Homeಮುಖಪುಟರವೀಂದ್ರನಾಥ ಟ್ಯಾಗೋರ್‌ರ 'ಶಾಂತಿನಿಕೇತನ' UNESCOದ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ

ರವೀಂದ್ರನಾಥ ಟ್ಯಾಗೋರ್‌ರ ‘ಶಾಂತಿನಿಕೇತನ’ UNESCOದ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ

- Advertisement -
- Advertisement -

ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರು ತಮ್ಮ ಜೀವನದ ಬಹುಭಾಗವನ್ನು ಕಳೆದ ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನ ಪಟ್ಟಣವನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ.

ಈ ಬಗ್ಗೆ UNESCO ಭಾನುವಾರ X (ಔಪಚಾರಿಕವಾಗಿ Twitter)ನಲ್ಲಿ ಪೋಸ್ಟ್ ಮಾಡಿದ್ದು, ”ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಹೊಸ ಸೇರ್ಪಡೆ: ಭಾರತದ ಶಾಂತಿನಿಕೇತನಗೆ ಅಭಿನಂದನೆಗಳು!” ಬರೆದಿದೆ.

ಕವಿ ಮತ್ತು ತತ್ವಜ್ಞಾನಿ ಟ್ಯಾಗೋರ್ ಅವರಿಂದ 1901ರಲ್ಲಿ ಸ್ಥಾಪಿಸಲ್ಪಟ್ಟ ಶಾಂತಿನಿಕೇತನವು ಪ್ರಾಚೀನ ಭಾರತೀಯ ಸಂಪ್ರದಾಯಗಳ ಆಧಾರದ ಮೇಲೆ ವಸತಿ ಶಾಲೆ ಮತ್ತು ಕಲೆಯ ಕೇಂದ್ರವಾಗಿತ್ತು ಮತ್ತು ಧಾರ್ಮಿಕ ಮತ್ತು ಸಾಂಸ್ಕೃತಿಕ ಗಡಿಗಳನ್ನು ಮೀರಿದ ಮಾನವೀಯತೆ ಮತ್ತು ಏಕತೆಯನ್ನು ಸಾರುತ್ತದೆ.

1921ರಲ್ಲಿ ಶಾಂತಿನಿಕೇತನದಲ್ಲಿ ‘ವಿಶ್ವ ವಿಶ್ವವಿದ್ಯಾನಿಲಯ’ವನ್ನು ಸ್ಥಾಪಿಸಲಾಯಿತು, ಇದು ಮಾನವೀಯತೆಯ ಏಕತೆಯನ್ನು ಅಥವಾ “ವಿಶ್ವ ಭಾರತ” ಎನ್ನುವ ಉದ್ದೇಶವನ್ನು ಪ್ರತಿಪಾದಿಸುತ್ತದೆ. 20ನೇ ಶತಮಾನದ ಆರಂಭದಲ್ಲಿ ಚಾಲ್ತಿಯಲ್ಲಿರುವ ಬ್ರಿಟಿಷ್ ವಸಾಹತುಶಾಹಿ ವಾಸ್ತುಶಿಲ್ಪದ ದೃಷ್ಟಿಕೋನಗಳಿಂದ ಮತ್ತು ಯುರೋಪಿಯನ್ ಆಧುನಿಕತಾವಾದದಿಂದ ಭಿನ್ನವಾಗಿರುವ ಶಾಂತಿನಿಕೇತನವು ಪ್ಯಾನ್-ಏಷ್ಯನ್ ಆಧುನಿಕತೆಯನ್ನು ಪ್ರತಿನಿಧಿಸುತ್ತದೆ, ಇದು ಪ್ರಾಚೀನ, ಮಧ್ಯಕಾಲೀನ ಮತ್ತು ಜಾನಪದ ಸಂಪ್ರದಾಯಗಳನ್ನು ಬಿಂಬಿಸುತ್ತದೆ.

