Homeಮುಖಪುಟಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

- Advertisement -
- Advertisement -

ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ಎನ್ನುವುದನ್ನು ಬಹಳ ಮಂದಿ ಮರೆತುಬಿಟ್ಟಿದ್ದಾರೆ.

ಮೊದಲನೆಯದಾಗಿ, ಉದ್ಯಮವಾಗಿ ಪರಿವರ್ತನೆಗೊಳ್ಳುತ್ತಿದ್ದ ಕನ್ನಡ ಮಾಧ್ಯಮ‌ ಕ್ಷೇತ್ರವನ್ನು ಪತ್ರಿಕಾ ಧರ್ಮವನ್ನೇ ಮರೆತ ಕೇವಲ ಲಾಭ-ನಷ್ಟದ ವ್ಯಾಪಾರವನ್ನಾಗಿ‌ ಮಾಡಿದವರು ಸಂಕೇಶ್ವರ್. ಇಂಗ್ಲೀಷ್‌ ಮಾಧ್ಯಮದಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಾರಂಭಿಸಿದ್ದ ಬೆಲೆ‌ ಸಮರದ ಅನಾರೋಗ್ಯ‌ ಪೈಪೋಟಿಯ ವ್ಯಾಪಾರಿ ತಂತ್ರವನ್ನು‌ ವಿಜಯ ಕರ್ನಾಟಕದ ಮೂಲಕ ಕರ್ನಾಟಕಕ್ಕೆ ಪರಿಚಯಿಸಿದವರು ಸಂಕೇಶ್ವರ್. (ಒಂದು ರೂಪಾಯಿಗೆ ಪತ್ರಿಕೆ, ಪತ್ರಿಕೆಯ ಜೊತೆ ಏನೇನೋ‌ ಗಿಪ್ಟ್‌ಗಳ‌ ಆಮಿಷ ಇತ್ಯಾದಿ)

ಎರಡನೆಯದಾಗಿ ಪತ್ರಿಕೆಗೆ ಓದುಗರನ್ನು ಸೆಳೆಯಲು ತನ್ನ ಜಾತಿಯನ್ನು ದುರ್ಬಳಕೆ‌ ಮಾಡಿಕೊಂಡವರು ಸಂಕೇಶ್ವರ್. ಬ್ರಾಹ್ಮಣರು ಸಂಪಾದಕೀಯ ವಿಭಾಗದಲ್ಲಿ ಪಾರುಪತ್ಯ ನಡೆಸುತ್ತಿದ್ದರೂ‌, ಜನಸಂಖ್ಯಾ ಬಲ ಇಲ್ಲದ ಬ್ರಾಹ್ಮಣ ಸಂಪಾದಕರಿಗಾಗಲಿ, ಮಾಧ್ಯಮ ಮಾಲೀಕರಾಗಾಲಿ ತನ್ನ ಜಾತಿ ಬಲದ ಮೂಲಕ‌‌ ಪ್ರಸಾರದ ಸಂಖ್ಯೆಯನ್ನು ಹೆಚ್ಚು‌ಮಾಡಲು ಸಾಧ್ಯವಾಗಿರಲಿಲ್ಲ. ಅಂತಹದ್ದೊಂದು ಕೆಟ್ಟ ಪರಂಪರೆಯನ್ನು ಸಂಕೇಶ್ವರ್ ಪ್ರಾರಂಭಿಸಿದರು. ಲಿಂಗಾಯತ ಸ್ವಾಮಿಗಳು,‌ಮಠಗಳು ಮತ್ತು‌ ಲಿಂಗಾಯತ ಶಿಕ್ಷಣ ಸಂಸ್ಥೆಗಳನ್ನು ಇದಕ್ಕಾಗಿ‌ ಬಳಸಿಕೊಂಡರು.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಮೂರನೆಯದಾಗಿ, ಪತ್ರಿಕೆಯನ್ನು ಮುಜುಗರ ಇಲ್ಲದೆ ನೇರವಾಗಿ ತನ್ನ ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡವರು ಕೂಡಾ ಸಂಕೇಶ್ವರ್. ಪತ್ರಿಕೆಯ ಮೂಲಕವೇ ಅವರ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿ ಸಂಸತ್ ಪ್ರವೇಶಿಸಿದ ಸಂಕೇಶ್ವರ್ ಕೊನೆಗೆ ಅಧಿಕಾರದ ಮತ್ತಿನಿಂದ ಸ್ವಂತ ಪಕ್ಷ ಕಟ್ಟಿ‌ ಮುಖ್ಯಮಂತ್ರಿಯಾಗಲು ಹೊರಟು ಬುದ್ದಿ ಕಲಿತು ಮತ್ತೆ‌ ಬಿಜೆಪಿ ಸೇರಿಕೊಂಡರು.

