೀತಿ ಕನ್ನಡ ಪತ್ರಿಕೋದ್ಯೋಗವನ್ನು ವ್ಯಾಪಾರ, ಜಾತಿ ಮತ್ತು ರಾಜಕೀಯದ ಕೆಸರಲ್ಲಿ ಮುಳುಗಿಸಿದವರು ಸಂಕೇಶ್ವರ್.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಉದ್ಯಮವಾಗಿ ಬದಲಾಗುತ್ತಿದ್ದ ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಸಂಕೇಶ್ವರ್ ಅವರಂತಹ ಚಾಣಾಕ್ಷ್ಯ ಉದ್ಯಮಿಯ ಅಗತ್ಯ ಖಂಡಿತ ಇತ್ತು. ಸಂಕೇಶ್ವರ್ ಅಂತಹ ಒಂದು ನಿರ್ವಾತವನ್ನು ತುಂಬಬಹುದೆಂಬ ನಿರೀಕ್ಷೆ ಇತ್ತು. ಅವರು ಕನ್ನಡ ಓದುಗರ ಸಂಖ್ಯೆಯನ್ನು ಬೆಳೆಸಿದರು, ಹೊಸ ಪ್ರಯೋಗಳಿಗೆ ಕನ್ನಡ ಮಾಧ್ಯಮವನ್ನು ತೆರೆದರು ಎನ್ನುವುದು ನಿಜ,‌ಇದು ಅವರ ಕೊಡುಗೆಯೂ ಹೌದು.

ಇದರ ಜೊತೆಗೆ ಕನ್ನಡ ಪತ್ರಿಕೆಗಳನ್ನು ಸಂಪೂರ್ಣ ವ್ಯಾಪಾರದ ಸರಕನ್ನಾಗಿ‌ ಮಾಡಿದ ಮತ್ತು ಸಮಾಜದಲ್ಲಿ ಪತ್ರಕರ್ತರಿಗಿದ್ದ ಗೌರವ‌ ಕಳೆದುಕೊಳ್ಳುವಂತೆ ಮಾಡಿದ ಕೀರ್ತಿಯೂ ಅವರಿಗೆ‌ ಸಲ್ಲುತ್ತದೆ.

ನನ್ನ ಪ್ರಕಾರ ಸಂಕೇಶ್ವರ್ ಅವರಿಗೆ ಪತ್ರಕರ್ತರ ಬಗ್ಗೆ ದ್ವೇಷ ಇಲ್ಲದೆ ಇದ್ದರೂ ವಿಶೇಷ ಗೌರವ ಖಂಡಿತ ಇಲ್ಲ. ಅವರು ಪತ್ರಿಕೆ ಪ್ರಾರಂಭಿಸಿದ ಹೊಸತರಲ್ಲಿ ಯಾರ ಜೊತೆಯಲ್ಲಿಯೋ ಮಾತನಾಡುತ್ತಾ “ನಮ್ಮ ಲಾರಿ ಚಾಲಕರ ಸಂಬಳಕ್ಕಿಂತಲೂ ಕಡಿಮೆ ಸಂಬಳಕ್ಕೆ ಪತ್ರಕರ್ತರು ಕೆಲಸಕ್ಕೆ ಸಿಗ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು‌ ನಕ್ಕಿದ್ದರಂತೆ. ಈ ಕಾರಣದಿಂದಾಗಿಯೋ ಏನೋ, ಈಶ್ವರ್ ದೈದೋಟ, ಮಹದೇವಪ್ಪ, ಕೃಷ್ಣ ಪ್ರಸಾದ್, ಜಯಂತ್ ಕಾಯ್ಕಿಣಿಯಂತಹವರು ಕೂಡಾ ಬಹಳ ದಿನ ಅವರ ಬಳಿ ಉಳಿಯಲಿಲ್ಲ.

ತಪ್ಪು‌ ಖಂಡಿತ ಅವರದ್ದಲ್ಲ, ಅವರ ಸಾರಥ್ಯದ ಪತ್ರಿಕೆ ಮತ್ತು ಟಿ.ವಿ ಚಾನೆಲ್‌ಗಳನ್ನು ಕನ್ನಡದ ಜನ ಒಪ್ಪಿಕೊಂಡಿದ್ದಾರೆ. ಅದೇ ರೀತಿ ಬಡವರ ಬಗೆಗಿನ ತಮ್ಮ ತಿರಸ್ಕಾರ ಮತ್ತು ಕೊರೊನಾಕ್ಕೆ ತಾವು ಕಂಡು ಹಿಡಿದ ಲಿಂಬೆಹುಳಿ ಚಿಕಿತ್ಸೆಯನ್ನೂ ಒಪ್ಪಿಕೊಳ್ಳಬಹುದೆಂಬ ಭರವಸೆಯಿಂದ ಮಾತನಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

(ಅಭಿಪ್ರಾಯ ಲೇಖಕರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತುಂಬಾ ಉತ್ತಮ ಬರಹ. ಕನ್ನಡ ಪತ್ರಿಕೋದ್ಯಮದ ಇಂದಿನ ಅಧೋಗತಿಯ ಕುರಿತು ಒಂದಿಷ್ಟು ಕಾಲ ವಿಜಯ ಸಂಕೇಶ್ವರ ಮೀಸಲಿರಿಸಿ, ಆತ್ಮಾವಲೋಕನ ಮಾಡಿಕೊಳ್ಳಲಿ. ಪತ್ರಿಕೋದ್ಯಮದ ಮೂಲಕ ಅವರು ಶತದಡ್ಡ ಶಿಖಾಮಣಿಗಳನ್ನೇ ಹಾಗೂ ತಲೆಯಲ್ಲಿ ಜಾತಿಯ ಹೆಂಡಿ ಬಿಟ್ಟರೆ ಮತ್ತೇನೂ ಇರದ ಎಡಬಿಡಂಗಿಗಳನ್ನೇ ಶ್ರೇಷ್ಠ ಪತ್ರಕರ್ತರೆಂದು ತಿಳಿದು ಬೆಳೆಸಿದ್ದಕ್ಕೆ ಕನ್ನಡ ಪತ್ರಿಕೋದ್ಯಮದ ಗುಣಮಟ್ಟವೂ ಒಂದಿಷ್ಟು ಕುಸಿಯಲು ಕಾರಣ. ಇದು, ಕನ್ನಡ ಪತ್ರಿಕೋದ್ಯಮದಲ್ಲಾದ ಬಹು ದೊಡ್ಡ ಅಪರಾಧ. ಇದಕ್ಕೂ, ವಿಜಯ ಸಂಕೇಶ್ವರ ಕಾರಣ ಎಂಬುದನ್ನು ತಳ್ಳಿ ಹಾಕುವಂತಿಲ್ಲ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...