Homeಮುಖಪುಟಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

- Advertisement -
- Advertisement -

ಕ್ರಿಸ್‌ಮಸ್ ಹಿನ್ನಲೆಯಲ್ಲಿ ಸಾಂತಾ ಕ್ಲಾಸ್ ಬಟ್ಟೆ ಧರಿಸಿ ಝೊಮಾಟೊ ಆಹಾರ ತಲುಪಿಸುತ್ತಿದ್ದ ಯುವಕನನ್ನು, ಬಿಜೆಪಿ ಪರ ಸಂಘಟನೆಯಾದ ಹಿಂದೂ ಜಾಗರಣ ಮಂಚ್‌ನ ದುಷ್ಕರ್ಮಿಗಳು ನಡು ರಸ್ತೆಯಲ್ಲಿ ನಿಲ್ಲಿಸಿ ಅವರ ಬಟ್ಟೆ ಕಳಚುವಂತೆ ಮಾಡಿ,ಜೈಶ್ರೀರಾಂ ಹೇಳುವಂತೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಘಟನೆ ಡಿಸೆಂಬರ್ 25 ರಂದು ನಡೆದಿದೆ ಎಂದು ದಿ ಲಲ್ಲನ್ ಟಾಪ್ ವರದಿ ಮಾಡಿದ್ದು, ವಿಡಿಯೊದಲ್ಲಿ ಆಹಾರ ತಲುಪಿಸುತ್ತಿದ್ದ ಯುವಕ ಸಾಂತಾ ಕ್ಲಾಸ್ ಕಾಸ್ಟ್ಯೂಮ್ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರನ್ನು ತಡೆದು ಈ ಬಗ್ಗೆ ಕೇಳಿದ್ದಾರೆ. ಆಗ ಯುವಕ ಜೊಮಾಟೊದಲ್ಲಿ ಕ್ರಿಸ್‌ಮಸ್ ದಿನದಂದು ಧರಿಸಲು ಕಂಪನಿಯಿಂದ ಸಾಂತಾ ಕ್ಲಾಸ್ ಬಟ್ಟೆ ನೀಡಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವೇಳೆ ದುಷ್ಕರ್ಮಿಗಳು “ಹಿಂದೂ ಹಬ್ಬಗಳಲ್ಲಿ ನೀವು ರಾಮನ ವೇಷಭೂಷಣ ಅಥವಾ ಕೇಸರಿ ಬಟ್ಟೆಯನ್ನು ಧರಿಸಿ ಏಕೆ ವಿತರಿಸಬಾರದು?” ಎಂದು ಪ್ರಶ್ನಿಸಿದ್ದಾರೆ. ಇದಾದ ಬಳಿಕ ಆಹಾರ ತಲುಪಿಸುವ ಯುವಕನಿಗೆ ರಸ್ತೆಯಲ್ಲೆ ಬಟ್ಟೆ ಕಳಚುವಂತೆ ಮಾಡಿರುವ ದುಷ್ಕರ್ಮಿಗಳು, ಝೊಮಾಟೊ ಕಂಪನಿಯ ಬಟ್ಟೆಯಲ್ಲಿ ಆಹಾರ ತಲುಪಿಸುವಂತೆ ಹೇಳಿದ್ದಾರೆ.

ಈ ವೇಳೆ ಆಹಾರ ತಲುಪಿಸುವ ಯುವಕ ಕಂಪೆನಿಯು ಕೆಲಸದ ವೇಳೆ ಈ ಬಟ್ಟೆ ಧರಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಸೆಲ್ಫಿ ಅಥವಾ ಚಿತ್ರವನ್ನು ಕೇಳುತ್ತದೆ ಎಂದು ಹೇಳಿದ್ದಾರೆ. ಒಂದು ವೇಳೆ ಈ ಬಟ್ಟೆ ಧರಿಸದೆ ಇದ್ದರೆ ತಮಗೆ ಸಿಗುವ ಇನ್ಸೆಟಿವ್ ಕಡಿತವಾಗುತ್ತದೆ ಮತ್ತು ಐಡಿ ಬಂದ್ ಆಗುತ್ತದೆ ಎಂದು ಅವರು ದುಷ್ಕರ್ಮಿಗಳೊಂದಿಗೆ ಹೇಳಿದ್ದಾರೆ. ಆದರೂ, ಅವರು ಅದನ್ನು ಕೇಳದೆ ಅವರ ಬಟ್ಟೆಯನ್ನು ತೆಗೆಸಿದ್ದಾರೆ.

ಇದಾದ ನಂತರ, ತನ್ನ ಬಟ್ಟೆಗಳನ್ನು ತೆಗೆದು, ಅವುಗಳನ್ನು ಬಾಕ್ಸ್‌ನಲ್ಲಿ ಇಟ್ಟುಕೊಂಡ ಯುವಕನಿಗೆ ಜೈಶ್ರೀರಾಮ್ ಹೇಳುವಂತೆ ಹೇಳಿದ್ದು, ಅವರನ್ನು ಜೈಶ್ರೀರಾಂ ಹೇಳಿದ್ದಾರೆ. ಸದ್ಯ ಈ ವಿಚಾರದಲ್ಲಿ ಕಂಪನಿಯಿಂದ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ʼಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆʼ : ಅರವಿಂದ್ ಕೇಜ್ರಿವಾಲ್

ʼಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆʼ : ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...