Homeಮುಖಪುಟಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

- Advertisement -
- Advertisement -

ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ಎನ್ನುವುದನ್ನು ಬಹಳ ಮಂದಿ ಮರೆತುಬಿಟ್ಟಿದ್ದಾರೆ.

ಮೊದಲನೆಯದಾಗಿ, ಉದ್ಯಮವಾಗಿ ಪರಿವರ್ತನೆಗೊಳ್ಳುತ್ತಿದ್ದ ಕನ್ನಡ ಮಾಧ್ಯಮ‌ ಕ್ಷೇತ್ರವನ್ನು ಪತ್ರಿಕಾ ಧರ್ಮವನ್ನೇ ಮರೆತ ಕೇವಲ ಲಾಭ-ನಷ್ಟದ ವ್ಯಾಪಾರವನ್ನಾಗಿ‌ ಮಾಡಿದವರು ಸಂಕೇಶ್ವರ್. ಇಂಗ್ಲೀಷ್‌ ಮಾಧ್ಯಮದಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಾರಂಭಿಸಿದ್ದ ಬೆಲೆ‌ ಸಮರದ ಅನಾರೋಗ್ಯ‌ ಪೈಪೋಟಿಯ ವ್ಯಾಪಾರಿ ತಂತ್ರವನ್ನು‌ ವಿಜಯ ಕರ್ನಾಟಕದ ಮೂಲಕ ಕರ್ನಾಟಕಕ್ಕೆ ಪರಿಚಯಿಸಿದವರು ಸಂಕೇಶ್ವರ್. (ಒಂದು ರೂಪಾಯಿಗೆ ಪತ್ರಿಕೆ, ಪತ್ರಿಕೆಯ ಜೊತೆ ಏನೇನೋ‌ ಗಿಪ್ಟ್‌ಗಳ‌ ಆಮಿಷ ಇತ್ಯಾದಿ)

ಎರಡನೆಯದಾಗಿ ಪತ್ರಿಕೆಗೆ ಓದುಗರನ್ನು ಸೆಳೆಯಲು ತನ್ನ ಜಾತಿಯನ್ನು ದುರ್ಬಳಕೆ‌ ಮಾಡಿಕೊಂಡವರು ಸಂಕೇಶ್ವರ್. ಬ್ರಾಹ್ಮಣರು ಸಂಪಾದಕೀಯ ವಿಭಾಗದಲ್ಲಿ ಪಾರುಪತ್ಯ ನಡೆಸುತ್ತಿದ್ದರೂ‌, ಜನಸಂಖ್ಯಾ ಬಲ ಇಲ್ಲದ ಬ್ರಾಹ್ಮಣ ಸಂಪಾದಕರಿಗಾಗಲಿ, ಮಾಧ್ಯಮ ಮಾಲೀಕರಾಗಾಲಿ ತನ್ನ ಜಾತಿ ಬಲದ ಮೂಲಕ‌‌ ಪ್ರಸಾರದ ಸಂಖ್ಯೆಯನ್ನು ಹೆಚ್ಚು‌ಮಾಡಲು ಸಾಧ್ಯವಾಗಿರಲಿಲ್ಲ. ಅಂತಹದ್ದೊಂದು ಕೆಟ್ಟ ಪರಂಪರೆಯನ್ನು ಸಂಕೇಶ್ವರ್ ಪ್ರಾರಂಭಿಸಿದರು. ಲಿಂಗಾಯತ ಸ್ವಾಮಿಗಳು,‌ಮಠಗಳು ಮತ್ತು‌ ಲಿಂಗಾಯತ ಶಿಕ್ಷಣ ಸಂಸ್ಥೆಗಳನ್ನು ಇದಕ್ಕಾಗಿ‌ ಬಳಸಿಕೊಂಡರು.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಮೂರನೆಯದಾಗಿ, ಪತ್ರಿಕೆಯನ್ನು ಮುಜುಗರ ಇಲ್ಲದೆ ನೇರವಾಗಿ ತನ್ನ ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡವರು ಕೂಡಾ ಸಂಕೇಶ್ವರ್. ಪತ್ರಿಕೆಯ ಮೂಲಕವೇ ಅವರ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿ ಸಂಸತ್ ಪ್ರವೇಶಿಸಿದ ಸಂಕೇಶ್ವರ್ ಕೊನೆಗೆ ಅಧಿಕಾರದ ಮತ್ತಿನಿಂದ ಸ್ವಂತ ಪಕ್ಷ ಕಟ್ಟಿ‌ ಮುಖ್ಯಮಂತ್ರಿಯಾಗಲು ಹೊರಟು ಬುದ್ದಿ ಕಲಿತು ಮತ್ತೆ‌ ಬಿಜೆಪಿ ಸೇರಿಕೊಂಡರು.

