Homeಮುಖಪುಟಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

- Advertisement -
- Advertisement -

ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ಎನ್ನುವುದನ್ನು ಬಹಳ ಮಂದಿ ಮರೆತುಬಿಟ್ಟಿದ್ದಾರೆ.

ಮೊದಲನೆಯದಾಗಿ, ಉದ್ಯಮವಾಗಿ ಪರಿವರ್ತನೆಗೊಳ್ಳುತ್ತಿದ್ದ ಕನ್ನಡ ಮಾಧ್ಯಮ‌ ಕ್ಷೇತ್ರವನ್ನು ಪತ್ರಿಕಾ ಧರ್ಮವನ್ನೇ ಮರೆತ ಕೇವಲ ಲಾಭ-ನಷ್ಟದ ವ್ಯಾಪಾರವನ್ನಾಗಿ‌ ಮಾಡಿದವರು ಸಂಕೇಶ್ವರ್. ಇಂಗ್ಲೀಷ್‌ ಮಾಧ್ಯಮದಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಾರಂಭಿಸಿದ್ದ ಬೆಲೆ‌ ಸಮರದ ಅನಾರೋಗ್ಯ‌ ಪೈಪೋಟಿಯ ವ್ಯಾಪಾರಿ ತಂತ್ರವನ್ನು‌ ವಿಜಯ ಕರ್ನಾಟಕದ ಮೂಲಕ ಕರ್ನಾಟಕಕ್ಕೆ ಪರಿಚಯಿಸಿದವರು ಸಂಕೇಶ್ವರ್. (ಒಂದು ರೂಪಾಯಿಗೆ ಪತ್ರಿಕೆ, ಪತ್ರಿಕೆಯ ಜೊತೆ ಏನೇನೋ‌ ಗಿಪ್ಟ್‌ಗಳ‌ ಆಮಿಷ ಇತ್ಯಾದಿ)

ಎರಡನೆಯದಾಗಿ ಪತ್ರಿಕೆಗೆ ಓದುಗರನ್ನು ಸೆಳೆಯಲು ತನ್ನ ಜಾತಿಯನ್ನು ದುರ್ಬಳಕೆ‌ ಮಾಡಿಕೊಂಡವರು ಸಂಕೇಶ್ವರ್. ಬ್ರಾಹ್ಮಣರು ಸಂಪಾದಕೀಯ ವಿಭಾಗದಲ್ಲಿ ಪಾರುಪತ್ಯ ನಡೆಸುತ್ತಿದ್ದರೂ‌, ಜನಸಂಖ್ಯಾ ಬಲ ಇಲ್ಲದ ಬ್ರಾಹ್ಮಣ ಸಂಪಾದಕರಿಗಾಗಲಿ, ಮಾಧ್ಯಮ ಮಾಲೀಕರಾಗಾಲಿ ತನ್ನ ಜಾತಿ ಬಲದ ಮೂಲಕ‌‌ ಪ್ರಸಾರದ ಸಂಖ್ಯೆಯನ್ನು ಹೆಚ್ಚು‌ಮಾಡಲು ಸಾಧ್ಯವಾಗಿರಲಿಲ್ಲ. ಅಂತಹದ್ದೊಂದು ಕೆಟ್ಟ ಪರಂಪರೆಯನ್ನು ಸಂಕೇಶ್ವರ್ ಪ್ರಾರಂಭಿಸಿದರು. ಲಿಂಗಾಯತ ಸ್ವಾಮಿಗಳು,‌ಮಠಗಳು ಮತ್ತು‌ ಲಿಂಗಾಯತ ಶಿಕ್ಷಣ ಸಂಸ್ಥೆಗಳನ್ನು ಇದಕ್ಕಾಗಿ‌ ಬಳಸಿಕೊಂಡರು.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಮೂರನೆಯದಾಗಿ, ಪತ್ರಿಕೆಯನ್ನು ಮುಜುಗರ ಇಲ್ಲದೆ ನೇರವಾಗಿ ತನ್ನ ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡವರು ಕೂಡಾ ಸಂಕೇಶ್ವರ್. ಪತ್ರಿಕೆಯ ಮೂಲಕವೇ ಅವರ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿ ಸಂಸತ್ ಪ್ರವೇಶಿಸಿದ ಸಂಕೇಶ್ವರ್ ಕೊನೆಗೆ ಅಧಿಕಾರದ ಮತ್ತಿನಿಂದ ಸ್ವಂತ ಪಕ್ಷ ಕಟ್ಟಿ‌ ಮುಖ್ಯಮಂತ್ರಿಯಾಗಲು ಹೊರಟು ಬುದ್ದಿ ಕಲಿತು ಮತ್ತೆ‌ ಬಿಜೆಪಿ ಸೇರಿಕೊಂಡರು.

