Homeಮುಖಪುಟಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

- Advertisement -
- Advertisement -

ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ಎನ್ನುವುದನ್ನು ಬಹಳ ಮಂದಿ ಮರೆತುಬಿಟ್ಟಿದ್ದಾರೆ.

ಮೊದಲನೆಯದಾಗಿ, ಉದ್ಯಮವಾಗಿ ಪರಿವರ್ತನೆಗೊಳ್ಳುತ್ತಿದ್ದ ಕನ್ನಡ ಮಾಧ್ಯಮ‌ ಕ್ಷೇತ್ರವನ್ನು ಪತ್ರಿಕಾ ಧರ್ಮವನ್ನೇ ಮರೆತ ಕೇವಲ ಲಾಭ-ನಷ್ಟದ ವ್ಯಾಪಾರವನ್ನಾಗಿ‌ ಮಾಡಿದವರು ಸಂಕೇಶ್ವರ್. ಇಂಗ್ಲೀಷ್‌ ಮಾಧ್ಯಮದಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಾರಂಭಿಸಿದ್ದ ಬೆಲೆ‌ ಸಮರದ ಅನಾರೋಗ್ಯ‌ ಪೈಪೋಟಿಯ ವ್ಯಾಪಾರಿ ತಂತ್ರವನ್ನು‌ ವಿಜಯ ಕರ್ನಾಟಕದ ಮೂಲಕ ಕರ್ನಾಟಕಕ್ಕೆ ಪರಿಚಯಿಸಿದವರು ಸಂಕೇಶ್ವರ್. (ಒಂದು ರೂಪಾಯಿಗೆ ಪತ್ರಿಕೆ, ಪತ್ರಿಕೆಯ ಜೊತೆ ಏನೇನೋ‌ ಗಿಪ್ಟ್‌ಗಳ‌ ಆಮಿಷ ಇತ್ಯಾದಿ)

ಎರಡನೆಯದಾಗಿ ಪತ್ರಿಕೆಗೆ ಓದುಗರನ್ನು ಸೆಳೆಯಲು ತನ್ನ ಜಾತಿಯನ್ನು ದುರ್ಬಳಕೆ‌ ಮಾಡಿಕೊಂಡವರು ಸಂಕೇಶ್ವರ್. ಬ್ರಾಹ್ಮಣರು ಸಂಪಾದಕೀಯ ವಿಭಾಗದಲ್ಲಿ ಪಾರುಪತ್ಯ ನಡೆಸುತ್ತಿದ್ದರೂ‌, ಜನಸಂಖ್ಯಾ ಬಲ ಇಲ್ಲದ ಬ್ರಾಹ್ಮಣ ಸಂಪಾದಕರಿಗಾಗಲಿ, ಮಾಧ್ಯಮ ಮಾಲೀಕರಾಗಾಲಿ ತನ್ನ ಜಾತಿ ಬಲದ ಮೂಲಕ‌‌ ಪ್ರಸಾರದ ಸಂಖ್ಯೆಯನ್ನು ಹೆಚ್ಚು‌ಮಾಡಲು ಸಾಧ್ಯವಾಗಿರಲಿಲ್ಲ. ಅಂತಹದ್ದೊಂದು ಕೆಟ್ಟ ಪರಂಪರೆಯನ್ನು ಸಂಕೇಶ್ವರ್ ಪ್ರಾರಂಭಿಸಿದರು. ಲಿಂಗಾಯತ ಸ್ವಾಮಿಗಳು,‌ಮಠಗಳು ಮತ್ತು‌ ಲಿಂಗಾಯತ ಶಿಕ್ಷಣ ಸಂಸ್ಥೆಗಳನ್ನು ಇದಕ್ಕಾಗಿ‌ ಬಳಸಿಕೊಂಡರು.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಮೂರನೆಯದಾಗಿ, ಪತ್ರಿಕೆಯನ್ನು ಮುಜುಗರ ಇಲ್ಲದೆ ನೇರವಾಗಿ ತನ್ನ ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡವರು ಕೂಡಾ ಸಂಕೇಶ್ವರ್. ಪತ್ರಿಕೆಯ ಮೂಲಕವೇ ಅವರ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿ ಸಂಸತ್ ಪ್ರವೇಶಿಸಿದ ಸಂಕೇಶ್ವರ್ ಕೊನೆಗೆ ಅಧಿಕಾರದ ಮತ್ತಿನಿಂದ ಸ್ವಂತ ಪಕ್ಷ ಕಟ್ಟಿ‌ ಮುಖ್ಯಮಂತ್ರಿಯಾಗಲು ಹೊರಟು ಬುದ್ದಿ ಕಲಿತು ಮತ್ತೆ‌ ಬಿಜೆಪಿ ಸೇರಿಕೊಂಡರು.