ನಾಲ್ಕನೆಯದಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಹಲವಾರು ‘ಪತ್ರಕರ್ತ ರತ್ನ’ ಗಳನ್ನು‌ ನೀಡಿದವರು‌ ಕೂಡಾ ಸಂಕೇಶ್ವರ್. ಅವರಲ್ಲಿ ವಿಶ್ವೇಶ್ವರ ಭಟ್, ತಿಮ್ಮಪ್ಪ ಭಟ್, ಹರಿಪ್ರಕಾಶ ಕೋಣೆಮನೆ ಮೊದಲಾದವರು ಪ್ರಮುಖರು. ಇಂದಿನ‌‌ ಕನ್ನಡ ಪತ್ರಿಕೆಗಳಲ್ಲಿ ಈ ಭಟ್ರುಗಳ ಶಿಷ್ಯಗಣವೇ ತುಂಬಿವೆ.

ಕೊನೆಗೂ ಸಂಕೇಶ್ವರ್ ಅವರಿಗೆ ತನ್ನ ಜಾತಿಯ ನಾಲ್ಕು ಒಳ್ಳೆಯ ಪತ್ರಕರ್ತರನ್ನು‌ ರೂಪಿಸಲು‌ ಕೂಡಾ ಸಾಧ್ಯವಾಗಿಲ್ಲ. ರವಿ ಬೆಳಗೆರೆ,‌ ಚಕ್ರವರ್ತಿಯಂತಹವರಿಗೆ ಮುಖ್ಯವಾಹಿನಿ ಮಾಧ್ಯಮದಲ್ಲಿ ಮಾನ್ಯತೆ ನೀಡಿದವರು ಕೂಡಾ ಸಂಕೇಶ್ವರ್. ಈ ರೀತಿ ಕನ್ನಡ ಪತ್ರಿಕೋದ್ಯೋಗವನ್ನು ವ್ಯಾಪಾರ, ಜಾತಿ ಮತ್ತು ರಾಜಕೀಯದ ಕೆಸರಲ್ಲಿ ಮುಳುಗಿಸಿದವರು ಸಂಕೇಶ್ವರ್.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಉದ್ಯಮವಾಗಿ ಬದಲಾಗುತ್ತಿದ್ದ ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಸಂಕೇಶ್ವರ್ ಅವರಂತಹ ಚಾಣಾಕ್ಷ್ಯ ಉದ್ಯಮಿಯ ಅಗತ್ಯ ಖಂಡಿತ ಇತ್ತು. ಸಂಕೇಶ್ವರ್ ಅಂತಹ ಒಂದು ನಿರ್ವಾತವನ್ನು ತುಂಬಬಹುದೆಂಬ ನಿರೀಕ್ಷೆ ಇತ್ತು. ಅವರು ಕನ್ನಡ ಓದುಗರ ಸಂಖ್ಯೆಯನ್ನು ಬೆಳೆಸಿದರು, ಹೊಸ ಪ್ರಯೋಗಳಿಗೆ ಕನ್ನಡ ಮಾಧ್ಯಮವನ್ನು ತೆರೆದರು ಎನ್ನುವುದು ನಿಜ,‌ಇದು ಅವರ ಕೊಡುಗೆಯೂ ಹೌದು.

ಇದರ ಜೊತೆಗೆ ಕನ್ನಡ ಪತ್ರಿಕೆಗಳನ್ನು ಸಂಪೂರ್ಣ ವ್ಯಾಪಾರದ ಸರಕನ್ನಾಗಿ‌ ಮಾಡಿದ ಮತ್ತು ಸಮಾಜದಲ್ಲಿ ಪತ್ರಕರ್ತರಿಗಿದ್ದ ಗೌರವ‌ ಕಳೆದುಕೊಳ್ಳುವಂತೆ ಮಾಡಿದ ಕೀರ್ತಿಯೂ ಅವರಿಗೆ‌ ಸಲ್ಲುತ್ತದೆ.

