Homeಕರ್ನಾಟಕಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ...

ಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

- Advertisement -
- Advertisement -

ಸಚಿವ ಈಶ್ವರಪ್ಪ ವಿರುದ್ದ ಲಂಚ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌ ಪಾಟೀಲ್ ಸಾವಿನ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, “ಮೃತ ಸಂತೋಷ್ ಬರೆದಿರುವ ಡೆತ್‌ನೋಟ್‌ ಕುರಿತು ನನಗೆ ಯಾವುದೆ ಮಾಹಿತಿ ಇಲ್ಲ. ಬಹುಷಃ ಅದು ಡೆತ್‌ನೋಟ್‌ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್  ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್‌ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎಂದು ವರದಿಯಾಗಿದ್ದು, ಈ ಡೆತ್‌ ನೋ‌ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಅವರು ನೇರವಾಗಿಯೆ, “ನನ್ನ ಸಾವಿಗೆ ಈಶ್ವರಪ್ಪ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ಇದರ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ, “ಡೆತ್ ನೋಟ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡೆತ್‌ ನೋಟ್‌ ಇದೆಯೋ ಇಲ್ಲವೊ ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್​ನೋಟ್ ಅಲ್ಲ ಎನ್ನಿಸುತ್ತದೆ” ಎಂದು ಹೇಳಿದ್ದಾರೆ.

“ಆರೋಪ ಮಾಡೋದು, ಸಾಬೀತು ಮಾಡೋದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ” ಎಂದು ಆರಗ ಅವರು ಹೇಳಿದ್ದಾರೆ.

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....