ನಾಲ್ಕನೆಯದಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಹಲವಾರು ‘ಪತ್ರಕರ್ತ ರತ್ನ’ ಗಳನ್ನು‌ ನೀಡಿದವರು‌ ಕೂಡಾ ಸಂಕೇಶ್ವರ್. ಅವರಲ್ಲಿ ವಿಶ್ವೇಶ್ವರ ಭಟ್, ತಿಮ್ಮಪ್ಪ ಭಟ್, ಹರಿಪ್ರಕಾಶ ಕೋಣೆಮನೆ ಮೊದಲಾದವರು ಪ್ರಮುಖರು. ಇಂದಿನ‌‌ ಕನ್ನಡ ಪತ್ರಿಕೆಗಳಲ್ಲಿ ಈ ಭಟ್ರುಗಳ ಶಿಷ್ಯಗಣವೇ ತುಂಬಿವೆ.

ಕೊನೆಗೂ ಸಂಕೇಶ್ವರ್ ಅವರಿಗೆ ತನ್ನ ಜಾತಿಯ ನಾಲ್ಕು ಒಳ್ಳೆಯ ಪತ್ರಕರ್ತರನ್ನು‌ ರೂಪಿಸಲು‌ ಕೂಡಾ ಸಾಧ್ಯವಾಗಿಲ್ಲ. ರವಿ ಬೆಳಗೆರೆ,‌ ಚಕ್ರವರ್ತಿಯಂತಹವರಿಗೆ ಮುಖ್ಯವಾಹಿನಿ ಮಾಧ್ಯಮದಲ್ಲಿ ಮಾನ್ಯತೆ ನೀಡಿದವರು ಕೂಡಾ ಸಂಕೇಶ್ವರ್. ಈ ರೀತಿ ಕನ್ನಡ ಪತ್ರಿಕೋದ್ಯೋಗವನ್ನು ವ್ಯಾಪಾರ, ಜಾತಿ ಮತ್ತು ರಾಜಕೀಯದ ಕೆಸರಲ್ಲಿ ಮುಳುಗಿಸಿದವರು ಸಂಕೇಶ್ವರ್.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಉದ್ಯಮವಾಗಿ ಬದಲಾಗುತ್ತಿದ್ದ ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಸಂಕೇಶ್ವರ್ ಅವರಂತಹ ಚಾಣಾಕ್ಷ್ಯ ಉದ್ಯಮಿಯ ಅಗತ್ಯ ಖಂಡಿತ ಇತ್ತು. ಸಂಕೇಶ್ವರ್ ಅಂತಹ ಒಂದು ನಿರ್ವಾತವನ್ನು ತುಂಬಬಹುದೆಂಬ ನಿರೀಕ್ಷೆ ಇತ್ತು. ಅವರು ಕನ್ನಡ ಓದುಗರ ಸಂಖ್ಯೆಯನ್ನು ಬೆಳೆಸಿದರು, ಹೊಸ ಪ್ರಯೋಗಳಿಗೆ ಕನ್ನಡ ಮಾಧ್ಯಮವನ್ನು ತೆರೆದರು ಎನ್ನುವುದು ನಿಜ,‌ಇದು ಅವರ ಕೊಡುಗೆಯೂ ಹೌದು.

ಇದರ ಜೊತೆಗೆ ಕನ್ನಡ ಪತ್ರಿಕೆಗಳನ್ನು ಸಂಪೂರ್ಣ ವ್ಯಾಪಾರದ ಸರಕನ್ನಾಗಿ‌ ಮಾಡಿದ ಮತ್ತು ಸಮಾಜದಲ್ಲಿ ಪತ್ರಕರ್ತರಿಗಿದ್ದ ಗೌರವ‌ ಕಳೆದುಕೊಳ್ಳುವಂತೆ ಮಾಡಿದ ಕೀರ್ತಿಯೂ ಅವರಿಗೆ‌ ಸಲ್ಲುತ್ತದೆ.