ನನ್ನ ಪ್ರಕಾರ ಸಂಕೇಶ್ವರ್ ಅವರಿಗೆ ಪತ್ರಕರ್ತರ ಬಗ್ಗೆ ದ್ವೇಷ ಇಲ್ಲದೆ ಇದ್ದರೂ ವಿಶೇಷ ಗೌರವ ಖಂಡಿತ ಇಲ್ಲ. ಅವರು ಪತ್ರಿಕೆ ಪ್ರಾರಂಭಿಸಿದ ಹೊಸತರಲ್ಲಿ ಯಾರ ಜೊತೆಯಲ್ಲಿಯೋ ಮಾತನಾಡುತ್ತಾ “ನಮ್ಮ ಲಾರಿ ಚಾಲಕರ ಸಂಬಳಕ್ಕಿಂತಲೂ ಕಡಿಮೆ ಸಂಬಳಕ್ಕೆ ಪತ್ರಕರ್ತರು ಕೆಲಸಕ್ಕೆ ಸಿಗ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು‌ ನಕ್ಕಿದ್ದರಂತೆ. ಈ ಕಾರಣದಿಂದಾಗಿಯೋ ಏನೋ, ಈಶ್ವರ್ ದೈದೋಟ, ಮಹದೇವಪ್ಪ, ಕೃಷ್ಣ ಪ್ರಸಾದ್, ಜಯಂತ್ ಕಾಯ್ಕಿಣಿಯಂತಹವರು ಕೂಡಾ ಬಹಳ ದಿನ ಅವರ ಬಳಿ ಉಳಿಯಲಿಲ್ಲ.

ತಪ್ಪು‌ ಖಂಡಿತ ಅವರದ್ದಲ್ಲ, ಅವರ ಸಾರಥ್ಯದ ಪತ್ರಿಕೆ ಮತ್ತು ಟಿ.ವಿ ಚಾನೆಲ್‌ಗಳನ್ನು ಕನ್ನಡದ ಜನ ಒಪ್ಪಿಕೊಂಡಿದ್ದಾರೆ. ಅದೇ ರೀತಿ ಬಡವರ ಬಗೆಗಿನ ತಮ್ಮ ತಿರಸ್ಕಾರ ಮತ್ತು ಕೊರೊನಾಕ್ಕೆ ತಾವು ಕಂಡು ಹಿಡಿದ ಲಿಂಬೆಹುಳಿ ಚಿಕಿತ್ಸೆಯನ್ನೂ ಒಪ್ಪಿಕೊಳ್ಳಬಹುದೆಂಬ ಭರವಸೆಯಿಂದ ಮಾತನಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

(ಅಭಿಪ್ರಾಯ ಲೇಖಕರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತುಂಬಾ ಉತ್ತಮ ಬರಹ. ಕನ್ನಡ ಪತ್ರಿಕೋದ್ಯಮದ ಇಂದಿನ ಅಧೋಗತಿಯ ಕುರಿತು ಒಂದಿಷ್ಟು ಕಾಲ ವಿಜಯ ಸಂಕೇಶ್ವರ ಮೀಸಲಿರಿಸಿ, ಆತ್ಮಾವಲೋಕನ ಮಾಡಿಕೊಳ್ಳಲಿ. ಪತ್ರಿಕೋದ್ಯಮದ ಮೂಲಕ ಅವರು ಶತದಡ್ಡ ಶಿಖಾಮಣಿಗಳನ್ನೇ ಹಾಗೂ ತಲೆಯಲ್ಲಿ ಜಾತಿಯ ಹೆಂಡಿ ಬಿಟ್ಟರೆ ಮತ್ತೇನೂ ಇರದ ಎಡಬಿಡಂಗಿಗಳನ್ನೇ ಶ್ರೇಷ್ಠ ಪತ್ರಕರ್ತರೆಂದು ತಿಳಿದು ಬೆಳೆಸಿದ್ದಕ್ಕೆ ಕನ್ನಡ ಪತ್ರಿಕೋದ್ಯಮದ ಗುಣಮಟ್ಟವೂ ಒಂದಿಷ್ಟು ಕುಸಿಯಲು ಕಾರಣ. ಇದು, ಕನ್ನಡ ಪತ್ರಿಕೋದ್ಯಮದಲ್ಲಾದ ಬಹು ದೊಡ್ಡ ಅಪರಾಧ. ಇದಕ್ಕೂ, ವಿಜಯ ಸಂಕೇಶ್ವರ ಕಾರಣ ಎಂಬುದನ್ನು ತಳ್ಳಿ ಹಾಕುವಂತಿಲ್ಲ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...