Homeಕರ್ನಾಟಕಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

ಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌‌ ಪಾಟೀಲ್‌‌ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದಲ್ಲಿ ಗುರುವಾರ ಘೋಷಿಸಿದ್ದಾರೆ. “ಪ್ರಕರಣದಲ್ಲಿ ನನ್ನದೇನಾದರೂ ಒಂದು ಶೇಖಡ ತಪ್ಪಿದ್ದರೂ ನನ್ನ ಮನೆ ದೇವರು ನನಗೆ ಶಿಕ್ಷೆ ನೀಡಲಿ. ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕಾರ್ಯಕ್ಷೇತ್ರವಾದ ಶಿವಮೊಗ್ಗದಲ್ಲಿ ದಿಢೀರ್‌‌ ಸುದ್ದಿಗೋಷ್ಠಿ ಕರೆದು ಮಾತನಾಡಿರುವ ಈಶ್ವರಪ್ಪ, “ಪ್ರಕರಣದ ವಿಚಾರದಲ್ಲಿ ಪಕ್ಷದ ಹಿರಿಯರಿಗೆ, ಮುಖ್ಯಮಂತ್ರಿಗಳಿಗೆ, ರಾಷ್ಟ್ರೀಯ ನಾಯಕರುಗಳಿಗೆ ಇರುಸುಮುರುಸು ಆಗಬಾರದು. ಈ ಒಂದೇ ಕಾರಣಕ್ಕೆ ನಾನು ರಾಜೀನಾಮೆ ಕೊಡುತ್ತಿದ್ದೇನೆ. ಈ ವಿಷಯದ ಬಗ್ಗೆ ನಾನು ಮುಖ್ಯಮಂತ್ರಿಗೆ ಈಗಾಗಲೇ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಳೆ ಸಂಜೆ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತಾ ಇದ್ದೇನೆ. ಇಲ್ಲಿ ತನಕ ಸಹಕಾರ ಕೊಟ್ಟಂತಹ ಮುಖ್ಯಮಂತ್ರಿಗಳಿಗೆ ಹಾಗೂ ಎಲ್ಲಾ ಸ್ನೇಹಿತರಿಗೆ ಅಭಿನಂಧನೆ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

“ನಾನು ದೇವರನ್ನು ನಂಬುವವನು, ಪ್ರಕರಣದ ಬಗ್ಗೆ ನನಗೆ ಪೂರ್ಣ ವಿಶ್ವಾವಿದೆ.  ಈ ಇಡೀ ಎಪಿಸೋಡಲ್ಲಿ ಒಂದೇ ಒಂದು ಪರ್ಸೆಂಟ್ ನನ್ನದೇನಾದರೂ ತಪ್ಪಿದ್ದರೆ, ಆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ. ಪ್ರಕರಣದಲ್ಲಿ ನಾನು ಮುಕ್ತವಾಗಿ ಹೊರಬರುತ್ತೇನೆ ಎಂದು ನನಗೆ ಪೂರ್ಣ ನಂಬಿಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಗೆ ಹೇಳಿದಾಗ ಅವರು ಕೂಡಾ ಸಂತೋಷದಿಂದ ತನಿಖೆ ಮಾಡುತ್ತೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮನೆ ದೇವರಾದ ಚೌಡೇಶ್ವರಿ ನಾನು ತಪ್ಪಿತಸ್ಥ ಅಲ್ಲ ಎಂದು ನಿರ್ದೋಷಿಯಾಗಿ ನನ್ನನ್ನು ಹೊರ ತರುತ್ತಾಳೆ” ಎಂದು ಈಶ್ವರಪ್ಪ ಹೇಳಿದ್ದಾರೆ.

“ನನಗೆ ಸಹಕಾರ ಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ಅಭಿನಂಧನೆ ಅರ್ಪಿಸುತ್ತೇನೆ. ಗ್ರಾಮೀಣಾಭಿವೃದ್ದಿ ಇಲಾಖೆ ಸಿಕ್ಕಿದ್ದು ನನ್ನ ಸೌಭಾಗ್ಯ. ಇಲಾಖೆಯಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಪ್ರಕರಣದಲ್ಲಿ ಯಾರಿಗೂ ಇರಿಸುಮುರಿಸು ಮಾಡಲು ಇಷ್ಟವಿಲ್ಲ. ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಸಾಬೀತಾಗಲಿ” ಎಂದು ಹೇಳಿದ್ದಾರೆ.

ಈಶ್ವರಪ್ಪ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌‌, “ಸುಳ್ಳು ಕಂಪೆನಿಯ ಚೇರ್ಮನ್ ಆಗಿರುವ ಈಶ್ವರಪ್ಪ ರಾಜೀನಾಮೆ ನೀಡಿದರೆ ಸಾಲದು. ಸಂತೋಷ್ ಸಾವು ಪ್ರಕರಣದಲ್ಲಿ ಅವರನ್ನು ಬಂಧಿಸಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು” ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಗೆ ಸಿದ್ದರಾಮಯ್ಯ ಜೊತೆಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂತೋಷ್ 40% ಕಮಿಷನ್ ಆರೋಪ ಮಾಡಿದ ದಿನದಿಂದ ಆತ ಯಾರು ಎಂದೇ ನನಗೆ ಗೊತ್ತಿಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಲೇ ಇದ್ದರು. ಇಂದು ತಮ್ಮ ವಿರುದ್ಧ ಪ್ರತಿಭಟನೆ ಚುರುಕಾಗಿದೆ ಎಂಬುದು ತಿಳಿದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದರೆ ಸಾಲದು ಅವರನ್ನು ಕೂಡಲೇ ಬಂಧಿಸಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....