Homeಮುಖಪುಟಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

- Advertisement -
- Advertisement -

ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ಎನ್ನುವುದನ್ನು ಬಹಳ ಮಂದಿ ಮರೆತುಬಿಟ್ಟಿದ್ದಾರೆ.

ಮೊದಲನೆಯದಾಗಿ, ಉದ್ಯಮವಾಗಿ ಪರಿವರ್ತನೆಗೊಳ್ಳುತ್ತಿದ್ದ ಕನ್ನಡ ಮಾಧ್ಯಮ‌ ಕ್ಷೇತ್ರವನ್ನು ಪತ್ರಿಕಾ ಧರ್ಮವನ್ನೇ ಮರೆತ ಕೇವಲ ಲಾಭ-ನಷ್ಟದ ವ್ಯಾಪಾರವನ್ನಾಗಿ‌ ಮಾಡಿದವರು ಸಂಕೇಶ್ವರ್. ಇಂಗ್ಲೀಷ್‌ ಮಾಧ್ಯಮದಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಾರಂಭಿಸಿದ್ದ ಬೆಲೆ‌ ಸಮರದ ಅನಾರೋಗ್ಯ‌ ಪೈಪೋಟಿಯ ವ್ಯಾಪಾರಿ ತಂತ್ರವನ್ನು‌ ವಿಜಯ ಕರ್ನಾಟಕದ ಮೂಲಕ ಕರ್ನಾಟಕಕ್ಕೆ ಪರಿಚಯಿಸಿದವರು ಸಂಕೇಶ್ವರ್. (ಒಂದು ರೂಪಾಯಿಗೆ ಪತ್ರಿಕೆ, ಪತ್ರಿಕೆಯ ಜೊತೆ ಏನೇನೋ‌ ಗಿಪ್ಟ್‌ಗಳ‌ ಆಮಿಷ ಇತ್ಯಾದಿ)

ಎರಡನೆಯದಾಗಿ ಪತ್ರಿಕೆಗೆ ಓದುಗರನ್ನು ಸೆಳೆಯಲು ತನ್ನ ಜಾತಿಯನ್ನು ದುರ್ಬಳಕೆ‌ ಮಾಡಿಕೊಂಡವರು ಸಂಕೇಶ್ವರ್. ಬ್ರಾಹ್ಮಣರು ಸಂಪಾದಕೀಯ ವಿಭಾಗದಲ್ಲಿ ಪಾರುಪತ್ಯ ನಡೆಸುತ್ತಿದ್ದರೂ‌, ಜನಸಂಖ್ಯಾ ಬಲ ಇಲ್ಲದ ಬ್ರಾಹ್ಮಣ ಸಂಪಾದಕರಿಗಾಗಲಿ, ಮಾಧ್ಯಮ ಮಾಲೀಕರಾಗಾಲಿ ತನ್ನ ಜಾತಿ ಬಲದ ಮೂಲಕ‌‌ ಪ್ರಸಾರದ ಸಂಖ್ಯೆಯನ್ನು ಹೆಚ್ಚು‌ಮಾಡಲು ಸಾಧ್ಯವಾಗಿರಲಿಲ್ಲ. ಅಂತಹದ್ದೊಂದು ಕೆಟ್ಟ ಪರಂಪರೆಯನ್ನು ಸಂಕೇಶ್ವರ್ ಪ್ರಾರಂಭಿಸಿದರು. ಲಿಂಗಾಯತ ಸ್ವಾಮಿಗಳು,‌ಮಠಗಳು ಮತ್ತು‌ ಲಿಂಗಾಯತ ಶಿಕ್ಷಣ ಸಂಸ್ಥೆಗಳನ್ನು ಇದಕ್ಕಾಗಿ‌ ಬಳಸಿಕೊಂಡರು.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಮೂರನೆಯದಾಗಿ, ಪತ್ರಿಕೆಯನ್ನು ಮುಜುಗರ ಇಲ್ಲದೆ ನೇರವಾಗಿ ತನ್ನ ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡವರು ಕೂಡಾ ಸಂಕೇಶ್ವರ್. ಪತ್ರಿಕೆಯ ಮೂಲಕವೇ ಅವರ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿ ಸಂಸತ್ ಪ್ರವೇಶಿಸಿದ ಸಂಕೇಶ್ವರ್ ಕೊನೆಗೆ ಅಧಿಕಾರದ ಮತ್ತಿನಿಂದ ಸ್ವಂತ ಪಕ್ಷ ಕಟ್ಟಿ‌ ಮುಖ್ಯಮಂತ್ರಿಯಾಗಲು ಹೊರಟು ಬುದ್ದಿ ಕಲಿತು ಮತ್ತೆ‌ ಬಿಜೆಪಿ ಸೇರಿಕೊಂಡರು.