ಬಿರ್ಭುಮ್ ಜಿಲ್ಲೆಯಲ್ಲಿರುವ ಈ ಸಾಂಸ್ಕೃತಿಕ ತಾಣಕ್ಕೆ ಯುನೆಸ್ಕೋ ಟ್ಯಾಗ್ ಪಡೆಯಲು ಭಾರತವು ಬಹಳ ಹಿಂದಿನಿಂದಲೂ ಶ್ರಮಿಸುತ್ತಿದೆ. ಕೆಲವು ತಿಂಗಳ ಹಿಂದೆ, ಅಂತರಾಷ್ಟ್ರೀಯ ಸಲಹಾ ಸಂಸ್ಥೆ ICOMOS ನಿಂದ UNESCO ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ: ಏಷ್ಯಾ ಕಪ್‌ ಫೈನಲ್: ಭಾರತಕ್ಕೆ ರೋಚಕ ಗೆಲುವು

ಶಾಂತಿನಿಕೇತನವು ಮೂಲತಃ ದೇಬೇಂದ್ರನಾಥ ಟ್ಯಾಗೋರ್ ನಿರ್ಮಿಸಿದ ಆಶ್ರಮವಾಗಿತ್ತು, ಅಲ್ಲಿ ಜಾತಿ ಮತ್ತು ಧರ್ಮದ ಭೇದವಿಲ್ಲದೆ ಯಾರಾದರೂ ಬಂದು ಒಬ್ಬನೇ ಪರಮಾತ್ಮನನ್ನು ಧ್ಯಾನಿಸಲು ಸಮಯ ಕಳೆಯಬಹುದು. ” ಯುನೆಸ್ಕೋ ವಿಶ್ವ ಪರಂಪರೆಯ ಕೇಂದ್ರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಥಳದ ವಿವರಣೆಯ ಪ್ರಕಾರ. ಇದು ನಂತರ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ್ ಠಾಗೂರ್ ಅವರ ಮನೆಯಾಯಿತು.

ಕವಿ ರವೀಂದ್ರನಾಥರ ತಂದೆಯಾಗಿದ್ದ ದೇಬೇಂದ್ರನಾಥ್ ಅವರನ್ನು ಮಹರ್ಷಿ ಎಂದೂ ಕರೆಯಲಾಗುತ್ತಿತ್ತು (ಅಂದರೆ ಸಂತ ಮತ್ತು ಋಷಿ ಎರಡೂ ಆಗಿರುವವರು), ಭಾರತೀಯ ನವೋದಯದ ಪ್ರಮುಖ ವ್ಯಕ್ತಿಯಾಗಿದ್ದರು.

2010ರಲ್ಲಿ ಕೇಂದ್ರವು ಶಾಂತಿನಿಕೇತನಕ್ಕೆ ವಿಶ್ವ ಪರಂಪರೆಯ ಟ್ಯಾಗ್ ಪಡೆಯಲು ಪ್ರಯತ್ನಿಸಿತು. ಇದು 2021 ರಲ್ಲಿ ಮತ್ತೆ ತನ್ನ ಅಭಿಯಾನವನ್ನು ಪ್ರಾರಂಭಿಸಿತು ಮತ್ತು ವಿಶ್ವ ಭಾರತಿ ಅಧಿಕಾರಿಗಳ ಸಹಾಯದಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯು ಹೊಸ ದಾಖಲೆಯನ್ನು ಸಿದ್ಧಪಡಿಸಿತು ಮತ್ತು ಯುನೆಸ್ಕೋಗೆ ಸಲ್ಲಿಸಿತು.

”ಶಾಂತಿನಿಕೇತನವನ್ನು ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಿರುವುದು ಸಂತೋಷ ಮತ್ತು ಹೆಮ್ಮೆ” ಎಂದು ಭಾನುವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದರು.

”ನಾವು ಪಶ್ಚಿಮ ಬಂಗಾಳ ಸರ್ಕಾರದಿಂದ ಕಳೆದ 12 ವರ್ಷಗಳಲ್ಲಿ ಅದರ ಮೂಲಸೌಕರ್ಯಕ್ಕೆ ಹೆಚ್ಚಿನ ಗಮನಹರಿಸಿದ್ದೇವೆ. ಇದೀಗ ವಿಶ್ವ ಪಾರಂಪರಿಕ ಸ್ಥಳ ಎಂದು ಗುರುತಿಸಲಾಗಿದೆ. ಬಂಗಾಳ, ಟ್ಯಾಗೋರ್ ಮತ್ತು ಅವರ ಭ್ರಾತೃತ್ವದ ಸಂದೇಶಗಳನ್ನು ಪ್ರೀತಿಸುವ ಎಲ್ಲರಿಗೂ ವಂದನೆಗಳು” ಎಮದು ಹೇಳಿದ್ದಾರೆ.

ಈ ಬೆಳವಣಿಗೆ ಎಲ್ಲಾ ಭಾರತೀಯರಿಗೆ ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...