ನಾಲ್ಕನೆಯದಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಹಲವಾರು ‘ಪತ್ರಕರ್ತ ರತ್ನ’ ಗಳನ್ನು‌ ನೀಡಿದವರು‌ ಕೂಡಾ ಸಂಕೇಶ್ವರ್. ಅವರಲ್ಲಿ ವಿಶ್ವೇಶ್ವರ ಭಟ್, ತಿಮ್ಮಪ್ಪ ಭಟ್, ಹರಿಪ್ರಕಾಶ ಕೋಣೆಮನೆ ಮೊದಲಾದವರು ಪ್ರಮುಖರು. ಇಂದಿನ‌‌ ಕನ್ನಡ ಪತ್ರಿಕೆಗಳಲ್ಲಿ ಈ ಭಟ್ರುಗಳ ಶಿಷ್ಯಗಣವೇ ತುಂಬಿವೆ.

ಕೊನೆಗೂ ಸಂಕೇಶ್ವರ್ ಅವರಿಗೆ ತನ್ನ ಜಾತಿಯ ನಾಲ್ಕು ಒಳ್ಳೆಯ ಪತ್ರಕರ್ತರನ್ನು‌ ರೂಪಿಸಲು‌ ಕೂಡಾ ಸಾಧ್ಯವಾಗಿಲ್ಲ. ರವಿ ಬೆಳಗೆರೆ,‌ ಚಕ್ರವರ್ತಿಯಂತಹವರಿಗೆ ಮುಖ್ಯವಾಹಿನಿ ಮಾಧ್ಯಮದಲ್ಲಿ ಮಾನ್ಯತೆ ನೀಡಿದವರು ಕೂಡಾ ಸಂಕೇಶ್ವರ್. ಈ ರೀತಿ ಕನ್ನಡ ಪತ್ರಿಕೋದ್ಯೋಗವನ್ನು ವ್ಯಾಪಾರ, ಜಾತಿ ಮತ್ತು ರಾಜಕೀಯದ ಕೆಸರಲ್ಲಿ ಮುಳುಗಿಸಿದವರು ಸಂಕೇಶ್ವರ್.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಉದ್ಯಮವಾಗಿ ಬದಲಾಗುತ್ತಿದ್ದ ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಸಂಕೇಶ್ವರ್ ಅವರಂತಹ ಚಾಣಾಕ್ಷ್ಯ ಉದ್ಯಮಿಯ ಅಗತ್ಯ ಖಂಡಿತ ಇತ್ತು. ಸಂಕೇಶ್ವರ್ ಅಂತಹ ಒಂದು ನಿರ್ವಾತವನ್ನು ತುಂಬಬಹುದೆಂಬ ನಿರೀಕ್ಷೆ ಇತ್ತು. ಅವರು ಕನ್ನಡ ಓದುಗರ ಸಂಖ್ಯೆಯನ್ನು ಬೆಳೆಸಿದರು, ಹೊಸ ಪ್ರಯೋಗಳಿಗೆ ಕನ್ನಡ ಮಾಧ್ಯಮವನ್ನು ತೆರೆದರು ಎನ್ನುವುದು ನಿಜ,‌ಇದು ಅವರ ಕೊಡುಗೆಯೂ ಹೌದು.

ಇದರ ಜೊತೆಗೆ ಕನ್ನಡ ಪತ್ರಿಕೆಗಳನ್ನು ಸಂಪೂರ್ಣ ವ್ಯಾಪಾರದ ಸರಕನ್ನಾಗಿ‌ ಮಾಡಿದ ಮತ್ತು ಸಮಾಜದಲ್ಲಿ ಪತ್ರಕರ್ತರಿಗಿದ್ದ ಗೌರವ‌ ಕಳೆದುಕೊಳ್ಳುವಂತೆ ಮಾಡಿದ ಕೀರ್ತಿಯೂ ಅವರಿಗೆ‌ ಸಲ್ಲುತ್ತದೆ.