ನಾಲ್ಕನೆಯದಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಹಲವಾರು ‘ಪತ್ರಕರ್ತ ರತ್ನ’ ಗಳನ್ನು‌ ನೀಡಿದವರು‌ ಕೂಡಾ ಸಂಕೇಶ್ವರ್. ಅವರಲ್ಲಿ ವಿಶ್ವೇಶ್ವರ ಭಟ್, ತಿಮ್ಮಪ್ಪ ಭಟ್, ಹರಿಪ್ರಕಾಶ ಕೋಣೆಮನೆ ಮೊದಲಾದವರು ಪ್ರಮುಖರು. ಇಂದಿನ‌‌ ಕನ್ನಡ ಪತ್ರಿಕೆಗಳಲ್ಲಿ ಈ ಭಟ್ರುಗಳ ಶಿಷ್ಯಗಣವೇ ತುಂಬಿವೆ.

ಕೊನೆಗೂ ಸಂಕೇಶ್ವರ್ ಅವರಿಗೆ ತನ್ನ ಜಾತಿಯ ನಾಲ್ಕು ಒಳ್ಳೆಯ ಪತ್ರಕರ್ತರನ್ನು‌ ರೂಪಿಸಲು‌ ಕೂಡಾ ಸಾಧ್ಯವಾಗಿಲ್ಲ. ರವಿ ಬೆಳಗೆರೆ,‌ ಚಕ್ರವರ್ತಿಯಂತಹವರಿಗೆ ಮುಖ್ಯವಾಹಿನಿ ಮಾಧ್ಯಮದಲ್ಲಿ ಮಾನ್ಯತೆ ನೀಡಿದವರು ಕೂಡಾ ಸಂಕೇಶ್ವರ್. ಈ ರೀತಿ ಕನ್ನಡ ಪತ್ರಿಕೋದ್ಯೋಗವನ್ನು ವ್ಯಾಪಾರ, ಜಾತಿ ಮತ್ತು ರಾಜಕೀಯದ ಕೆಸರಲ್ಲಿ ಮುಳುಗಿಸಿದವರು ಸಂಕೇಶ್ವರ್.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಉದ್ಯಮವಾಗಿ ಬದಲಾಗುತ್ತಿದ್ದ ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಸಂಕೇಶ್ವರ್ ಅವರಂತಹ ಚಾಣಾಕ್ಷ್ಯ ಉದ್ಯಮಿಯ ಅಗತ್ಯ ಖಂಡಿತ ಇತ್ತು. ಸಂಕೇಶ್ವರ್ ಅಂತಹ ಒಂದು ನಿರ್ವಾತವನ್ನು ತುಂಬಬಹುದೆಂಬ ನಿರೀಕ್ಷೆ ಇತ್ತು. ಅವರು ಕನ್ನಡ ಓದುಗರ ಸಂಖ್ಯೆಯನ್ನು ಬೆಳೆಸಿದರು, ಹೊಸ ಪ್ರಯೋಗಳಿಗೆ ಕನ್ನಡ ಮಾಧ್ಯಮವನ್ನು ತೆರೆದರು ಎನ್ನುವುದು ನಿಜ,‌ಇದು ಅವರ ಕೊಡುಗೆಯೂ ಹೌದು.

ಇದರ ಜೊತೆಗೆ ಕನ್ನಡ ಪತ್ರಿಕೆಗಳನ್ನು ಸಂಪೂರ್ಣ ವ್ಯಾಪಾರದ ಸರಕನ್ನಾಗಿ‌ ಮಾಡಿದ ಮತ್ತು ಸಮಾಜದಲ್ಲಿ ಪತ್ರಕರ್ತರಿಗಿದ್ದ ಗೌರವ‌ ಕಳೆದುಕೊಳ್ಳುವಂತೆ ಮಾಡಿದ ಕೀರ್ತಿಯೂ ಅವರಿಗೆ‌ ಸಲ್ಲುತ್ತದೆ.

