Homeಮುಖಪುಟರವೀಂದ್ರನಾಥ ಟ್ಯಾಗೋರ್‌ರ 'ಶಾಂತಿನಿಕೇತನ' UNESCOದ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ

ರವೀಂದ್ರನಾಥ ಟ್ಯಾಗೋರ್‌ರ ‘ಶಾಂತಿನಿಕೇತನ’ UNESCOದ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ

- Advertisement -
- Advertisement -

ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರು ತಮ್ಮ ಜೀವನದ ಬಹುಭಾಗವನ್ನು ಕಳೆದ ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನ ಪಟ್ಟಣವನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ.

ಈ ಬಗ್ಗೆ UNESCO ಭಾನುವಾರ X (ಔಪಚಾರಿಕವಾಗಿ Twitter)ನಲ್ಲಿ ಪೋಸ್ಟ್ ಮಾಡಿದ್ದು, ”ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಹೊಸ ಸೇರ್ಪಡೆ: ಭಾರತದ ಶಾಂತಿನಿಕೇತನಗೆ ಅಭಿನಂದನೆಗಳು!” ಬರೆದಿದೆ.

ಕವಿ ಮತ್ತು ತತ್ವಜ್ಞಾನಿ ಟ್ಯಾಗೋರ್ ಅವರಿಂದ 1901ರಲ್ಲಿ ಸ್ಥಾಪಿಸಲ್ಪಟ್ಟ ಶಾಂತಿನಿಕೇತನವು ಪ್ರಾಚೀನ ಭಾರತೀಯ ಸಂಪ್ರದಾಯಗಳ ಆಧಾರದ ಮೇಲೆ ವಸತಿ ಶಾಲೆ ಮತ್ತು ಕಲೆಯ ಕೇಂದ್ರವಾಗಿತ್ತು ಮತ್ತು ಧಾರ್ಮಿಕ ಮತ್ತು ಸಾಂಸ್ಕೃತಿಕ ಗಡಿಗಳನ್ನು ಮೀರಿದ ಮಾನವೀಯತೆ ಮತ್ತು ಏಕತೆಯನ್ನು ಸಾರುತ್ತದೆ.

1921ರಲ್ಲಿ ಶಾಂತಿನಿಕೇತನದಲ್ಲಿ ‘ವಿಶ್ವ ವಿಶ್ವವಿದ್ಯಾನಿಲಯ’ವನ್ನು ಸ್ಥಾಪಿಸಲಾಯಿತು, ಇದು ಮಾನವೀಯತೆಯ ಏಕತೆಯನ್ನು ಅಥವಾ “ವಿಶ್ವ ಭಾರತ” ಎನ್ನುವ ಉದ್ದೇಶವನ್ನು ಪ್ರತಿಪಾದಿಸುತ್ತದೆ. 20ನೇ ಶತಮಾನದ ಆರಂಭದಲ್ಲಿ ಚಾಲ್ತಿಯಲ್ಲಿರುವ ಬ್ರಿಟಿಷ್ ವಸಾಹತುಶಾಹಿ ವಾಸ್ತುಶಿಲ್ಪದ ದೃಷ್ಟಿಕೋನಗಳಿಂದ ಮತ್ತು ಯುರೋಪಿಯನ್ ಆಧುನಿಕತಾವಾದದಿಂದ ಭಿನ್ನವಾಗಿರುವ ಶಾಂತಿನಿಕೇತನವು ಪ್ಯಾನ್-ಏಷ್ಯನ್ ಆಧುನಿಕತೆಯನ್ನು ಪ್ರತಿನಿಧಿಸುತ್ತದೆ, ಇದು ಪ್ರಾಚೀನ, ಮಧ್ಯಕಾಲೀನ ಮತ್ತು ಜಾನಪದ ಸಂಪ್ರದಾಯಗಳನ್ನು ಬಿಂಬಿಸುತ್ತದೆ.