ನನ್ನ ಪ್ರಕಾರ ಸಂಕೇಶ್ವರ್ ಅವರಿಗೆ ಪತ್ರಕರ್ತರ ಬಗ್ಗೆ ದ್ವೇಷ ಇಲ್ಲದೆ ಇದ್ದರೂ ವಿಶೇಷ ಗೌರವ ಖಂಡಿತ ಇಲ್ಲ. ಅವರು ಪತ್ರಿಕೆ ಪ್ರಾರಂಭಿಸಿದ ಹೊಸತರಲ್ಲಿ ಯಾರ ಜೊತೆಯಲ್ಲಿಯೋ ಮಾತನಾಡುತ್ತಾ “ನಮ್ಮ ಲಾರಿ ಚಾಲಕರ ಸಂಬಳಕ್ಕಿಂತಲೂ ಕಡಿಮೆ ಸಂಬಳಕ್ಕೆ ಪತ್ರಕರ್ತರು ಕೆಲಸಕ್ಕೆ ಸಿಗ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು‌ ನಕ್ಕಿದ್ದರಂತೆ. ಈ ಕಾರಣದಿಂದಾಗಿಯೋ ಏನೋ, ಈಶ್ವರ್ ದೈದೋಟ, ಮಹದೇವಪ್ಪ, ಕೃಷ್ಣ ಪ್ರಸಾದ್, ಜಯಂತ್ ಕಾಯ್ಕಿಣಿಯಂತಹವರು ಕೂಡಾ ಬಹಳ ದಿನ ಅವರ ಬಳಿ ಉಳಿಯಲಿಲ್ಲ.

ತಪ್ಪು‌ ಖಂಡಿತ ಅವರದ್ದಲ್ಲ, ಅವರ ಸಾರಥ್ಯದ ಪತ್ರಿಕೆ ಮತ್ತು ಟಿ.ವಿ ಚಾನೆಲ್‌ಗಳನ್ನು ಕನ್ನಡದ ಜನ ಒಪ್ಪಿಕೊಂಡಿದ್ದಾರೆ. ಅದೇ ರೀತಿ ಬಡವರ ಬಗೆಗಿನ ತಮ್ಮ ತಿರಸ್ಕಾರ ಮತ್ತು ಕೊರೊನಾಕ್ಕೆ ತಾವು ಕಂಡು ಹಿಡಿದ ಲಿಂಬೆಹುಳಿ ಚಿಕಿತ್ಸೆಯನ್ನೂ ಒಪ್ಪಿಕೊಳ್ಳಬಹುದೆಂಬ ಭರವಸೆಯಿಂದ ಮಾತನಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

(ಅಭಿಪ್ರಾಯ ಲೇಖಕರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತುಂಬಾ ಉತ್ತಮ ಬರಹ. ಕನ್ನಡ ಪತ್ರಿಕೋದ್ಯಮದ ಇಂದಿನ ಅಧೋಗತಿಯ ಕುರಿತು ಒಂದಿಷ್ಟು ಕಾಲ ವಿಜಯ ಸಂಕೇಶ್ವರ ಮೀಸಲಿರಿಸಿ, ಆತ್ಮಾವಲೋಕನ ಮಾಡಿಕೊಳ್ಳಲಿ. ಪತ್ರಿಕೋದ್ಯಮದ ಮೂಲಕ ಅವರು ಶತದಡ್ಡ ಶಿಖಾಮಣಿಗಳನ್ನೇ ಹಾಗೂ ತಲೆಯಲ್ಲಿ ಜಾತಿಯ ಹೆಂಡಿ ಬಿಟ್ಟರೆ ಮತ್ತೇನೂ ಇರದ ಎಡಬಿಡಂಗಿಗಳನ್ನೇ ಶ್ರೇಷ್ಠ ಪತ್ರಕರ್ತರೆಂದು ತಿಳಿದು ಬೆಳೆಸಿದ್ದಕ್ಕೆ ಕನ್ನಡ ಪತ್ರಿಕೋದ್ಯಮದ ಗುಣಮಟ್ಟವೂ ಒಂದಿಷ್ಟು ಕುಸಿಯಲು ಕಾರಣ. ಇದು, ಕನ್ನಡ ಪತ್ರಿಕೋದ್ಯಮದಲ್ಲಾದ ಬಹು ದೊಡ್ಡ ಅಪರಾಧ. ಇದಕ್ಕೂ, ವಿಜಯ ಸಂಕೇಶ್ವರ ಕಾರಣ ಎಂಬುದನ್ನು ತಳ್ಳಿ ಹಾಕುವಂತಿಲ್ಲ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...