ನಾಲ್ಕನೆಯದಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಹಲವಾರು ‘ಪತ್ರಕರ್ತ ರತ್ನ’ ಗಳನ್ನು‌ ನೀಡಿದವರು‌ ಕೂಡಾ ಸಂಕೇಶ್ವರ್. ಅವರಲ್ಲಿ ವಿಶ್ವೇಶ್ವರ ಭಟ್, ತಿಮ್ಮಪ್ಪ ಭಟ್, ಹರಿಪ್ರಕಾಶ ಕೋಣೆಮನೆ ಮೊದಲಾದವರು ಪ್ರಮುಖರು. ಇಂದಿನ‌‌ ಕನ್ನಡ ಪತ್ರಿಕೆಗಳಲ್ಲಿ ಈ ಭಟ್ರುಗಳ ಶಿಷ್ಯಗಣವೇ ತುಂಬಿವೆ.

ಕೊನೆಗೂ ಸಂಕೇಶ್ವರ್ ಅವರಿಗೆ ತನ್ನ ಜಾತಿಯ ನಾಲ್ಕು ಒಳ್ಳೆಯ ಪತ್ರಕರ್ತರನ್ನು‌ ರೂಪಿಸಲು‌ ಕೂಡಾ ಸಾಧ್ಯವಾಗಿಲ್ಲ. ರವಿ ಬೆಳಗೆರೆ,‌ ಚಕ್ರವರ್ತಿಯಂತಹವರಿಗೆ ಮುಖ್ಯವಾಹಿನಿ ಮಾಧ್ಯಮದಲ್ಲಿ ಮಾನ್ಯತೆ ನೀಡಿದವರು ಕೂಡಾ ಸಂಕೇಶ್ವರ್. ಈ ರೀತಿ ಕನ್ನಡ ಪತ್ರಿಕೋದ್ಯೋಗವನ್ನು ವ್ಯಾಪಾರ, ಜಾತಿ ಮತ್ತು ರಾಜಕೀಯದ ಕೆಸರಲ್ಲಿ ಮುಳುಗಿಸಿದವರು ಸಂಕೇಶ್ವರ್.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಉದ್ಯಮವಾಗಿ ಬದಲಾಗುತ್ತಿದ್ದ ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಸಂಕೇಶ್ವರ್ ಅವರಂತಹ ಚಾಣಾಕ್ಷ್ಯ ಉದ್ಯಮಿಯ ಅಗತ್ಯ ಖಂಡಿತ ಇತ್ತು. ಸಂಕೇಶ್ವರ್ ಅಂತಹ ಒಂದು ನಿರ್ವಾತವನ್ನು ತುಂಬಬಹುದೆಂಬ ನಿರೀಕ್ಷೆ ಇತ್ತು. ಅವರು ಕನ್ನಡ ಓದುಗರ ಸಂಖ್ಯೆಯನ್ನು ಬೆಳೆಸಿದರು, ಹೊಸ ಪ್ರಯೋಗಳಿಗೆ ಕನ್ನಡ ಮಾಧ್ಯಮವನ್ನು ತೆರೆದರು ಎನ್ನುವುದು ನಿಜ,‌ಇದು ಅವರ ಕೊಡುಗೆಯೂ ಹೌದು.

ಇದರ ಜೊತೆಗೆ ಕನ್ನಡ ಪತ್ರಿಕೆಗಳನ್ನು ಸಂಪೂರ್ಣ ವ್ಯಾಪಾರದ ಸರಕನ್ನಾಗಿ‌ ಮಾಡಿದ ಮತ್ತು ಸಮಾಜದಲ್ಲಿ ಪತ್ರಕರ್ತರಿಗಿದ್ದ ಗೌರವ‌ ಕಳೆದುಕೊಳ್ಳುವಂತೆ ಮಾಡಿದ ಕೀರ್ತಿಯೂ ಅವರಿಗೆ‌ ಸಲ್ಲುತ್ತದೆ.