ಬಿರ್ಭುಮ್ ಜಿಲ್ಲೆಯಲ್ಲಿರುವ ಈ ಸಾಂಸ್ಕೃತಿಕ ತಾಣಕ್ಕೆ ಯುನೆಸ್ಕೋ ಟ್ಯಾಗ್ ಪಡೆಯಲು ಭಾರತವು ಬಹಳ ಹಿಂದಿನಿಂದಲೂ ಶ್ರಮಿಸುತ್ತಿದೆ. ಕೆಲವು ತಿಂಗಳ ಹಿಂದೆ, ಅಂತರಾಷ್ಟ್ರೀಯ ಸಲಹಾ ಸಂಸ್ಥೆ ICOMOS ನಿಂದ UNESCO ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ: ಏಷ್ಯಾ ಕಪ್‌ ಫೈನಲ್: ಭಾರತಕ್ಕೆ ರೋಚಕ ಗೆಲುವು

ಶಾಂತಿನಿಕೇತನವು ಮೂಲತಃ ದೇಬೇಂದ್ರನಾಥ ಟ್ಯಾಗೋರ್ ನಿರ್ಮಿಸಿದ ಆಶ್ರಮವಾಗಿತ್ತು, ಅಲ್ಲಿ ಜಾತಿ ಮತ್ತು ಧರ್ಮದ ಭೇದವಿಲ್ಲದೆ ಯಾರಾದರೂ ಬಂದು ಒಬ್ಬನೇ ಪರಮಾತ್ಮನನ್ನು ಧ್ಯಾನಿಸಲು ಸಮಯ ಕಳೆಯಬಹುದು. ” ಯುನೆಸ್ಕೋ ವಿಶ್ವ ಪರಂಪರೆಯ ಕೇಂದ್ರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಥಳದ ವಿವರಣೆಯ ಪ್ರಕಾರ. ಇದು ನಂತರ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ್ ಠಾಗೂರ್ ಅವರ ಮನೆಯಾಯಿತು.

ಕವಿ ರವೀಂದ್ರನಾಥರ ತಂದೆಯಾಗಿದ್ದ ದೇಬೇಂದ್ರನಾಥ್ ಅವರನ್ನು ಮಹರ್ಷಿ ಎಂದೂ ಕರೆಯಲಾಗುತ್ತಿತ್ತು (ಅಂದರೆ ಸಂತ ಮತ್ತು ಋಷಿ ಎರಡೂ ಆಗಿರುವವರು), ಭಾರತೀಯ ನವೋದಯದ ಪ್ರಮುಖ ವ್ಯಕ್ತಿಯಾಗಿದ್ದರು.

2010ರಲ್ಲಿ ಕೇಂದ್ರವು ಶಾಂತಿನಿಕೇತನಕ್ಕೆ ವಿಶ್ವ ಪರಂಪರೆಯ ಟ್ಯಾಗ್ ಪಡೆಯಲು ಪ್ರಯತ್ನಿಸಿತು. ಇದು 2021 ರಲ್ಲಿ ಮತ್ತೆ ತನ್ನ ಅಭಿಯಾನವನ್ನು ಪ್ರಾರಂಭಿಸಿತು ಮತ್ತು ವಿಶ್ವ ಭಾರತಿ ಅಧಿಕಾರಿಗಳ ಸಹಾಯದಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯು ಹೊಸ ದಾಖಲೆಯನ್ನು ಸಿದ್ಧಪಡಿಸಿತು ಮತ್ತು ಯುನೆಸ್ಕೋಗೆ ಸಲ್ಲಿಸಿತು.

”ಶಾಂತಿನಿಕೇತನವನ್ನು ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಿರುವುದು ಸಂತೋಷ ಮತ್ತು ಹೆಮ್ಮೆ” ಎಂದು ಭಾನುವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದರು.

”ನಾವು ಪಶ್ಚಿಮ ಬಂಗಾಳ ಸರ್ಕಾರದಿಂದ ಕಳೆದ 12 ವರ್ಷಗಳಲ್ಲಿ ಅದರ ಮೂಲಸೌಕರ್ಯಕ್ಕೆ ಹೆಚ್ಚಿನ ಗಮನಹರಿಸಿದ್ದೇವೆ. ಇದೀಗ ವಿಶ್ವ ಪಾರಂಪರಿಕ ಸ್ಥಳ ಎಂದು ಗುರುತಿಸಲಾಗಿದೆ. ಬಂಗಾಳ, ಟ್ಯಾಗೋರ್ ಮತ್ತು ಅವರ ಭ್ರಾತೃತ್ವದ ಸಂದೇಶಗಳನ್ನು ಪ್ರೀತಿಸುವ ಎಲ್ಲರಿಗೂ ವಂದನೆಗಳು” ಎಮದು ಹೇಳಿದ್ದಾರೆ.

ಈ ಬೆಳವಣಿಗೆ ಎಲ್ಲಾ ಭಾರತೀಯರಿಗೆ ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...