Homeಮುಖಪುಟಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

- Advertisement -
- Advertisement -

ದೇಶದ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ನೇಮಕವಾಗಿದ್ದಾರೆ. ಶಿಕ್ಷಣ ಸಚಿವಾಲಯ ಈ ಹುದ್ದೆಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಿಸಿ ಆದೇಶಿಸಿದೆ. ಇವರ ನೇಮಕದ ಬಗ್ಗೆ ಪರ ವಿರೋಧ ಚರ್ಚೆ ಆರಂಭವಾಗಿದೆ.

ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿರುವ 59 ವರ್ಷ ವಯಸ್ಸಿನ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಜೆಎನ್‌ಯುನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇಲ್ಲಿಯೇ ಅವರು ತಮ್ಮ ಎಂಫಿಲ್ ಮತ್ತು ಪಿಎಚ್‌ಡಿ ಮುಗಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ಜೆಎನ್‌ಯು ಉಪಕುಲಪತಿಯಾಗಿ ನೇಮಕ ಮಾಡಲು ಅನುಮೋದಿಸಿದ್ದಾರೆ. ಅವರ ನೇಮಕವು ಐದು ವರ್ಷಗಳ ಅವಧಿಗೆ ಇರುತ್ತದೆ ಎಂದು ಶಿಕ್ಷಣ ಸಚಿವಾಲಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ, ಪಾಠವಿಲ್ಲ

ಶಾಂತಿಶ್ರೀ ಧೂಳಿಪುಡಿ ಪಂಡಿತ್ 1988 ರಲ್ಲಿ ಗೋವಾ ವಿಶ್ವವಿದ್ಯಾನಿಲಯದಲ್ಲಿ ಮೊದಲು ತಮ್ಮ ಬೋಧನಾ ವೃತ್ತಿಯನ್ನು ಪ್ರಾರಂಭಿಸಿದರು. ಬಳಿಕ 1993 ರಲ್ಲಿ ಪುಣೆ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಶಾಂತಿಶ್ರೀ ಧೂಳಿಪುಡಿ ಪಂಡಿತ್ ತಮ್ಮ ವೃತ್ತಿಜೀವನದಲ್ಲಿ ಅವರು 29 ಪಿಎಚ್‌ಡಿ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಸ್ಥಾನವನ್ನು ಪಡೆದು ಕೆಲಸ ನಿರ್ವಹಿಸಿರುವ ಇವರು,  ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC), ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ICSSR) ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಸಂದರ್ಶಕರ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.

ಕಳೆದ ವರ್ಷ ಐದು ವರ್ಷಗಳ ಅವಧಿ ಮುಗಿದ ನಂತರ ಜೆಎನ್‌ಯುನಲ್ಲಿ ಹಂಗಾಮಿ ವಿಸಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ ಜಗದೇಶ್ ಕುಮಾರ್ ಅವರನ್ನು ಕಳೆದ ವಾರ ಯುಜಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಇದನ್ನೂ ಓದಿ: ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ಇತ್ತ, ಶಾಂತಿಶ್ರೀ ಧೂಳಿಪುಡಿ ಪಂಡಿತ್ ನೇಮಕಕ್ಕೆ ಪರ ವಿರೋಧ ಚರ್ಚೆಗಳು ಆರಂಭವಾಗಿವೆ. ಗೋಡ್ಸೆ ಪರವಾಗಿ, ಐತಿಹಾಸಿಕ ರೈತ ಹೋರಾಟದ ಸಂದರ್ಭದಲ್ಲಿ ರೈತರನ್ನು ದಲ್ಲಾಳಿಗಳೆಂದು ಅವರು ಮಾಡಿದ್ದ ಹಳೆಯ ಟ್ವೀಟ್‌ಗಳನ್ನು ಕೆದಕಿರುವ ಹಲವು ಮಂದಿ, ಜೆಎನ್‌ಯುನಲ್ಲಿ ಗೋಡ್ಸೆ ಕುರಿತ ಹೊಸ ಕೋರ್ಸ್ ಆರಂಭವಾಗದಿದ್ದರೆ ಸಾಕು ಎಂದಿದ್ದಾರೆ.

ನೂತನ ಉಪಕುಲಪತಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ನಡೆಯುತ್ತಿದ್ದ ರೈತ ಹೋರಾಟದ ಸಂದರ್ಭದಲ್ಲಿ  ರೈತರನ್ನು ದಲ್ಲಾಳಿಗಳು ಎಂದು ಕರೆದು ಅವಮಾನಿಸಿದ್ದ ಟ್ವೀಟ್‌ ಅನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...