Homeಕರ್ನಾಟಕಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

ಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌‌ ಪಾಟೀಲ್‌‌ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದಲ್ಲಿ ಗುರುವಾರ ಘೋಷಿಸಿದ್ದಾರೆ. “ಪ್ರಕರಣದಲ್ಲಿ ನನ್ನದೇನಾದರೂ ಒಂದು ಶೇಖಡ ತಪ್ಪಿದ್ದರೂ ನನ್ನ ಮನೆ ದೇವರು ನನಗೆ ಶಿಕ್ಷೆ ನೀಡಲಿ. ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕಾರ್ಯಕ್ಷೇತ್ರವಾದ ಶಿವಮೊಗ್ಗದಲ್ಲಿ ದಿಢೀರ್‌‌ ಸುದ್ದಿಗೋಷ್ಠಿ ಕರೆದು ಮಾತನಾಡಿರುವ ಈಶ್ವರಪ್ಪ, “ಪ್ರಕರಣದ ವಿಚಾರದಲ್ಲಿ ಪಕ್ಷದ ಹಿರಿಯರಿಗೆ, ಮುಖ್ಯಮಂತ್ರಿಗಳಿಗೆ, ರಾಷ್ಟ್ರೀಯ ನಾಯಕರುಗಳಿಗೆ ಇರುಸುಮುರುಸು ಆಗಬಾರದು. ಈ ಒಂದೇ ಕಾರಣಕ್ಕೆ ನಾನು ರಾಜೀನಾಮೆ ಕೊಡುತ್ತಿದ್ದೇನೆ. ಈ ವಿಷಯದ ಬಗ್ಗೆ ನಾನು ಮುಖ್ಯಮಂತ್ರಿಗೆ ಈಗಾಗಲೇ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಳೆ ಸಂಜೆ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತಾ ಇದ್ದೇನೆ. ಇಲ್ಲಿ ತನಕ ಸಹಕಾರ ಕೊಟ್ಟಂತಹ ಮುಖ್ಯಮಂತ್ರಿಗಳಿಗೆ ಹಾಗೂ ಎಲ್ಲಾ ಸ್ನೇಹಿತರಿಗೆ ಅಭಿನಂಧನೆ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

“ನಾನು ದೇವರನ್ನು ನಂಬುವವನು, ಪ್ರಕರಣದ ಬಗ್ಗೆ ನನಗೆ ಪೂರ್ಣ ವಿಶ್ವಾವಿದೆ.  ಈ ಇಡೀ ಎಪಿಸೋಡಲ್ಲಿ ಒಂದೇ ಒಂದು ಪರ್ಸೆಂಟ್ ನನ್ನದೇನಾದರೂ ತಪ್ಪಿದ್ದರೆ, ಆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ. ಪ್ರಕರಣದಲ್ಲಿ ನಾನು ಮುಕ್ತವಾಗಿ ಹೊರಬರುತ್ತೇನೆ ಎಂದು ನನಗೆ ಪೂರ್ಣ ನಂಬಿಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಗೆ ಹೇಳಿದಾಗ ಅವರು ಕೂಡಾ ಸಂತೋಷದಿಂದ ತನಿಖೆ ಮಾಡುತ್ತೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮನೆ ದೇವರಾದ ಚೌಡೇಶ್ವರಿ ನಾನು ತಪ್ಪಿತಸ್ಥ ಅಲ್ಲ ಎಂದು ನಿರ್ದೋಷಿಯಾಗಿ ನನ್ನನ್ನು ಹೊರ ತರುತ್ತಾಳೆ” ಎಂದು ಈಶ್ವರಪ್ಪ ಹೇಳಿದ್ದಾರೆ.

“ನನಗೆ ಸಹಕಾರ ಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ಅಭಿನಂಧನೆ ಅರ್ಪಿಸುತ್ತೇನೆ. ಗ್ರಾಮೀಣಾಭಿವೃದ್ದಿ ಇಲಾಖೆ ಸಿಕ್ಕಿದ್ದು ನನ್ನ ಸೌಭಾಗ್ಯ. ಇಲಾಖೆಯಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಪ್ರಕರಣದಲ್ಲಿ ಯಾರಿಗೂ ಇರಿಸುಮುರಿಸು ಮಾಡಲು ಇಷ್ಟವಿಲ್ಲ. ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಸಾಬೀತಾಗಲಿ” ಎಂದು ಹೇಳಿದ್ದಾರೆ.

ಈಶ್ವರಪ್ಪ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌‌, “ಸುಳ್ಳು ಕಂಪೆನಿಯ ಚೇರ್ಮನ್ ಆಗಿರುವ ಈಶ್ವರಪ್ಪ ರಾಜೀನಾಮೆ ನೀಡಿದರೆ ಸಾಲದು. ಸಂತೋಷ್ ಸಾವು ಪ್ರಕರಣದಲ್ಲಿ ಅವರನ್ನು ಬಂಧಿಸಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು” ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಗೆ ಸಿದ್ದರಾಮಯ್ಯ ಜೊತೆಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂತೋಷ್ 40% ಕಮಿಷನ್ ಆರೋಪ ಮಾಡಿದ ದಿನದಿಂದ ಆತ ಯಾರು ಎಂದೇ ನನಗೆ ಗೊತ್ತಿಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಲೇ ಇದ್ದರು. ಇಂದು ತಮ್ಮ ವಿರುದ್ಧ ಪ್ರತಿಭಟನೆ ಚುರುಕಾಗಿದೆ ಎಂಬುದು ತಿಳಿದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದರೆ ಸಾಲದು ಅವರನ್ನು ಕೂಡಲೇ ಬಂಧಿಸಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...