ನನ್ನ ಪ್ರಕಾರ ಸಂಕೇಶ್ವರ್ ಅವರಿಗೆ ಪತ್ರಕರ್ತರ ಬಗ್ಗೆ ದ್ವೇಷ ಇಲ್ಲದೆ ಇದ್ದರೂ ವಿಶೇಷ ಗೌರವ ಖಂಡಿತ ಇಲ್ಲ. ಅವರು ಪತ್ರಿಕೆ ಪ್ರಾರಂಭಿಸಿದ ಹೊಸತರಲ್ಲಿ ಯಾರ ಜೊತೆಯಲ್ಲಿಯೋ ಮಾತನಾಡುತ್ತಾ “ನಮ್ಮ ಲಾರಿ ಚಾಲಕರ ಸಂಬಳಕ್ಕಿಂತಲೂ ಕಡಿಮೆ ಸಂಬಳಕ್ಕೆ ಪತ್ರಕರ್ತರು ಕೆಲಸಕ್ಕೆ ಸಿಗ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು‌ ನಕ್ಕಿದ್ದರಂತೆ. ಈ ಕಾರಣದಿಂದಾಗಿಯೋ ಏನೋ, ಈಶ್ವರ್ ದೈದೋಟ, ಮಹದೇವಪ್ಪ, ಕೃಷ್ಣ ಪ್ರಸಾದ್, ಜಯಂತ್ ಕಾಯ್ಕಿಣಿಯಂತಹವರು ಕೂಡಾ ಬಹಳ ದಿನ ಅವರ ಬಳಿ ಉಳಿಯಲಿಲ್ಲ.

ತಪ್ಪು‌ ಖಂಡಿತ ಅವರದ್ದಲ್ಲ, ಅವರ ಸಾರಥ್ಯದ ಪತ್ರಿಕೆ ಮತ್ತು ಟಿ.ವಿ ಚಾನೆಲ್‌ಗಳನ್ನು ಕನ್ನಡದ ಜನ ಒಪ್ಪಿಕೊಂಡಿದ್ದಾರೆ. ಅದೇ ರೀತಿ ಬಡವರ ಬಗೆಗಿನ ತಮ್ಮ ತಿರಸ್ಕಾರ ಮತ್ತು ಕೊರೊನಾಕ್ಕೆ ತಾವು ಕಂಡು ಹಿಡಿದ ಲಿಂಬೆಹುಳಿ ಚಿಕಿತ್ಸೆಯನ್ನೂ ಒಪ್ಪಿಕೊಳ್ಳಬಹುದೆಂಬ ಭರವಸೆಯಿಂದ ಮಾತನಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

(ಅಭಿಪ್ರಾಯ ಲೇಖಕರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತುಂಬಾ ಉತ್ತಮ ಬರಹ. ಕನ್ನಡ ಪತ್ರಿಕೋದ್ಯಮದ ಇಂದಿನ ಅಧೋಗತಿಯ ಕುರಿತು ಒಂದಿಷ್ಟು ಕಾಲ ವಿಜಯ ಸಂಕೇಶ್ವರ ಮೀಸಲಿರಿಸಿ, ಆತ್ಮಾವಲೋಕನ ಮಾಡಿಕೊಳ್ಳಲಿ. ಪತ್ರಿಕೋದ್ಯಮದ ಮೂಲಕ ಅವರು ಶತದಡ್ಡ ಶಿಖಾಮಣಿಗಳನ್ನೇ ಹಾಗೂ ತಲೆಯಲ್ಲಿ ಜಾತಿಯ ಹೆಂಡಿ ಬಿಟ್ಟರೆ ಮತ್ತೇನೂ ಇರದ ಎಡಬಿಡಂಗಿಗಳನ್ನೇ ಶ್ರೇಷ್ಠ ಪತ್ರಕರ್ತರೆಂದು ತಿಳಿದು ಬೆಳೆಸಿದ್ದಕ್ಕೆ ಕನ್ನಡ ಪತ್ರಿಕೋದ್ಯಮದ ಗುಣಮಟ್ಟವೂ ಒಂದಿಷ್ಟು ಕುಸಿಯಲು ಕಾರಣ. ಇದು, ಕನ್ನಡ ಪತ್ರಿಕೋದ್ಯಮದಲ್ಲಾದ ಬಹು ದೊಡ್ಡ ಅಪರಾಧ. ಇದಕ್ಕೂ, ವಿಜಯ ಸಂಕೇಶ್ವರ ಕಾರಣ ಎಂಬುದನ್ನು ತಳ್ಳಿ ಹಾಕುವಂತಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...