ನನ್ನ ಪ್ರಕಾರ ಸಂಕೇಶ್ವರ್ ಅವರಿಗೆ ಪತ್ರಕರ್ತರ ಬಗ್ಗೆ ದ್ವೇಷ ಇಲ್ಲದೆ ಇದ್ದರೂ ವಿಶೇಷ ಗೌರವ ಖಂಡಿತ ಇಲ್ಲ. ಅವರು ಪತ್ರಿಕೆ ಪ್ರಾರಂಭಿಸಿದ ಹೊಸತರಲ್ಲಿ ಯಾರ ಜೊತೆಯಲ್ಲಿಯೋ ಮಾತನಾಡುತ್ತಾ “ನಮ್ಮ ಲಾರಿ ಚಾಲಕರ ಸಂಬಳಕ್ಕಿಂತಲೂ ಕಡಿಮೆ ಸಂಬಳಕ್ಕೆ ಪತ್ರಕರ್ತರು ಕೆಲಸಕ್ಕೆ ಸಿಗ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು‌ ನಕ್ಕಿದ್ದರಂತೆ. ಈ ಕಾರಣದಿಂದಾಗಿಯೋ ಏನೋ, ಈಶ್ವರ್ ದೈದೋಟ, ಮಹದೇವಪ್ಪ, ಕೃಷ್ಣ ಪ್ರಸಾದ್, ಜಯಂತ್ ಕಾಯ್ಕಿಣಿಯಂತಹವರು ಕೂಡಾ ಬಹಳ ದಿನ ಅವರ ಬಳಿ ಉಳಿಯಲಿಲ್ಲ.

ತಪ್ಪು‌ ಖಂಡಿತ ಅವರದ್ದಲ್ಲ, ಅವರ ಸಾರಥ್ಯದ ಪತ್ರಿಕೆ ಮತ್ತು ಟಿ.ವಿ ಚಾನೆಲ್‌ಗಳನ್ನು ಕನ್ನಡದ ಜನ ಒಪ್ಪಿಕೊಂಡಿದ್ದಾರೆ. ಅದೇ ರೀತಿ ಬಡವರ ಬಗೆಗಿನ ತಮ್ಮ ತಿರಸ್ಕಾರ ಮತ್ತು ಕೊರೊನಾಕ್ಕೆ ತಾವು ಕಂಡು ಹಿಡಿದ ಲಿಂಬೆಹುಳಿ ಚಿಕಿತ್ಸೆಯನ್ನೂ ಒಪ್ಪಿಕೊಳ್ಳಬಹುದೆಂಬ ಭರವಸೆಯಿಂದ ಮಾತನಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

(ಅಭಿಪ್ರಾಯ ಲೇಖಕರ ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತುಂಬಾ ಉತ್ತಮ ಬರಹ. ಕನ್ನಡ ಪತ್ರಿಕೋದ್ಯಮದ ಇಂದಿನ ಅಧೋಗತಿಯ ಕುರಿತು ಒಂದಿಷ್ಟು ಕಾಲ ವಿಜಯ ಸಂಕೇಶ್ವರ ಮೀಸಲಿರಿಸಿ, ಆತ್ಮಾವಲೋಕನ ಮಾಡಿಕೊಳ್ಳಲಿ. ಪತ್ರಿಕೋದ್ಯಮದ ಮೂಲಕ ಅವರು ಶತದಡ್ಡ ಶಿಖಾಮಣಿಗಳನ್ನೇ ಹಾಗೂ ತಲೆಯಲ್ಲಿ ಜಾತಿಯ ಹೆಂಡಿ ಬಿಟ್ಟರೆ ಮತ್ತೇನೂ ಇರದ ಎಡಬಿಡಂಗಿಗಳನ್ನೇ ಶ್ರೇಷ್ಠ ಪತ್ರಕರ್ತರೆಂದು ತಿಳಿದು ಬೆಳೆಸಿದ್ದಕ್ಕೆ ಕನ್ನಡ ಪತ್ರಿಕೋದ್ಯಮದ ಗುಣಮಟ್ಟವೂ ಒಂದಿಷ್ಟು ಕುಸಿಯಲು ಕಾರಣ. ಇದು, ಕನ್ನಡ ಪತ್ರಿಕೋದ್ಯಮದಲ್ಲಾದ ಬಹು ದೊಡ್ಡ ಅಪರಾಧ. ಇದಕ್ಕೂ, ವಿಜಯ ಸಂಕೇಶ್ವರ ಕಾರಣ ಎಂಬುದನ್ನು ತಳ್ಳಿ ಹಾಕುವಂತಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...