ನನ್ನ ಪ್ರಕಾರ ಸಂಕೇಶ್ವರ್ ಅವರಿಗೆ ಪತ್ರಕರ್ತರ ಬಗ್ಗೆ ದ್ವೇಷ ಇಲ್ಲದೆ ಇದ್ದರೂ ವಿಶೇಷ ಗೌರವ ಖಂಡಿತ ಇಲ್ಲ. ಅವರು ಪತ್ರಿಕೆ ಪ್ರಾರಂಭಿಸಿದ ಹೊಸತರಲ್ಲಿ ಯಾರ ಜೊತೆಯಲ್ಲಿಯೋ ಮಾತನಾಡುತ್ತಾ “ನಮ್ಮ ಲಾರಿ ಚಾಲಕರ ಸಂಬಳಕ್ಕಿಂತಲೂ ಕಡಿಮೆ ಸಂಬಳಕ್ಕೆ ಪತ್ರಕರ್ತರು ಕೆಲಸಕ್ಕೆ ಸಿಗ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು‌ ನಕ್ಕಿದ್ದರಂತೆ. ಈ ಕಾರಣದಿಂದಾಗಿಯೋ ಏನೋ, ಈಶ್ವರ್ ದೈದೋಟ, ಮಹದೇವಪ್ಪ, ಕೃಷ್ಣ ಪ್ರಸಾದ್, ಜಯಂತ್ ಕಾಯ್ಕಿಣಿಯಂತಹವರು ಕೂಡಾ ಬಹಳ ದಿನ ಅವರ ಬಳಿ ಉಳಿಯಲಿಲ್ಲ.

ತಪ್ಪು‌ ಖಂಡಿತ ಅವರದ್ದಲ್ಲ, ಅವರ ಸಾರಥ್ಯದ ಪತ್ರಿಕೆ ಮತ್ತು ಟಿ.ವಿ ಚಾನೆಲ್‌ಗಳನ್ನು ಕನ್ನಡದ ಜನ ಒಪ್ಪಿಕೊಂಡಿದ್ದಾರೆ. ಅದೇ ರೀತಿ ಬಡವರ ಬಗೆಗಿನ ತಮ್ಮ ತಿರಸ್ಕಾರ ಮತ್ತು ಕೊರೊನಾಕ್ಕೆ ತಾವು ಕಂಡು ಹಿಡಿದ ಲಿಂಬೆಹುಳಿ ಚಿಕಿತ್ಸೆಯನ್ನೂ ಒಪ್ಪಿಕೊಳ್ಳಬಹುದೆಂಬ ಭರವಸೆಯಿಂದ ಮಾತನಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

(ಅಭಿಪ್ರಾಯ ಲೇಖಕರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತುಂಬಾ ಉತ್ತಮ ಬರಹ. ಕನ್ನಡ ಪತ್ರಿಕೋದ್ಯಮದ ಇಂದಿನ ಅಧೋಗತಿಯ ಕುರಿತು ಒಂದಿಷ್ಟು ಕಾಲ ವಿಜಯ ಸಂಕೇಶ್ವರ ಮೀಸಲಿರಿಸಿ, ಆತ್ಮಾವಲೋಕನ ಮಾಡಿಕೊಳ್ಳಲಿ. ಪತ್ರಿಕೋದ್ಯಮದ ಮೂಲಕ ಅವರು ಶತದಡ್ಡ ಶಿಖಾಮಣಿಗಳನ್ನೇ ಹಾಗೂ ತಲೆಯಲ್ಲಿ ಜಾತಿಯ ಹೆಂಡಿ ಬಿಟ್ಟರೆ ಮತ್ತೇನೂ ಇರದ ಎಡಬಿಡಂಗಿಗಳನ್ನೇ ಶ್ರೇಷ್ಠ ಪತ್ರಕರ್ತರೆಂದು ತಿಳಿದು ಬೆಳೆಸಿದ್ದಕ್ಕೆ ಕನ್ನಡ ಪತ್ರಿಕೋದ್ಯಮದ ಗುಣಮಟ್ಟವೂ ಒಂದಿಷ್ಟು ಕುಸಿಯಲು ಕಾರಣ. ಇದು, ಕನ್ನಡ ಪತ್ರಿಕೋದ್ಯಮದಲ್ಲಾದ ಬಹು ದೊಡ್ಡ ಅಪರಾಧ. ಇದಕ್ಕೂ, ವಿಜಯ ಸಂಕೇಶ್ವರ ಕಾರಣ ಎಂಬುದನ್ನು ತಳ್ಳಿ ಹಾಕುವಂತಿಲ್ಲ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....